AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಣೇಶ ವಿಸರ್ಜನೆ ವೇಳೆ ಭರ್ಜರಿ ಸ್ಟೆಪ್ ಹಾಕಿದ ಹೈದರಾಬಾದ್ ಪೊಲೀಸ್; ವಿಡಿಯೋ ವೈರಲ್

ಹೈದರಾಬಾದ್​ನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ನೂರಾರು ಭಕ್ತರ ಮಧ್ಯೆ ಸಾಂಪ್ರದಾಯಿಕ ಡೋಲಿನ ಬೀಟ್‌ಗಳಿಗೆ ಪೊಲೀಸರು ಸಂತಸದಿಂದ ನೃತ್ಯ ಮಾಡುವುದನ್ನು ವೈರಲ್ ವೀಡಿಯೊಗಳಲ್ಲಿ ಕಾಣಬಹುದು. ಪೊಲೀಸ್ ಒಬ್ಬರು ಕಟ್ಟೆಯ ಮೇಲೆ ಹತ್ತಿ ಭರ್ಜರಿ ಸ್ಟೆಪ್ ಹಾಕುತ್ತಿರುವ ವಿಡಿಯೋ ಮೆಚ್ಚುಗೆ ಗಳಿಸಿದೆ.

Viral Video: ಗಣೇಶ ವಿಸರ್ಜನೆ ವೇಳೆ ಭರ್ಜರಿ ಸ್ಟೆಪ್ ಹಾಕಿದ ಹೈದರಾಬಾದ್ ಪೊಲೀಸ್; ವಿಡಿಯೋ ವೈರಲ್
ಹೈದರಾಬಾದ್​ನ ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡಿದ ಪೊಲೀಸ್Image Credit source: India.com
ಸುಷ್ಮಾ ಚಕ್ರೆ
|

Updated on: Sep 28, 2023 | 7:24 PM

Share

ಹೈದರಾಬಾದ್: ಹೈದರಾಬಾದ್​​ನಲ್ಲಿ ಇಂದು ನಡೆದ ಗಣೇಶೋತ್ಸವದ ಬೃಹತ್ ಮೆರವಣಿಗೆಯಲ್ಲಿ ಹೈದರಾಬಾದ್ ಪೊಲೀಸರು ಸಂಭ್ರಮದಲ್ಲಿ ಪಾಲ್ಗೊಂಡರು. 63 ಅಡಿ ಎತ್ತರದ ಬೃಹತ್ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ನೀರಿನ ಟ್ಯಾಂಕ್ ಬಳಿ ಕೊಂಡೊಯ್ಯುವಾಗ ಸಾಂಪ್ರದಾಯಿಕ ಡೋಲಿನ ಬೀಟ್​ಗೆ ಪೊಲೀಸ್ ಸಿಬ್ಬಂದಿ ಸಖತ್ ಆಗಿ ಹೆಜ್ಜೆ ಹಾಕುತ್ತಿರುವ ವಿಡಿಯೋ ವೈರಲ್ ಆಗಿದೆ.

ಇಂದು ತೆಲಂಗಾಣ ಮತ್ತು ಇತರ ರಾಜ್ಯಗಳಾದ್ಯಂತ ಗಣಪತಿ ಉತ್ಸವದ ಅಂತಿಮ ದಿನದ ಸಂಭ್ರಮ ಮೂಡಿತ್ತು. ಗಣಪತಿ ವಿಸರ್ಜನ್ ಮೆರವಣಿಗೆಯಲ್ಲಿ ನೂರಾರು ಭಕ್ತರ ಮಧ್ಯೆ ಪೊಲೀಸರು ಸಾಂಪ್ರದಾಯಿಕ ಡೋಲಿನ ಬೀಟ್‌ಗಳಿಗೆ ಸಂತಸದಿಂದ ನೃತ್ಯ ಮಾಡುವುದನ್ನು ವೈರಲ್ ವೀಡಿಯೊಗಳಲ್ಲಿ ಕಾಣಬಹುದು.

ಇದನ್ನೂ ಓದಿ: ಹೈದರಾಬಾದ್​ನ ಬಾಂಡ್ಲಗುಡ ಗಣೇಶ ಲಡ್ಡು 1.26 ಕೋಟಿ ರೂ.ಗೆ ಹರಾಜು!

ಗಣೇಶೋತ್ಸವದ ಕೊನೆಯ ದಿನವಾದ್ದರಿಂದ ತೆಲಂಗಾಣದ ರಾಜಧಾನಿ ಮತ್ತು ಅದರ ಸುತ್ತಮುತ್ತ 30,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. 9 ದಿನಗಳ ಕಾಲ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಗಣಪತಿ ವಿಗ್ರಹಗಳ ವಿಸರ್ಜನೆ ಹೈದರಾಬಾದ್‌ನಲ್ಲಿ ಭಾರೀ ಭದ್ರತಾ ವ್ಯವಸ್ಥೆಗಳ ನಡುವೆ ನಡೆಯಿತು.

ಪ್ರತಿ ವರ್ಷ ಹೈದರಾಬಾದ್‌ನಲ್ಲಿ ಗಣೇಶ ಚತುರ್ಥಿ ಹಬ್ಬದ ಪ್ರಮುಖ ಆಕರ್ಷಣೆಯೆಂದರೆ ಹೈದರಾಬಾದ್​ನ ಮಧ್ಯ ಭಾಗದಲ್ಲಿರುವ ಖೈರತಾಬಾದ್‌ನಲ್ಲಿ ಸ್ಥಾಪಿಸಲಾದ ಎತ್ತರದ ವಿಗ್ರಹ. ಸಂಘಟಕರು ಈ ವರ್ಷ 63 ಅಡಿ ಎತ್ತರದ ವಿಗ್ರಹವನ್ನು ಪ್ರತಿಷ್ಠಾಪಿಸಿದ್ದರು. ಅದನ್ನು ಇಂದು (ಗುರುವಾರ) ಬೆಳಿಗ್ಗೆ ವಿಸರ್ಜನೆಗೆ ಕೊಂಡೊಯ್ಯಲಾಯಿತು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್