AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೆಸ್ಟೋರೆಂಟ್‌ನ ಬಿರಿಯಾನಿಯಲ್ಲಿ ಸಿಗರೇಟ್ ಪತ್ತೆ; ವಿಡಿಯೋ ವೈರಲ್​​

ಹೈದರಾಬಾದ್‌ನ ಒಂದು ಪ್ರಸಿದ್ಧ ರೆಸ್ಟೋರೆಂಟ್‌ನಲ್ಲಿ ಬಿರಿಯಾನಿಯಲ್ಲಿ ಅರ್ಧ ಸೇವಿಸಿದ ಸಿಗರೇಟ್ ಪತ್ತೆಯಾಗಿರುವ ಘಟನೆ ವೈರಲ್ ಆಗಿದೆ. ಗ್ರಾಹಕರು ಈ ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ರೆಸ್ಟೋರೆಂಟ್‌ನ ನಿರ್ಲಕ್ಷ್ಯಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow us
ಅಕ್ಷತಾ ವರ್ಕಾಡಿ
|

Updated on:Nov 26, 2024 | 10:46 AM

ಹೈದರಾಬಾದ್: ಬಿರಿಯಾನಿಯಲ್ಲಿ ಅರ್ಧದಷ್ಟು ಸೇದಿದ್ದ ಸಿಗರೇಟ್​​ ಪತ್ತೆಯಾಗಿರುವ ಘಟನೆ ತೆಲಂಗಾಣದ ಹೈದರಾಬಾದ್‌ನ ಪ್ರಸಿದ್ಧ ರೆಸ್ಟೊರೆಂಟ್​​ ಒಂದರಲ್ಲಿ ನಡೆದಿದೆ. ಸದ್ಯ ತಮಗಾದ ಅನುಭವವನ್ನು ಗ್ರಾಹಕರು ವಿಡಿಯೋ ಮಾಡಿ ಸೋಶಿಯಲ್​​ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ. ರೆಸ್ಟೋರೆಂಟ್​​ನ ಬೇಜಾವಬ್ದಾರಿಗೆ ನೆಟ್ಟಿಗರು ಕಾಮೆಂಟ್​​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RTC ‘X’ ರಸ್ತೆಯ ಬಳಿ ಇರುವ ಜನಪ್ರಿಯ ಬಾವರ್ಚಿ ರೆಸ್ಟೋರೆಂಟ್‌ನಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಸುಮಾರು 8-10 ಯುವಕರು ರೆಸ್ಟೋರೆಂಟ್‌ನಲ್ಲಿ ತಮ್ಮ ಆಹಾರವನ್ನು ತಿನ್ನುತ್ತಿರುವುದನ್ನು ವೀಡಿಯೊದಲ್ಲಿ ನೋಡಬಹುದು ಮತ್ತು ಅವರಲ್ಲಿ ಒಬ್ಬನ ಪ್ಲೇಟ್‌ನಲ್ಲಿ ಸಿಗರೇಟ್ ತುಂಡು ಕಂಡುಬಂದಿದೆ.

ಇದನ್ನೂ ಓದಿ:ಹುಲಿ ಘರ್ಜನೆ ಕೇಳಿ ಮರವೇರಿ ಕುಳಿತ ಫಾರೆಸ್ಟ್‌ ಗಾರ್ಡ್; ಮುಂದೇನಾಯ್ತು ನೋಡಿ…

ಈ ಘಟನೆಗೆ ರೆಸ್ಟೊರೆಂಟ್‌ನ ಆಡಳಿತ ಮಂಡಳಿ ಗ್ರಾಹಕರಲ್ಲಿ ಕ್ಷಮೆ ಯಾಚಿಸುತ್ತಿರುವುದು ಕಂಡುಬಂದಿದೆ. ಬಿರಿಯಾನಿಯಲ್ಲಿ ಸಿಗರೇಟ್ ತುಂಡು ನೋಡಿ ರೆಸ್ಟೋರೆಂಟ್‌ನಲ್ಲಿದ್ದ ಇತರ ಜನರು ಸಹ ಆಘಾತಕ್ಕೊಳಗಾಗಿದ್ದಾರೆ. ಘಟನೆಯ ನಿಖರವಾದ ದಿನಾಂಕ ಮತ್ತು ಸಮಯ ಇನ್ನೂ ತಿಳಿದಿಲ್ಲ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:46 am, Tue, 26 November 24

ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು