AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿ ಮೊಮೊಸ್​ ತಿಂದ ಮಹಿಳೆ ಸಾವು, 20 ಜನ ಅಸ್ವಸ್ಥ

ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿ 'ದೆಹಲಿ ಮೊಮೊಸ್' ಎಂಬ ಸ್ಟಾಲ್‌ನಲ್ಲಿ ಮಾರಾಟವಾದ ಮೊಮೊಸ್ ತಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇನ್ನೂ 20 ಮಂದಿ ಅಸ್ವಸ್ಥರಾಗಿರುವುದಾಗಿ ವರದಿಯಾಗಿದೆ. GHMC ತನಿಖೆ ಆರಂಭಿಸಿದ್ದು, ಸ್ಟಾಲ್ ಮಾನ್ಯ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ. ಸದ್ಯ ತನಿಖೆ ನಡೆಯುತ್ತಿದೆ.

ರಸ್ತೆ ಬದಿ ಮೊಮೊಸ್​ ತಿಂದ ಮಹಿಳೆ ಸಾವು, 20 ಜನ ಅಸ್ವಸ್ಥ
ಮೊಮೊಸ್​ ತಿಂದ ಮಹಿಳೆ ಸಾವುImage Credit source: Pinterest
ಅಕ್ಷತಾ ವರ್ಕಾಡಿ
|

Updated on: Oct 29, 2024 | 10:25 AM

Share

ಹೈದರಾಬಾದ್: ಮಕ್ಕಳಿಂದ ಹಿಡಿದು ವಯಸ್ಕರ ವರೆಗೆ ಎಲ್ಲರೂ ಮೊಮೊಸ್ ಪ್ರೀಯರಾಗಿದ್ದು ಅದರ ರುಚಿಯನ್ನು ಇಷ್ಟಪಡುತ್ತಾರೆ. ಇದೀಗ ಬಾಯಿ ಚಪ್ಪರಿಸಿ ಕೊಂಡು ತಿನ್ನುವ ಮೊಮೊಸ್ ಮಹಿಳೆಯ ಜೀವವನ್ನೇ ತೆಗೆದಿದೆ. ಇದಲ್ಲದೇ ಮೊಮೊಸ್​ ಸವಿದ 20 ಅಧಿಕ ಜನರು ಆಸ್ವಸ್ಥಗೊಂಡಿದ್ದಾರೆ. ಈ ಘಟನೆ ಹೈದರಾಬಾದ್‌ನ ಬಂಜಾರ ಹಿಲ್ಸ್ ಬಳಿ ಫುಡ್ ಸ್ಟಾಲ್‌ನಲ್ಲಿ ನಡೆದಿದೆ.

ಬಂಜಾರಾ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ತನಿಖೆ ನಡೆಯುತ್ತಿದೆ. “ಮೃತ ಮಹಿಳೆ ಮತ್ತು ಆಸ್ವಸ್ಥಗೊಂಡವರು ‘ದೆಹಲಿ ಮೊಮೊಸ್’ ಹೆಸರಿನ ಫುಡ್ ಸ್ಟಾಲ್‌ನಿಂದ ಮೊಮೊಸ್ ಸೇವಿಸಿದ್ದಾರೆ. ಚಿಂತಲ್ ಬಸ್ತಿಯಲ್ಲಿರುವ ಈ ಸ್ಟಾಲ್ ಅನ್ನು ಮೂರು ತಿಂಗಳ ಹಿಂದೆ ಬಿಹಾರದಿಂದ ಬಂದ ಆರು ಸೇರಿ ಪ್ರಾರಂಭಿಸಿದ್ದರು. ಸ್ಟಾಲ್ ನಡೆಸುತ್ತಿದ್ದವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಮೊಮೊಸ್​ ತಿಂದ ಒಂದು ಗಂಟೆಯ ನಂತರ ಮಹಿಳೆ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದು, ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ಮಹಿಳೆ ಮೃತಪಟ್ಟಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ: 24 ಗಂಟೆಗಳಲ್ಲಿ 10 ಸಾವಿರ ದೋಸೆ ತಯಾರಿಸಿ ದಾಖಲೆ ಬರೆದ ಬಾಣಸಿಗ ವಿಷ್ಣು ಮನೋಹರ್

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (GHMC) ಮಾರಾಟಗಾರರ ಕಾರ್ಯಾಚರಣೆಗಳ ಬಗ್ಗೆ ತನಿಖೆ ಆರಂಭಿಸಿದ್ದು, ಈ ವೇಳೆ ಮಾನ್ಯ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವುದು ತಿಳಿದುಬಂದಿದೆ. ಅಲ್ಲಿಂದ ಆಹಾರದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ವ್ಯಾಪಾರ ಚಟುವಟಿಕೆಗಳನ್ನು ನಿಲ್ಲಿಸಲು ಮಾರಾಟಗಾರರಿಗೆ ನೋಟೀಸು ನೀಡಲಾಗಿದೆ. ಬೀದಿ ಬದಿ ಆಹಾರವನ್ನು ಸೇವಿಸುವಾಗ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಸೂಚಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?