AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಣೇಶ ವಿಸರ್ಜನೆ ವೇಳೆ ಭರ್ಜರಿ ಸ್ಟೆಪ್ ಹಾಕಿದ ಹೈದರಾಬಾದ್ ಪೊಲೀಸ್; ವಿಡಿಯೋ ವೈರಲ್

ಹೈದರಾಬಾದ್​ನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ನೂರಾರು ಭಕ್ತರ ಮಧ್ಯೆ ಸಾಂಪ್ರದಾಯಿಕ ಡೋಲಿನ ಬೀಟ್‌ಗಳಿಗೆ ಪೊಲೀಸರು ಸಂತಸದಿಂದ ನೃತ್ಯ ಮಾಡುವುದನ್ನು ವೈರಲ್ ವೀಡಿಯೊಗಳಲ್ಲಿ ಕಾಣಬಹುದು. ಪೊಲೀಸ್ ಒಬ್ಬರು ಕಟ್ಟೆಯ ಮೇಲೆ ಹತ್ತಿ ಭರ್ಜರಿ ಸ್ಟೆಪ್ ಹಾಕುತ್ತಿರುವ ವಿಡಿಯೋ ಮೆಚ್ಚುಗೆ ಗಳಿಸಿದೆ.

Viral Video: ಗಣೇಶ ವಿಸರ್ಜನೆ ವೇಳೆ ಭರ್ಜರಿ ಸ್ಟೆಪ್ ಹಾಕಿದ ಹೈದರಾಬಾದ್ ಪೊಲೀಸ್; ವಿಡಿಯೋ ವೈರಲ್
ಹೈದರಾಬಾದ್​ನ ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡಿದ ಪೊಲೀಸ್Image Credit source: India.com
ಸುಷ್ಮಾ ಚಕ್ರೆ
|

Updated on: Sep 28, 2023 | 7:24 PM

Share

ಹೈದರಾಬಾದ್: ಹೈದರಾಬಾದ್​​ನಲ್ಲಿ ಇಂದು ನಡೆದ ಗಣೇಶೋತ್ಸವದ ಬೃಹತ್ ಮೆರವಣಿಗೆಯಲ್ಲಿ ಹೈದರಾಬಾದ್ ಪೊಲೀಸರು ಸಂಭ್ರಮದಲ್ಲಿ ಪಾಲ್ಗೊಂಡರು. 63 ಅಡಿ ಎತ್ತರದ ಬೃಹತ್ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ನೀರಿನ ಟ್ಯಾಂಕ್ ಬಳಿ ಕೊಂಡೊಯ್ಯುವಾಗ ಸಾಂಪ್ರದಾಯಿಕ ಡೋಲಿನ ಬೀಟ್​ಗೆ ಪೊಲೀಸ್ ಸಿಬ್ಬಂದಿ ಸಖತ್ ಆಗಿ ಹೆಜ್ಜೆ ಹಾಕುತ್ತಿರುವ ವಿಡಿಯೋ ವೈರಲ್ ಆಗಿದೆ.

ಇಂದು ತೆಲಂಗಾಣ ಮತ್ತು ಇತರ ರಾಜ್ಯಗಳಾದ್ಯಂತ ಗಣಪತಿ ಉತ್ಸವದ ಅಂತಿಮ ದಿನದ ಸಂಭ್ರಮ ಮೂಡಿತ್ತು. ಗಣಪತಿ ವಿಸರ್ಜನ್ ಮೆರವಣಿಗೆಯಲ್ಲಿ ನೂರಾರು ಭಕ್ತರ ಮಧ್ಯೆ ಪೊಲೀಸರು ಸಾಂಪ್ರದಾಯಿಕ ಡೋಲಿನ ಬೀಟ್‌ಗಳಿಗೆ ಸಂತಸದಿಂದ ನೃತ್ಯ ಮಾಡುವುದನ್ನು ವೈರಲ್ ವೀಡಿಯೊಗಳಲ್ಲಿ ಕಾಣಬಹುದು.

ಇದನ್ನೂ ಓದಿ: ಹೈದರಾಬಾದ್​ನ ಬಾಂಡ್ಲಗುಡ ಗಣೇಶ ಲಡ್ಡು 1.26 ಕೋಟಿ ರೂ.ಗೆ ಹರಾಜು!

ಗಣೇಶೋತ್ಸವದ ಕೊನೆಯ ದಿನವಾದ್ದರಿಂದ ತೆಲಂಗಾಣದ ರಾಜಧಾನಿ ಮತ್ತು ಅದರ ಸುತ್ತಮುತ್ತ 30,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. 9 ದಿನಗಳ ಕಾಲ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಗಣಪತಿ ವಿಗ್ರಹಗಳ ವಿಸರ್ಜನೆ ಹೈದರಾಬಾದ್‌ನಲ್ಲಿ ಭಾರೀ ಭದ್ರತಾ ವ್ಯವಸ್ಥೆಗಳ ನಡುವೆ ನಡೆಯಿತು.

ಪ್ರತಿ ವರ್ಷ ಹೈದರಾಬಾದ್‌ನಲ್ಲಿ ಗಣೇಶ ಚತುರ್ಥಿ ಹಬ್ಬದ ಪ್ರಮುಖ ಆಕರ್ಷಣೆಯೆಂದರೆ ಹೈದರಾಬಾದ್​ನ ಮಧ್ಯ ಭಾಗದಲ್ಲಿರುವ ಖೈರತಾಬಾದ್‌ನಲ್ಲಿ ಸ್ಥಾಪಿಸಲಾದ ಎತ್ತರದ ವಿಗ್ರಹ. ಸಂಘಟಕರು ಈ ವರ್ಷ 63 ಅಡಿ ಎತ್ತರದ ವಿಗ್ರಹವನ್ನು ಪ್ರತಿಷ್ಠಾಪಿಸಿದ್ದರು. ಅದನ್ನು ಇಂದು (ಗುರುವಾರ) ಬೆಳಿಗ್ಗೆ ವಿಸರ್ಜನೆಗೆ ಕೊಂಡೊಯ್ಯಲಾಯಿತು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ