AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾಸ್ಟೆಲ್​​ನಲ್ಲಿ ನೀಡಿದ ಚಟ್ನಿಯಲ್ಲಿ ಈಜಾಡಿದ ಇಲಿ; ಶಾಕಿಂಗ್ ವಿಡಿಯೋ ವೈರಲ್

ಹೈದರಾಬಾದ್​ನ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಸ್ಟೆಲ್ ಮೆಸ್‌ನಲ್ಲಿ ತಮಗೆ ಬಡಿಸಿದ ಆಹಾರದಲ್ಲಿ ಇಲಿ ಇರುವುದನ್ನು ಕಂಡು ಅಸಹ್ಯಪಟ್ಟಿದ್ದಾರೆ. ಚಟ್ನಿಯ ಪಾತ್ರೆಯಲ್ಲಿ ಇಲಿ ಮುಳುಗೇಳುತ್ತಿದ್ದ ವಿಡಿಯೋವನ್ನು ಅವರು ಎಕ್ಸ್​ನಲ್ಲಿ ಶೇರ್ ಮಾಡಿದ್ದಾರೆ.

Viral Video: ಹಾಸ್ಟೆಲ್​​ನಲ್ಲಿ ನೀಡಿದ ಚಟ್ನಿಯಲ್ಲಿ ಈಜಾಡಿದ ಇಲಿ; ಶಾಕಿಂಗ್ ವಿಡಿಯೋ ವೈರಲ್
ಇಲಿ
ಸುಷ್ಮಾ ಚಕ್ರೆ
|

Updated on: Jul 09, 2024 | 9:04 PM

Share

ಹೈದರಾಬಾದ್: ಕಳೆದ ತಿಂಗಳು ಸ್ವಿಗ್ಗಿ ಮೂಲಕ ಆರ್ಡರ್ ಮಾಡಿದ ಚಿಕನ್ ಬಿರಿಯಾನಿಯಲ್ಲಿ ಹುಳು ಪತ್ತೆಯಾಗಿದೆ ಎಂದು ಹೈದರಾಬಾದ್ ನಿವಾಸಿಯೊಬ್ಬರು ಆರೋಪಿಸಿದ್ದರು. ಐಸ್​ ಕ್ರೀಂನಲ್ಲಿ ಸತ್ತ ಹುಳ, ಚಿಪ್ಸ್ ಪ್ಯಾಕೆಟ್​ನಲ್ಲಿ ಸತ್ತ ಕಪ್ಪೆ, ಐಸ್​ ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆಯಾದ ಬಳಿಕ ಮತ್ತೊಂದು ಘಟನೆ ಮುನ್ನೆಲೆಗೆ ಬಂದಿದೆ. ಅನೇಕ ಎಕ್ಸ್ ಬಳಕೆದಾರರು ಇದು “ಸ್ವೀಕಾರಾರ್ಹವಲ್ಲ”, “ಕರುಣಾಜನಕ” ಎಂದು ಹೇಳಿದ್ದಾರೆ.

ಈ ಬಾರಿ ಹೈದರಾಬಾದ್​ನ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಮೆಸ್‌ನಲ್ಲಿ ನೀಡಿದ ಆಹಾರದಲ್ಲಿ ಇಲಿ ಕಂಡುಬಂದಿದೆ ಎಂದು ಹೇಳಿಕೊಂಡಿದ್ದಾರೆ. ಆ ವೀಡಿಯೊ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಇದು ಗಂಭೀರ ಆರೋಗ್ಯ ಸಮಸ್ಯೆಯನ್ನು ಹೆಚ್ಚಿಸುತ್ತದೆ ಎಂದು ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಡುರಸ್ತೆಯಲ್ಲೇ ವ್ಯಕ್ತಿಯನ್ನು ಥಳಿಸಿ ಕೊಂದ ಜನರು; ಶಾಕಿಂಗ್ ವಿಡಿಯೋ ವೈರಲ್

ತೆಲಂಗಾಣದ ಹಾಸ್ಟೆಲ್‌ನಲ್ಲಿನ ಅಡುಗೆಯಲ್ಲಿ ಇಲಿ ಪತ್ತೆಯಾಗಿದೆ. ಇದು ಭಯಾನಕವಾದ ವಿಡಿಯೋ ಎಂದು ಎಕ್ಸ್​ನಲ್ಲಿ ಪೋಸ್ಟ್ ಮಾಡಲಾಗಿದೆ.

ದೊಡ್ಡ ಪಾತ್ರೆಯಲ್ಲಿ ಇರಿಸಲಾಗಿರುವ “ಚಟ್ನಿ”ಯಲ್ಲಿ ಇಲಿ ಈಜುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕೆಲವು ವಿದ್ಯಾರ್ಥಿಗಳು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ಇದನ್ನು ರೆಕಾರ್ಡ್ ಮಾಡುತ್ತಿರುವುದನ್ನು ನೋಡಬಹುದು. ವರದಿಗಳ ಪ್ರಕಾರ, ಈ ವೀಡಿಯೊ ಹೈದರಾಬಾದ್‌ನ ಸುಲ್ತಾನ್‌ಪುರದಲ್ಲಿರುವ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದಿಂದ (ಜೆಎನ್‌ಟಿಯು) ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ