AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀಫ್ ಹ್ಯಾಪಿನೆಸ್ ಆಫೀಸರ್ ಆಗಿ ನೇಮಕಗೊಂಡ ಶ್ವಾನ, ಇದು ವಿಶೇಷ ಹುದ್ದೆ

ಸಾಮಾನ್ಯವಾಗಿ ಕಂಪನಿಯೂ ಹೊಸ ಉದ್ಯೋಗಿಯನ್ನು ನೇಮಕ ಮಾಡಿಕೊಳ್ಳುತ್ತಾರೆ ಎಂದಾದರೆ ಅಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಆ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿರುವುದು ಸಹಜ. ಆದರೆ ಕಂಪನಿಯೊಂದು ವಿಶೇಷ ಹುದ್ದೆಗೆ ಆಯ್ಕೆ ಮಾಡಿಕೊಂಡಿರುವುದು ವ್ಯಕ್ತಿಯನ್ನಲ್ಲ ಬದಲಾಗಿ ಶ್ವಾನವನ್ನು. ಹೌದು, ಕಂಪನಿಯೊಂದು ಶ್ವಾನವೊಂದನ್ನು ಚೀಪ್ ಹ್ಯಾಪಿನೆಸ್ ಆಫೀಸರ್ ಆಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಹಾಗಾದ್ರೆ ಈ ಶ್ವಾನ ಏನಪ್ಪಾ ಕೆಲಸ ಮಾಡಲು ಸಾಧ್ಯ ಎನ್ನುವ ಪ್ರಶ್ನೆಯೊಂದು ನಿಮ್ಮ ಮನಸ್ಸಿನಲ್ಲಿ ಮೂಡಿರಬಹುದು. ಈ ಕುರಿತಾದ ಕುತೂಹಲಕಾರಿ ಮಾಹಿತಿ ಇಲ್ಲಿದೆ.

ಚೀಫ್ ಹ್ಯಾಪಿನೆಸ್ ಆಫೀಸರ್ ಆಗಿ ನೇಮಕಗೊಂಡ ಶ್ವಾನ, ಇದು ವಿಶೇಷ ಹುದ್ದೆ
ವೈರಲ್ ಪೋಸ್ಟ್Image Credit source: LinkedIn
ಸಾಯಿನಂದಾ
|

Updated on: May 28, 2025 | 5:17 PM

Share

ಹೈದರಾಬಾದ್, ಮೇ 28: ಕಂಪನಿ (Company) ಎಂದ ಮೇಲೆ ನೂರಾರು ಹುದ್ದೆಗಳು ಇರುತ್ತವೆ. ಆಯಾಯ ಉದ್ಯೋಗಗಳಿಗೆ ಇರಬೇಕಾದ ಅರ್ಹತೆಯ ಆಧಾರದ ಮೇಲೆ ಯೋಗ್ಯ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಆದರೆ ನೀವೇನಾದ್ರು ಚೀಫ್ ಹ್ಯಾಪಿನೆಸ್ ಆಫೀಸರ್ (chief happiness officer) ಹುದ್ದೆಯ ಬಗ್ಗೆ ಕೇಳಿದ್ದೀರಾ. ಹೌದು ಹೈದರಾಬಾದ್ (hyderabad) ನ ಕಂಪನಿಯೊಂದು ಈ ಪೋಸ್ಟ್‌ಗೆ ವಿಶೇಷವಾದ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಂಡಿದೆ. ಉದ್ಯಮಿಯೊಬ್ಬರು ಕಂಪನಿಯಲ್ಲಿ ಹೊಸದಾಗಿ ನೇಮಕ ಮಾಡಿಕೊಂಡ ವಿಶೇಷ ಉದ್ಯೋಗಿಯಾದ ಡೆನ್ವರ್ (denver) ಹೆಸರಿನ ಶ್ವಾನದ ಕುರಿತಂತೆ ಪೋಸ್ಟ್ ವೊಂದು ಹಾಕಿದ್ದಾರೆ. ಈ ಶ್ವಾನ ಆಯ್ಕೆ ಮಾಡಿಕೊಳ್ಳುವ ಮೂಲ ಉದ್ದೇಶವೇ ಕಂಪನಿಯಲ್ಲಿರುವ ಉಳಿದ ಉದ್ಯೋಗಿಗಳ ಶಕ್ತಿಯನ್ನು ಕಾಯ್ದುಕೊಳ್ಳುವುದು ಹಾಗೂ ಸದಾ ಉತ್ಸಾಹದಿಂದ ಕೆಲಸ ಮಾಡುವಂತೆ ಮಾಡುವುದು ಆಗಿದೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಇದು ಒಂಥರಾ ಚೆನ್ನಾಗಿದೆ ಎಂದು ನೆಟ್ಟಿಗರು ಕಾಮೆಂಟ್ ಗಳನ್ನು ಮಾಡಿದ್ದಾರೆ.

Ragul Arepaka ಹೆಸರಿನ ಲಿಂಕ್ಡ್ ಇನ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ನಮ್ಮ ಹೊಸ ನೇಮಕಗೊಂಡ ಡೆನ್ವರ್ – ಚೀಫ್ ಹ್ಯಾಪಿನೆಸ್ ಆಫೀಸರ್ ಅವರನ್ನು ಭೇಟಿ ಮಾಡಿ. ಅವರು ಕೋಡ್ ಮಾಡುವುದಿಲ್ಲ. ಅವರು ಯಾವುದಕ್ಕೂ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಅವರು ಬರುತ್ತಾರೆ, ಎಲ್ಲರ ಹೃದಯಗಳನ್ನು ಕದಿಯುತ್ತಾರೆ ಹಾಗೂ ಎಲ್ಲಾ ಉದ್ಯೋಗಿಗಳ ಶಕ್ತಿಯನ್ನು ಉಳಿಸುತ್ತಾರೆ. ಅಲ್ಲದೆ, ನಾವು ಈಗ ಅಧಿಕೃತವಾಗಿ ಸಾಕುಪ್ರಾಣಿ ಸ್ನೇಹಿಯಾಗಿದ್ದೇವೆ. ಇದು ನಮ್ಮ ಅತ್ಯುತ್ತಮ ನಿರ್ಧಾರ. BTW: ಈ ಉದ್ಯೋಗಿಯೂ ಕಂಪನಿಯಲ್ಲಿ ಅತ್ಯುತ್ತಮ ಸವಲತ್ತುಗಳನ್ನು ಹೊಂದಿದ್ದಾರೆ,” ಎಂದು ಬರೆದುಕೊಳ್ಳಲಾಗಿದೆ.

ಇದನ್ನೂ ಓದಿ : ರಸ್ತೆಯಲ್ಲೇ ಕುಸಿದು ಬಿದ್ದ ಒಂಟೆ, ನೀರು ಕೊಟ್ಟು ಬಾಯಾರಿಕೆ ನೀಗಿಸಿದ ಪುಣ್ಯಾತ್ಮ

ಇದನ್ನೂ ಓದಿ
Image
ಮಡದಿಗೆ ನೈಲ್ ಪಾಲಿಶ್ ಹಚ್ಚಿದ ವೃದ್ಧ
Image
ಪತ್ನಿ ಹೆರಿಗೆ ನೋವು ಅನುಭವಿಸುವುದನ್ನು ನೋಡಿ ಬಿಕ್ಕಿ ಬಿಕ್ಕಿ ಅತ್ತ ಪತಿ
Image
ಕರೆಂಟ್ ಬೇಲಿ ದಾಟಲು ಆನೆ ಬಳಸಿದ ಈ ಟ್ರಿಕ್, ನಿಮಗೂ ಉಪಯೋಗಕ್ಕೆ ಬರಬಹುದು
Image
ರಸ್ತೆಯಲ್ಲಿ ಹೋಗುತ್ತಿದ್ದ ಬುರ್ಖಾದಾರಿ ಮಹಿಳೆಗೆ ಕಿಸ್​​ ಮಾಡಿ ಹೋದ ಯುವಕ

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಈ ಪೋಸ್ಟ್ ವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈ ರೀತಿಯ ಹೊಸ ಪ್ರಯತ್ನಕ್ಕೆ ಬಳಕೆದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಳಕೆದಾರರೊಬ್ಬರು, ಕಂಪನಿಯ ಉದ್ಯೋಗಿಗಳ ಶಕ್ತಿಯನ್ನು ಕಾಯ್ದುಕೊಳ್ಳುವ ಈ ಪ್ರಯತ್ನ ಚೆನ್ನಾಗಿದೆ ಎಂದಿದ್ದಾರೆ. ಇನ್ನೊಬ್ಬರು ಈ ಎಲ್ಲರನ್ನು ಖುಷಿಪಡಿಸುವ ಕೆಲಸದಲ್ಲಿ ಈ ಶ್ವಾನ ದಣಿದಂತೆ ಕಾಣುತ್ತಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಎಷ್ಟು ಮುದ್ದಾದ ಆಫೀಸರ್ ಇವರು ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್