AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗಷ್ಟೇ ಓದು ಮುಗಿಸಿರುವ ಹೈದರಾಬಾದ್​ ಹುಡುಗಿಗೆ 2 ಕೋಟಿ ರೂಪಾಯಿ ಸಂಬಳದ ಕೆಲಸ ನೀಡಿದ ಮೈಕ್ರೋಸಾಫ್ಟ್

ಹೈದರಾಬಾದ್​ನ ಯುವತಿಯೊಬ್ಬಳಿಗೆ ಸಾಫ್ಟ್​ವೇರ್ ದಿಗ್ಗಜ ಮೈಕ್ರೋಸಾಫ್ಟ್ ಸಂಸ್ಥೆ ವಾರ್ಷಿಕ 2ಕೋಟಿ ರೂಪಾಯಿ ಸಂಬಳ ನೀಡುವುದಾಗಿ ಹೇಳಿ ಕೆಲಸ ನೀಡಿದೆ. ದೀಪ್ತಿ ನಾರ್ಕುತಿ ಅವರ ತಂದೆ ಡಾ.ವೆಂಕಣ್ಣ ಹೈದರಾಬಾದ್ ಪೊಲೀಸ್ ಇಲಾಖೆಯಲ್ಲಿ ಫೊರೆನ್ಸಿಕ್​ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈಗಷ್ಟೇ ಓದು ಮುಗಿಸಿರುವ ಹೈದರಾಬಾದ್​ ಹುಡುಗಿಗೆ 2 ಕೋಟಿ ರೂಪಾಯಿ ಸಂಬಳದ ಕೆಲಸ ನೀಡಿದ ಮೈಕ್ರೋಸಾಫ್ಟ್
ವಾರ್ಷಿಕ ₹2ಕೋಟಿ ಸಂಬಳ ಗಿಟ್ಟಿಸಿಕೊಂಡ ದೀಪ್ತಿ
Skanda
|

Updated on: May 20, 2021 | 1:16 PM

Share

ಹೈದರಾಬಾದ್: ಕೊರೊನಾ ಬಂದ ನಂತರ ಕೆಲಸ ಗಿಟ್ಟಿಸಿಕೊಳ್ಳುವುದು ಮೊದಲಿನಷ್ಟು ಸುಲಭವಿಲ್ಲ. ಎಷ್ಟೇ ಬುದ್ಧಿವಂತಿಕೆಯಿದ್ದರೂ ಅವಕಾಶದ ಬಾಗಿಲುಗಳು ತೆರೆಯದೇ ಅನೇಕರು ನಿರುದ್ಯೋಗಿಗಳಾಗಿ ಉಳಿದಿದ್ದಾರೆ. ಇನ್ನು ಕೆಲವರು ಕೈ ತುಂಬಾ ಸಂಬಳ ನೀಡುವ ಒಳ್ಳೆಯ ಕೆಲಸವನ್ನು ಕಳೆದುಕೊಂಡು ಅನಿವಾರ್ಯವಾಗಿ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದಾರೆ. ಇಂತಹ ಕಾಲದಲ್ಲಿ ಹೈದರಾಬಾದ್​ನ ಯುವತಿಯೊಬ್ಬಳಿಗೆ ಸಾಫ್ಟ್​ವೇರ್ ದಿಗ್ಗಜ ಮೈಕ್ರೋಸಾಫ್ಟ್ ಸಂಸ್ಥೆ ವಾರ್ಷಿಕ 2ಕೋಟಿ ರೂಪಾಯಿ ಸಂಬಳ ನೀಡುವುದಾಗಿ ಹೇಳಿ ಕೆಲಸ ನೀಡಿದೆ. ಹೈದರಾಬಾದ್ ಮೂಲದ ದೀಪ್ತಿ ನಾರ್ಕುತಿ ಎಂಬ ಯುವತಿಗೆ ಇಷ್ಟು ದೊಡ್ಡ ಮಟ್ಟದ ಕೆಲಸ ಸಿಕ್ಕಿದ್ದು, ಆಕೆ ತನ್ನ ಲಿಂಕ್ಡ್​ ಇನ್​ ಖಾತೆಯಲ್ಲಿ ಹೇಳಿಕೊಂಡಿರುವಂತೆ ಮೈಕ್ರೋಸಾಫ್ಟ್​ನಲ್ಲಿ ಸಾಫ್ಟ್​ವೇರ್ ಡೆವಲಪ್​ಮೆಂಟ್ ಆಫೀಸರ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

ಅಮೆರಿಕಾ ದೇಶದ ಸಿಯಾಟಲ್​ನಲ್ಲಿ ಇರುವ ಮೈಕ್ರೋಸಾಫ್ಟ್ ಸಂಸ್ಥೆಯ ಪ್ರಧಾನ ಕಾರ್ಯಾಲಯದಲ್ಲಿ ದೀಪ್ತಿ ಕೆಲಸ ಮಾಡಲಿದ್ದು, ಓದು ಮುಗಿಸುತ್ತಿದ್ದಂತೆಯೇ ಭಾರೀ ವೇತನದ ಕೆಲಸ ಸಿಕ್ಕಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ. ಫ್ಲಾರಿಡಾ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ ದೀಪ್ತಿ ಗಣಕ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ವಿದ್ಯಾಭ್ಯಾಸ ಮುಗಿಸುವ ಮುನ್ನವೇ ಆಕೆಗೆ ಅತ್ಯುನ್ನತ ಕಂಪೆನಿಗಳಿಂದ ಆಫರ್ ಬಂದಿತ್ತು ಎನ್ನಲಾಗಿದೆ. ಅಮೆಜಾನ್, ಗೋಲ್ಡ್​ಮನ್, ಸಚ್ಸ್​ನಂತಹ ಸಂಸ್ಥೆಗಳು ಭಾರೀ ವೇತನದ ಕೆಲಸ ನೀಡುವುದಾಗಿ ಹೇಳಿದ್ದವು. ಕ್ಯಾಂಪಸ್ ಸಂದರ್ಶನದಲ್ಲಿ ಪಾಲ್ಗೊಂಡಿದ್ದ ಸುಮಾರು 300 ವಿದ್ಯಾರ್ಥಿಗಳ ಪೈಕಿ ದೀಪ್ತಿ ವಾರ್ಷಿಕ 2 ಕೋಟಿ ರೂಪಾಯಿ ವೇತನ ನೀಡುವ ದೊಡ್ಡ ಮಟ್ಟದ ಕೆಲಸಕ್ಕೆ ಆಯ್ಕೆಯಾಗಿದ್ದಾರೆ.

ಈ ಹಿಂದೆ 2014-15ರಲ್ಲಿ ಮೈಕ್ರೋಸಾಫ್ಟ್​ನಲ್ಲಿ ಸ್ಟುಡೆಂಟ್ ಅಸೋಸಿಯೇಟ್ ಆಗಿ ಕೆಲಸ ಮಾಡಿದ್ದ ಅನುಭವ ಹೊಂದಿರುವ ದೀಪ್ತಿ ಮೇ.17ರಿಂದ ತಮ್ಮ ಔದ್ಯೋಗಿಕ ಜೀವನ ಆರಂಭಿಸಿದ್ದಾರೆ. ಹೈದರಾಬಾದ್​ನ ಒಸ್ಮಾನಿಯ ವಿಶ್ವವಿದ್ಯಾಲಯದಲ್ಲಿ ಬಿಟೆಕ್​ ಪದವಿ ಪೂರೈಸಿದ್ದ ದೀಪ್ತಿ, ಜೆಪಿ ಮಾರ್ಗನ್​ನಲ್ಲಿ ಕೆಲಸಕ್ಕೆ ಸೇರಿದ್ದರು. ಬಳಿಕ ಓದುವ ಆಸಕ್ತಿ ತೋರಿಸಿ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಅವರು ಉನ್ನತ ವ್ಯಾಸಂಗಕ್ಕೆ ಅಮೆರಿಕಾಕ್ಕೆ ಹೋಗಿದ್ದರು. ದೀಪ್ತಿ ನಾರ್ಕುತಿ ಅವರ ತಂದೆ ಡಾ.ವೆಂಕಣ್ಣ ಹೈದರಾಬಾದ್ ಪೊಲೀಸ್ ಇಲಾಖೆಯಲ್ಲಿ ಫೊರೆನ್ಸಿಕ್​ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: OYO ಸಿಬ್ಬಂದಿಗೆ ವಾರದಲ್ಲಿ 4 ದಿನ ಕೆಲಸ, ಬೇಕೆಂದಾಗ ಬೇಕಾದಷ್ಟು ಸಂಬಳ ಸಹಿತ ರಜಾ ಘೋಷಣೆ 

ಬೀದಿಯಲ್ಲಿ ಪೋಸ್ಟರ್​ ಹಚ್ಚುತ್ತಿದ್ದ ಆಮೀರ್​ ಖಾನ್​ ವಿಡಿಯೋ ವೈರಲ್​; ಅಂದು ಸಿಗುತ್ತಿದ್ದ ಸಂಬಳ ಎಷ್ಟು?

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು