AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಬೈಕ್​ ತಾನೇ ಸುಟ್ಟುಹಾಕಿದ ಹೈದರಾಬಾದಿನ ಈ ವ್ಯಕ್ತಿ

Wrong Side : ಸಂಚಾರ ನಿಯಮವನ್ನು ಉಲ್ಲಂಘಿಸಿದವನೂ ಇವನೇ. ಪೊಲೀಸರೊಂದಿಗೆ ಜಗಳಕ್ಕಿಳಿದವನೂ ಇವನೇ. ಇದರಿಂದ ಹತಾಶೆಗೊಂಡು ತನ್ನ ಬೈಕಿಗೆ ತಾನೇ ಬೆಂಕಿ ಹಚ್ಚಿದವನೂ ಇವನೇ. 

ತನ್ನ ಬೈಕ್​ ತಾನೇ ಸುಟ್ಟುಹಾಕಿದ ಹೈದರಾಬಾದಿನ ಈ ವ್ಯಕ್ತಿ
ಉರಿಯುತ್ತಿರುವ ಬೈಕ್
TV9 Web
| Updated By: ಶ್ರೀದೇವಿ ಕಳಸದ|

Updated on:Oct 04, 2022 | 11:34 AM

Share

Viral Video : ಕೆಲವರಿಗೆ ಹತಾಶೆಯ ಮೂಲ ಮತ್ತು ಕಾರಣ ಬೇರೆಯೇ ಇರುತ್ತದೆ. ಆದರೆ ಅದನ್ನು ಇನ್ನೆಲ್ಲೋ ತೀರಿಸಿಕೊಳ್ಳಲು ಪ್ರಯತ್ನಿಸುತ್ತಿರುತ್ತಾರೆ. ಆದರೆ ಅದರ ಪರಿಣಾಮದ ಬಾಧ್ಯತೆ ಮಾತ್ರ ಇನ್ನೊಬ್ಬರ ಮೇಲೂ ಆಗಬಹುದು ಅಥವಾ ಸ್ವತಃ ಅವರ ಮೇಲೆಯೇ ಆಗಬಹುದು. ಸಮಸ್ಯೆಗಳು ಎಲ್ಲರಿಗೂ ಇರುತ್ತವೆ ಆದರೆ ವಿವೇಚನೆ ಎನ್ನುವುದನ್ನು ಕಳೆದುಕೊಳ್ಳಬಾರದಲ್ಲ? ಇಲ್ಲೊಬ್ಬ ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕಾಗಿ  ಸವಾರನನ್ನು ಪೊಲೀಸರು ತಡೆದಿದ್ದಾರೆ. ಅದಕ್ಕೆ ಹತಾಶೆಗೊಂಡ ಸವಾರ ತನ್ನ ಬೈಕಿಗೆ ತಾನೇ ಬೆಂಕಿ ಹಚ್ಚಿದ್ದಾನೆ. ಸೋಮವಾರದಂದು ಹೈದರಾಬಾದಿನಲ್ಲಿ ನಡೆದ ಈ ಘಟನೆ ಇದೀಗ ವೈರಲ್ ಆಗಿದೆ. ಅಂದು ಸಂಜೆ ಅಮೀರಪೇಟ್‌ನ ಮೈತ್ರಿವನಂನಲ್ಲಿ ಈ ಸವಾರ ರಾಂಗ್ ಸೈಡಿನಲ್ಲಿ ಪ್ರಯಾಣಿಸುತ್ತಿದ್ದ. ಅದಕ್ಕಾಗಿ ಪೊಲೀಸರು ರಸ್ತೆಯಲ್ಲಿ ಇವನನ್ನು ತಡೆದಿದ್ದಾರೆ. ಆಗ ಹೀಗೆ ಅತಿರೇಕದಿಂದ ವರ್ತಿಸಿದ್ದಾನೆ.

ಅಮೀರ್‌ಪೇಟ್‌ನಲ್ಲಿ ಮೊಬೈಲ್ ಅಂಗಡಿ ಇಟ್ಟುಕೊಂಡಿರುವ ಈತನನ್ನು ಎಸ್. ಅಶೋಕ್ ಎಂದು ಗುರುತಿಸಲಾಗಿದೆ. ರಾಂಗ್​ ಸೈಡ್ ಬಂದಿದ್ದಕ್ಕೆ ಪೊಲೀಸರು ತಡೆದಿದ್ದಾರೆ. ಆಗ ಕೋಪೋದ್ರಿಕ್ತನಾಗಿ ಅವರೊಂದಿಗೆ ಜಗಳಕ್ಕಿಳಿದಿದ್ದಾನೆ. ನಂತರ ತನ್ನ ಅಂಗಡಿಗೆ ಹೋಗಿ ಪೆಟ್ರೋಲ್​ ಕ್ಯಾನ್​ ತಂದು ತನ್ನ ಬೈಕಿಗೆ ಸುರಿದು ಬೆಂಕಿಹಚ್ಚಿದ್ದಾನೆ. ಇವನ ಈ ಅಸಹಜ ನಡೆವಳಿಕೆಯಿಂದಾಗಿ ಸಂಚಾರಿ ಪೊಲೀಸರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದಾಗ, ಅವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಟ್ರಾಫಿಕ್ ಪೊಲೀಸ್ ಅಧಿಕಾರಿ, ‘ನಿತ್ಯವೂ ಈ ಸವಾರ ಸಂಚಾರ ನಿಯಮವನ್ನು ಉಲ್ಲಂಘಿಸುತ್ತಲೇ ಇರುತ್ತಾನೆ. ಪ್ರಯಾಣಿಕರಿಗೆ ಅಭಿಮುಖವಾಗಿ ಚಲಿಸಿ ಸಂಚಾರಕ್ಕೆ, ಸವಾರರಿಗೆ ವ್ಯತ್ಯಯ ಉಂಟುಮಾಡುತ್ತಲೇ ಇರುತ್ತಾನೆ. ಇವನ ಈ ನಡೆವಳಿಕೆಯಿಂದ ಇವನಿಗೂ ರಸ್ತೆ ಮೇಲಿರುವವರಿಗೂ ಇದು ಅಪಾಯವೇ’ ಎಂದಿದ್ಧಾರೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:26 am, Tue, 4 October 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್