AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾಸ್ಟೆಲ್​​ನಲ್ಲಿ ನೀಡಿದ ಚಟ್ನಿಯಲ್ಲಿ ಈಜಾಡಿದ ಇಲಿ; ಶಾಕಿಂಗ್ ವಿಡಿಯೋ ವೈರಲ್

ಹೈದರಾಬಾದ್​ನ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಸ್ಟೆಲ್ ಮೆಸ್‌ನಲ್ಲಿ ತಮಗೆ ಬಡಿಸಿದ ಆಹಾರದಲ್ಲಿ ಇಲಿ ಇರುವುದನ್ನು ಕಂಡು ಅಸಹ್ಯಪಟ್ಟಿದ್ದಾರೆ. ಚಟ್ನಿಯ ಪಾತ್ರೆಯಲ್ಲಿ ಇಲಿ ಮುಳುಗೇಳುತ್ತಿದ್ದ ವಿಡಿಯೋವನ್ನು ಅವರು ಎಕ್ಸ್​ನಲ್ಲಿ ಶೇರ್ ಮಾಡಿದ್ದಾರೆ.

Viral Video: ಹಾಸ್ಟೆಲ್​​ನಲ್ಲಿ ನೀಡಿದ ಚಟ್ನಿಯಲ್ಲಿ ಈಜಾಡಿದ ಇಲಿ; ಶಾಕಿಂಗ್ ವಿಡಿಯೋ ವೈರಲ್
ಇಲಿ
ಸುಷ್ಮಾ ಚಕ್ರೆ
|

Updated on: Jul 09, 2024 | 9:04 PM

Share

ಹೈದರಾಬಾದ್: ಕಳೆದ ತಿಂಗಳು ಸ್ವಿಗ್ಗಿ ಮೂಲಕ ಆರ್ಡರ್ ಮಾಡಿದ ಚಿಕನ್ ಬಿರಿಯಾನಿಯಲ್ಲಿ ಹುಳು ಪತ್ತೆಯಾಗಿದೆ ಎಂದು ಹೈದರಾಬಾದ್ ನಿವಾಸಿಯೊಬ್ಬರು ಆರೋಪಿಸಿದ್ದರು. ಐಸ್​ ಕ್ರೀಂನಲ್ಲಿ ಸತ್ತ ಹುಳ, ಚಿಪ್ಸ್ ಪ್ಯಾಕೆಟ್​ನಲ್ಲಿ ಸತ್ತ ಕಪ್ಪೆ, ಐಸ್​ ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆಯಾದ ಬಳಿಕ ಮತ್ತೊಂದು ಘಟನೆ ಮುನ್ನೆಲೆಗೆ ಬಂದಿದೆ. ಅನೇಕ ಎಕ್ಸ್ ಬಳಕೆದಾರರು ಇದು “ಸ್ವೀಕಾರಾರ್ಹವಲ್ಲ”, “ಕರುಣಾಜನಕ” ಎಂದು ಹೇಳಿದ್ದಾರೆ.

ಈ ಬಾರಿ ಹೈದರಾಬಾದ್​ನ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಮೆಸ್‌ನಲ್ಲಿ ನೀಡಿದ ಆಹಾರದಲ್ಲಿ ಇಲಿ ಕಂಡುಬಂದಿದೆ ಎಂದು ಹೇಳಿಕೊಂಡಿದ್ದಾರೆ. ಆ ವೀಡಿಯೊ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಇದು ಗಂಭೀರ ಆರೋಗ್ಯ ಸಮಸ್ಯೆಯನ್ನು ಹೆಚ್ಚಿಸುತ್ತದೆ ಎಂದು ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಡುರಸ್ತೆಯಲ್ಲೇ ವ್ಯಕ್ತಿಯನ್ನು ಥಳಿಸಿ ಕೊಂದ ಜನರು; ಶಾಕಿಂಗ್ ವಿಡಿಯೋ ವೈರಲ್

ತೆಲಂಗಾಣದ ಹಾಸ್ಟೆಲ್‌ನಲ್ಲಿನ ಅಡುಗೆಯಲ್ಲಿ ಇಲಿ ಪತ್ತೆಯಾಗಿದೆ. ಇದು ಭಯಾನಕವಾದ ವಿಡಿಯೋ ಎಂದು ಎಕ್ಸ್​ನಲ್ಲಿ ಪೋಸ್ಟ್ ಮಾಡಲಾಗಿದೆ.

ದೊಡ್ಡ ಪಾತ್ರೆಯಲ್ಲಿ ಇರಿಸಲಾಗಿರುವ “ಚಟ್ನಿ”ಯಲ್ಲಿ ಇಲಿ ಈಜುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕೆಲವು ವಿದ್ಯಾರ್ಥಿಗಳು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ಇದನ್ನು ರೆಕಾರ್ಡ್ ಮಾಡುತ್ತಿರುವುದನ್ನು ನೋಡಬಹುದು. ವರದಿಗಳ ಪ್ರಕಾರ, ಈ ವೀಡಿಯೊ ಹೈದರಾಬಾದ್‌ನ ಸುಲ್ತಾನ್‌ಪುರದಲ್ಲಿರುವ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದಿಂದ (ಜೆಎನ್‌ಟಿಯು) ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು