AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಗಂಡನೇ ಬೇಕು, ಆತನನ್ನೇ ಮದುವೆಯಾಗುತ್ತೇನೆಂದು ಹಠ ಹಿಡಿದ ಯುವತಿ! ಆಮೇಲೆನಾಯ್ತು?

ತನ್ನ ಅಕ್ಕನ ಗಂಡನನ್ನು ಪ್ರೀತಿಸುತ್ತಿದ್ದ ಯುವತಿ ಇಂದಿರಾ , ಆತನನ್ನೇ ಮದುವೆಯಾಗುವುದಾಗಿ ಪೋಷಕರಿಗೆ ಹೇಳಿದ್ದಾಳೆ. ಈ ವಿಷಯ ತಿಳಿದು ಆಘಾತಕ್ಕೊಳಗಾದ ಪೋಷಕರು ಇದರಿಂದಾಗಿ ನಿನ್ನ ಅಕ್ಕನ ಜೀವನ ಹಾಳಾಗುತ್ತದೆ, ಇದನ್ನು ಇಲ್ಲೇ ಬಿಟ್ಟು ಬಿಡು ಎಂದು ಬುದ್ದಿವಾದ ಹೇಳಿದ್ದಾರೆ. ಇದರಿಂದ ನೊಂದ ಯುವತಿ ಮಾಡಿದ್ದೇನು ಗೊತ್ತಾ?

ಅಕ್ಕನ ಗಂಡನೇ ಬೇಕು, ಆತನನ್ನೇ ಮದುವೆಯಾಗುತ್ತೇನೆಂದು ಹಠ ಹಿಡಿದ ಯುವತಿ! ಆಮೇಲೆನಾಯ್ತು?
ಅಕ್ಕನ ಗಂಡನೇ ಬೇಕು ಎಂದ ಯುವತಿ
ಅಕ್ಷತಾ ವರ್ಕಾಡಿ
|

Updated on: Jul 18, 2024 | 2:57 PM

Share

ತೆಲಂಗಾಣ: ತನ್ನ ಸ್ವಂತ ಅಕ್ಕನ ಗಂಡನನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದು, ಈ ಸಂಬಂಧವನ್ನು ಮನೆಯವರು ಒಪ್ಪದೇ ಇದ್ದಾಗ ಯುವತಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​​​​ನ ಹಯಾತ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಕ್ಕನ ಮದುವೆಯಾದ ದಿನದಿಂದ ತನ್ನ ಭಾವನನ್ನು ಪ್ರೀತಿಸುತ್ತಿದ್ದ ಯುವತಿ ಇಂದಿರಾ , ಆತನನ್ನೇ ಮದುವೆಯಾಗುವುದಾಗಿ ಪೋಷಕರಿಗೆ ಹೇಳಿದ್ದಾಳೆ. ಈ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದ ಪೋಷಕರು ಆಕೆಗೆ ಇದರಿಂದಾಗಿ ನಿನ್ನ ಅಕ್ಕನ ಜೀವನ ಹಾಳಾಗುತ್ತದೆ, ಇದನ್ನು ಇಲ್ಲೇ ಬಿಟ್ಟು ಬಿಡು ಎಂದು ಬುದ್ದಿ ಹೇಳಿದ್ದಾರೆ.

ಆದರೆ ಹಠ ಬಿಡದ ಇಂದಿರಾ ಭಾವನವರ ಜೊತೆ ನನ್ನ ಜೀವನ ಹಂಚಿಕೊಳ್ಳಲು ಬಯಸಿದ್ದೇನೆ ಎಂದು ಹೇಳಿದ್ದಾಳೆ. ಈ ಸಮಯದಲ್ಲಿ ಕುಟುಂಬದ ಹಿರಿಯರು ಮನವೊಲಿಸಲು ಮುಂದಾದ ವೇಳೆ ಯುವತಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನೂ ಓದಿ: Aanvi Kamdar: ರೀಲ್ಸ್ ಮಾಡುವ ವೇಳೆ 300 ಅಡಿ ಜಲಪಾತಕ್ಕೆ ಬಿದ್ದು ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್ ಸಾವು

ಸೋಮವಾರ ಬೆಳಗ್ಗೆ ಇಂದಿರಾ ಮನೆಯಿಂದ ಹೊರಗೆ ಹೋಗಿ ಕೀಟನಾಶಕ ಸೇವಿಸಿದ್ದು, ಮನೆಯ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕುಸಿದು ಬಿದ್ದಿದ್ದು, ಕೂಡಲೇ ಕುಟುಂಬಸ್ಥರು ಆಕೆಯನ್ನು ಉಸ್ಮಾನಿಯಾ ಆಸ್ಪತ್ರೆಗೆ ಕರೆದ್ಯೊಯ್ದಿದ್ದಾರೆ. ಆದರೆ ಇಂದಿರಾ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ