AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿಕನ್‌ ಬಿರಿಯಾನಿ ತಂದ ಆಪತ್ತು, ಗಂಟಲಲ್ಲಿ ಚಿಕನ್‌ ಪೀಸ್‌ ಸಿಲುಕಿ  ಉಸಿರುಗಟ್ಟಿ  ವ್ಯಕ್ತಿ ಸಾವು 

ಹೈದರಬಾದ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಬಹುತೇಕರ ಫೇವರೇಟ್‌ ಆಗಿರುವ ಚಿಕನ್‌ ಬಿರಿಯಾನಿ ವ್ಯಕ್ತಿಯೊಬ್ಬರ ಪ್ರಾಣವನ್ನೇ ಕಸಿದುಕೊಂಡಿದೆ. ಹೌದು ಇಲ್ಲಿನ ವ್ಯಕ್ತಿಯೊಬ್ಬರು ಬಿರಿಯಾನಿ ತಿನ್ನುವಾಗ ಗಂಟಲಿನಲ್ಲಿ ಚಿಕನ್‌ ಪೀಸ್‌ ಸಿಲುಕಿ ಉಟಿರುಗಟ್ಟಿ ಸಾವನ್ನಪ್ಪಿದ್ದಾರೆ.  ಈ ಕುರಿತ ಸುದ್ದಿಯೊಂದು ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.

Viral Video: ಚಿಕನ್‌ ಬಿರಿಯಾನಿ ತಂದ ಆಪತ್ತು, ಗಂಟಲಲ್ಲಿ ಚಿಕನ್‌ ಪೀಸ್‌ ಸಿಲುಕಿ  ಉಸಿರುಗಟ್ಟಿ  ವ್ಯಕ್ತಿ ಸಾವು 
ವೈರಲ್​ ನ್ಯೂಸ್
ಮಾಲಾಶ್ರೀ ಅಂಚನ್​
| Edited By: |

Updated on: Jun 24, 2024 | 2:08 PM

Share

ಊಟ ಮಾಡುವಾಗ ಅಥವಾ ಏನಾದ್ರೂ ತಿನ್ನುವಾಗ ಆಹಾರ ಗಂಟಲಲ್ಲಿ ಸಿಲುಕಿದರೆ ಉಸಿರಾಟಕ್ಕೆ ತೊಂದರೆಯಾಗುತ್ತದೆ. ಅದಕ್ಕಾಗಿಯೇ ನಿಧಾನವಾಗಿ ಊಟ ಮಾಡಬೇಕು, ಆಹಾರವನ್ನು ಸರಿಯಾಗಿ ಜಗಿದು ತಿನ್ನಬೇಕು ಎಂದು ಹೇಳುತ್ತಿರುತ್ತಾರೆ. ಆಹಾರ ಗಂಟಲಲ್ಲಿ ಸಿಲುಕಿದರೆ ಅದು ಕೆಲವೊಮ್ಮೆ ನಮ್ಮ ಪ್ರಾಣಕ್ಕೆಯೇ ಕುತ್ತು ತರುತ್ತವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಚಿಕನ್‌ ಬಿರಿಯಾನಿ ತಿನ್ನುವಾಗ ಚಿಕನ್‌ ಪೀಸ್‌ ಗಂಟಲಲ್ಲಿ  ಸಿಲುಕಿ ವ್ಯಕ್ತಿಯೊಬ್ಬರು ಉಸಿರುಗಟ್ಟಿ  ಸಾವನ್ನಪ್ಪಿದ್ದಾರೆ.

ಈ ಘಟನೆ ಹೈದರಬಾದ್‌ನ ಶಾದ್‌ ನಗರದಲ್ಲಿ ನಡೆದಿದ್ದು, ಬಿರಿಯಾನಿ ತಿನ್ನುವಾಗ ಗಂಟಲಲ್ಲಿ ಚಿಕನ್‌ ಪೀಸ್‌ ಸಿಲುಕಿದ ಪರಿಣಾಮ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇಲ್ಲಿನ ಅಣ್ಣಾರಾಮ್‌ ಗ್ರಾಮದ ನಿವಾಸಿ ಶ್ರೀಕಾಂತ್‌ (39 ವರ್ಷ) ಎಂಬ ವ್ಯಕ್ತಿ ತನ್ನ ಸಹೋದರಿಯನ್ನು ಭೇಟಿ ಮಾಡಲೆಂದು ಹೈದರಬಾದಿಗೆ ತೆರಳಿದ್ದರು. ಆ ಸಂದರ್ಭದಲ್ಲಿ ಅಲ್ಲೇ ಒಂದು ಬಾರ್‌ಗೆ ಹೋಗಿ ಮದ್ಯ ಮತ್ತು ಚಿಕನ್‌ ಬಿರಿಯಾನಿ ಸೇವನೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಅವರಿಗೆ ಉಸಿರುಗಟ್ಟಿದಂತಾಗಿ  ತಕ್ಷಣ ಬಾರ್‌ನಿಂದ ಹೊರಬರುತ್ತಾರೆ. ತೀವ್ರ ಉಸಿರಾಟದ ತೊಂದರೆಯುಂಟಾಗಿ ಅಲ್ಲೇ ಕುಸಿದು ಬಿದ್ದಿದ್ದಾರೆ. ಆ ತಕ್ಷಣ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಶ್ರೀಕಾಂತ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ದುರಾದೃಷ್ಟವಶಾತ್‌ ಚಿಕಿತ್ಸೆಗೂ ಮುನ್ನವೇ ಅವರು ಸಾವನ್ನಪ್ಪಿದ್ದಾರೆ.  ಮೊದಲಿಗೆ ಅತಿಯಾದ ಮದ್ಯ ಸೇವನೆಯಿಂದ ಸಾವನ್ನಪ್ಪಿದ್ದಾರೆ ಎಂದು ಸಂಶಯಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ  ಗಂಟಲಲ್ಲಿ ಮಾಂಸದ ತುಂಡು ಸಿಕ್ಕಿ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ಪತ್ತೆಯಾಗಿದೆ.

@TeluguScribe  ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಚಿಕನ್‌ ಬಿರಿಯಾನಿ ತಿನ್ನುವಾಗ ಗಂಟಲಲ್ಲಿ ಚಿಕನ್‌ ಪೀಸ್‌ ಸಿಲುಕಿದ ಪರಿಣಾಮ ಉಸಿರಾಟದ ತೊಂದರೆ ಉಂಟಾಗಿ ಉಸಿರುಗಟ್ಟಿ ಬೀದಿಯಲ್ಲಿ ಕುಸಿದು ಬಿದ್ದಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಎರಡು ತಿಂಗಳಿಗೆ ಬರೋಬ್ಬರಿ 45 ಸಾವಿರ ರೂ. ಕರೆಂಟ್ ಬಿಲ್ ಇನ್ನು ಮುಂದೆ ಕ್ಯಾಂಡಲ್ ಬಳಕೆಯೇ ಸೂಕ್ತ

ಜೂನ್‌ 23 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಘಟನೆ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು