AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಭಾರತ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಖುಷಿಯಲ್ಲಿ ರಸ್ತೆಗಿಳಿದು ಸಂಭ್ರಮಾಚರಣೆ ಮಾಡಿದ ಅಭಿಮಾನಿಗಳ ಮೇಲೆ ಲಾಠಿ ಬೀಸಿದ ಪೊಲೀಸರು

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ಸ್‌ ಟ್ರೋಫಿ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಟ್ರೋಫಿ ಗೆದ್ದ ಖುಷಿಗೆ ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದ್ದು, ಇಲ್ಲೊಂದು ಕಡೆ ರಸ್ತೆಗಿಳಿದು ಭಾರತ ತಂಡದ ಗೆಲುವನ್ನು ಸಂಭ್ರಮಿಸಿದ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ. ಈ ದೃಶ್ಯ ಇದೀಗ ವೈರಲ್‌ ಆಗಿದ್ದು, ಪೊಲೀಸರ ವರ್ತನೆಗೆ ನೆಟ್ಟಿಗರು ಫುಲ್‌ ಗರಂ ಆಗಿದ್ದಾರೆ.

Viral: ಭಾರತ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಖುಷಿಯಲ್ಲಿ ರಸ್ತೆಗಿಳಿದು ಸಂಭ್ರಮಾಚರಣೆ ಮಾಡಿದ ಅಭಿಮಾನಿಗಳ ಮೇಲೆ ಲಾಠಿ ಬೀಸಿದ ಪೊಲೀಸರು
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Mar 10, 2025 | 10:42 AM

Share

ಹೈದರಾಬಾದ್‌, ಮಾ.10: ದುಬೈನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ತಂಡದ ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ಭಾರತ ತಂಡ ಚಾಂಪಿಯನ್‌ (India Champions) ಆಗಿ ಹೊರ ಹೊಮ್ಮಿದೆ. ಭಾರತ ತಂಡವು ನ್ಯೂಜಿಲೆಂಡ್‌ ತಂಡವನ್ನು ನಾಲ್ಕು 4 ವಿಕೆಟ್‌ಗಳಿಂದ ಸೋಲಿಸಿ ಚಾಂಪಿಯನ್ಸ್‌ ಟ್ರೋಫಿ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಟೀಂ ಇಂಡಿಯಾ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಖುಷಿಗೆ ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದ್ದು, ಕ್ರಿಕೆಟ್‌ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಅದೇ ರೀತಿ ಹೈದರಾಬಾದ್‌ ಕ್ರಿಕೆಟ್‌ ಅಭಿಮಾನಿಗಳು ರಸ್ತೆಗಿಳಿದು ಗೆಲುವನ್ನು ಸಂಭ್ರಮಿಸಿದ್ದು, ಸಂಭ್ರಮಾಚರಣೆಯಲ್ಲಿದ್ದ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ಪೊಲೀಸರ ವರ್ತನೆಗೆ ನೆಟ್ಟಿಗರು ಫುಲ್‌ ಗರಂ ಆಗಿದ್ದಾರೆ.

ಈ ಘಟನೆ ಹೈದರಾಬಾದ್‌ನ ದಿಲ್‌ಸುಖ್‌ ನಗರದಲ್ಲಿ ನಡೆದಿದ್ದು, ಭಾರತ ತಂಡ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಖುಷಿಯಲ್ಲಿ ರಸ್ತೆಗಿಳಿದು ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ.

ಇದನ್ನೂ ಓದಿ
Image
ಈಜುಕೊಳದಲ್ಲಿ ಪಲ್ಟಿ ಹೊಡೆದ 84 ರ ಹರೆಯದ ಅಜ್ಜಿ
Image
ಕುದುರೆಗೆ ಬಲವಂತವಾಗಿ ಸಿಗರೇಟ್ ಸೇದಿಸಿದ ಯುವಕರು
Image
ಚರಂಡಿಯಲ್ಲಿ ಸಿಲುಕಿದ್ದ ಹಸುವನ್ನು ರಕ್ಷಿಸಿದ ಹೃದಯವಂತ
Image
ಲೈಫ್​​ನ್ನು ಬ್ಯಾಚುರಲ್ ಇದ್ದಾಗಲೇ ಎಂಜಾಯ್ ಮಾಡಿ ಎಂದ ಪೊಲೀಸ್

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವರದಿಗಳ ಪ್ರಕಾರ ಅಭಿಮಾನಿಗಳು ರಸ್ತೆಗಿಳಿದು ಪಟಾಕಿ ಸಿಡಿಸಿ, ಡ್ಯಾನ್ಸ್‌ ಮಾಡುವ ಮೂಲಕ ಟೀಂ ಇಂಡಿಯಾದ ಗೆಲುವನ್ನು ಸಂಭ್ರಮಿಸಿದ್ದು, ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಕಾರಣ ಸಂಚಾರ ದಟ್ಟಣೆ ಉಂಟಾಗಿದೆ. ಈ ಸಂದರ್ಭದಲ್ಲಿ ಇದನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣ ರಸ್ತೆಗಿಳಿದ ಅಭಿಮಾನಿಗಳ ಮೇಲೆ ಹೈದರಾಬಾದ್‌ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.

ಈ ಕುರಿತ ವಿಡಿಯೋವನ್ನು TeluguScribe ಹೆಸರಿನ ಎಕ್ಸ್‌ ಖಾತೆಯಲ್ಲಿ ಶೇರ್‌ ಮಾಡಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಟೀಂ ಇಂಡಿಯಾದ ಗೆಲುವನ್ನು ಸಂಭ್ರಮಿಸುವ ಸಲುವಾಗಿ ರಸ್ತೆಗಿಳಿದ ಕ್ರಿಕೆಟ್‌ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿ ಒದ್ದೋಡಿಸುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಚಿಕನ್‌ ಮೂಳೆ ಗಂಟಲಲ್ಲಿ ಸಿಲುಕಿ ಪರದಾಡಿದ ಮಹಿಳೆ; ನಾನ್‌ವೆಜ್‌ ಪ್ರಿಯರೇ ಬಿರಿಯಾನಿ ತಿನ್ನೋ ಮುನ್ನ ಜೋಪಾನ

ಮಾರ್ಚ್‌ 09 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.2 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಗೆಲುವನ್ನು ಸಂಭ್ರಮಿಸುವುದರಲ್ಲಿ ತಪ್ಪೇನಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಅಲ್ಲ ಅವರೇನು ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ್ದೇ? ಪೊಲೀಸರ ವರ್ತನೆ ಸರಿಯಿಲ್ಲʼ ಎಂದು ಕಿಡಿ ಕಾರಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಿಮ್ಮ ಆಚರಣೆ, ಸಂಭ್ರಮ ಇತರರಿಗೆ ತೊಂದರೆಯಾಗದಂತೆ ಇರಲಿʼ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?