AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೀಲ್​ಗಾಗಿ ಬೈಕ್ ಸ್ಟಂಟ್ ಮಾಡಿ ಸಾವನ್ನಪ್ಪಿದ ಯುವಕ; ಮಗನನ್ನು ಕಳೆದುಕೊಂಡ ತಾಯಿ ಕಣ್ಣೀರು

ಯುವಕನೊಬ್ಬ ತನ್ನ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಸ್ಟಂಟ್ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಪಲ್ಟಿಯಾಗಿದೆ. ಬೈಕ್ ಹಿಂಬದಿ ಕುಳಿತಿದ್ದ ಯುವಕ ಪ್ರಾಣ ಕಳೆದುಕೊಂಡಿದ್ದು, ಬೈಕ್ ಚಲಾಯಿಸುತ್ತಿದ್ದ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಅಕ್ಷತಾ ವರ್ಕಾಡಿ
|

Updated on: Jul 21, 2024 | 1:01 PM

Share

ಹೈದರಾಬಾದ್: ಸೋಶಿಯಲ್​​​ ಮೀಡಿಯಾಗಳಲ್ಲಿ ಫೇಮಸ್​​ ಆಗಲು ಯುವಕನೊಬ್ಬ ಹುಚ್ಚು ಸಾಹಸಕ್ಕೆ ಕೈ ಹಾಕಿದ್ದು, ಪರಿಣಾಮ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಹದಿಹರೆಯದ ಮಗನ ಸಾವಿನ ಸುದ್ದಿ ಕೇಳಿ ಪೋಷಕರನ ಆಕ್ರಂದನ ಮಗಿಲು ಮುಟ್ಟಿದೆ. ಈ ಆಘಾತಕಾರಿ ಘಟನೆ ಹೈದರಾಬಾದ್ ಹಯಾತ್‌ನಗರ ಬಳಿ ನಡೆದಿದೆ.

ಅಸಲಿಗೆ ಮಳೆ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಇಡೀ ರಸ್ತೆ ಜಾರುತ್ತಿದೆ. ಇಂತಹ ಹೊತ್ತಿನಲ್ಲಿ ಇಬ್ಬರು ಹುಡುಗರು ಅಪಾಯಕಾರಿ ಸಾಹಸಗಳನ್ನು ಮಾಡಿ ಸೋಷಿಯಲ್ ಮೀಡಿಯಾ ರೀಲ್‌ಗಾಗಿ ನಡೆಸಿದ ಪ್ರಯತ್ನ ಈ ದುರಂತಕ್ಕೆ ಕಾರಣವಾಗಿದೆ. ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದ ಮಗ ಬೈಕ್ ಸ್ಟಂಟ್ ಗೆ ಬಲಿಯಾಗಿದ್ದಾನೆ ಎಂಬ ವಿಷಯ ತಿಳಿದು ತಾಯಿ ಆಘಾತಕೊಳ್ಳಗಾಗಿದ್ದಾರೆ. ಶನಿವಾರ (ಜುಲೈ 20) ಸಂಜೆ ಬೈಕ್‌ನಲ್ಲಿ ಇಬ್ಬರು ಹೈದರಾಬಾದ್-ವಿಜಯವಾಡ ಹೆದ್ದಾರಿಯ ಅಂಬರ್‌ಪೇಟ್‌ನಲ್ಲಿ ಮಳೆಯ ನಡುವೆಯೇ ಸಾಹಸ ಮಾಡುತ್ತಿದ್ದು, ಈ ದೃಶ್ಯಗಳನ್ನು ಸ್ನೇಹಿತರು ಚಿತ್ರೀಕರಿಸುತ್ತಿದ್ದರು.

ಇದನ್ನೂ ಓದಿ: 10 ವರ್ಷದ ಬಾಲಕ ಮೇಲೆ ಕುಳಿತು ಉಸಿರುಗಟ್ಟಿಸಿ ಕೊಂದ 150 ಕೆಜಿ ತೂಕದ ದಡೂತಿ ತಾಯಿ

ಆದರೆ ಕ್ಷಣಾರ್ಧದಲ್ಲಿ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದಿದ್ದು,ಸ್ನೇಹಿತರು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಶಿವ ಎಂಬ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾನೆ. ಏತನ್ಮಧ್ಯೆ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್