AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿ ಮೊಮೊಸ್​ ತಿಂದ ಮಹಿಳೆ ಸಾವು, 20 ಜನ ಅಸ್ವಸ್ಥ

ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿ 'ದೆಹಲಿ ಮೊಮೊಸ್' ಎಂಬ ಸ್ಟಾಲ್‌ನಲ್ಲಿ ಮಾರಾಟವಾದ ಮೊಮೊಸ್ ತಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇನ್ನೂ 20 ಮಂದಿ ಅಸ್ವಸ್ಥರಾಗಿರುವುದಾಗಿ ವರದಿಯಾಗಿದೆ. GHMC ತನಿಖೆ ಆರಂಭಿಸಿದ್ದು, ಸ್ಟಾಲ್ ಮಾನ್ಯ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ. ಸದ್ಯ ತನಿಖೆ ನಡೆಯುತ್ತಿದೆ.

ರಸ್ತೆ ಬದಿ ಮೊಮೊಸ್​ ತಿಂದ ಮಹಿಳೆ ಸಾವು, 20 ಜನ ಅಸ್ವಸ್ಥ
ಮೊಮೊಸ್​ ತಿಂದ ಮಹಿಳೆ ಸಾವುImage Credit source: Pinterest
ಅಕ್ಷತಾ ವರ್ಕಾಡಿ
|

Updated on: Oct 29, 2024 | 10:25 AM

Share

ಹೈದರಾಬಾದ್: ಮಕ್ಕಳಿಂದ ಹಿಡಿದು ವಯಸ್ಕರ ವರೆಗೆ ಎಲ್ಲರೂ ಮೊಮೊಸ್ ಪ್ರೀಯರಾಗಿದ್ದು ಅದರ ರುಚಿಯನ್ನು ಇಷ್ಟಪಡುತ್ತಾರೆ. ಇದೀಗ ಬಾಯಿ ಚಪ್ಪರಿಸಿ ಕೊಂಡು ತಿನ್ನುವ ಮೊಮೊಸ್ ಮಹಿಳೆಯ ಜೀವವನ್ನೇ ತೆಗೆದಿದೆ. ಇದಲ್ಲದೇ ಮೊಮೊಸ್​ ಸವಿದ 20 ಅಧಿಕ ಜನರು ಆಸ್ವಸ್ಥಗೊಂಡಿದ್ದಾರೆ. ಈ ಘಟನೆ ಹೈದರಾಬಾದ್‌ನ ಬಂಜಾರ ಹಿಲ್ಸ್ ಬಳಿ ಫುಡ್ ಸ್ಟಾಲ್‌ನಲ್ಲಿ ನಡೆದಿದೆ.

ಬಂಜಾರಾ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ತನಿಖೆ ನಡೆಯುತ್ತಿದೆ. “ಮೃತ ಮಹಿಳೆ ಮತ್ತು ಆಸ್ವಸ್ಥಗೊಂಡವರು ‘ದೆಹಲಿ ಮೊಮೊಸ್’ ಹೆಸರಿನ ಫುಡ್ ಸ್ಟಾಲ್‌ನಿಂದ ಮೊಮೊಸ್ ಸೇವಿಸಿದ್ದಾರೆ. ಚಿಂತಲ್ ಬಸ್ತಿಯಲ್ಲಿರುವ ಈ ಸ್ಟಾಲ್ ಅನ್ನು ಮೂರು ತಿಂಗಳ ಹಿಂದೆ ಬಿಹಾರದಿಂದ ಬಂದ ಆರು ಸೇರಿ ಪ್ರಾರಂಭಿಸಿದ್ದರು. ಸ್ಟಾಲ್ ನಡೆಸುತ್ತಿದ್ದವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಮೊಮೊಸ್​ ತಿಂದ ಒಂದು ಗಂಟೆಯ ನಂತರ ಮಹಿಳೆ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದು, ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ಮಹಿಳೆ ಮೃತಪಟ್ಟಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ: 24 ಗಂಟೆಗಳಲ್ಲಿ 10 ಸಾವಿರ ದೋಸೆ ತಯಾರಿಸಿ ದಾಖಲೆ ಬರೆದ ಬಾಣಸಿಗ ವಿಷ್ಣು ಮನೋಹರ್

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (GHMC) ಮಾರಾಟಗಾರರ ಕಾರ್ಯಾಚರಣೆಗಳ ಬಗ್ಗೆ ತನಿಖೆ ಆರಂಭಿಸಿದ್ದು, ಈ ವೇಳೆ ಮಾನ್ಯ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವುದು ತಿಳಿದುಬಂದಿದೆ. ಅಲ್ಲಿಂದ ಆಹಾರದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ವ್ಯಾಪಾರ ಚಟುವಟಿಕೆಗಳನ್ನು ನಿಲ್ಲಿಸಲು ಮಾರಾಟಗಾರರಿಗೆ ನೋಟೀಸು ನೀಡಲಾಗಿದೆ. ಬೀದಿ ಬದಿ ಆಹಾರವನ್ನು ಸೇವಿಸುವಾಗ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಸೂಚಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ