Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಗಂಡನೇ ಬೇಕು, ಆತನನ್ನೇ ಮದುವೆಯಾಗುತ್ತೇನೆಂದು ಹಠ ಹಿಡಿದ ಯುವತಿ! ಆಮೇಲೆನಾಯ್ತು?

ತನ್ನ ಅಕ್ಕನ ಗಂಡನನ್ನು ಪ್ರೀತಿಸುತ್ತಿದ್ದ ಯುವತಿ ಇಂದಿರಾ , ಆತನನ್ನೇ ಮದುವೆಯಾಗುವುದಾಗಿ ಪೋಷಕರಿಗೆ ಹೇಳಿದ್ದಾಳೆ. ಈ ವಿಷಯ ತಿಳಿದು ಆಘಾತಕ್ಕೊಳಗಾದ ಪೋಷಕರು ಇದರಿಂದಾಗಿ ನಿನ್ನ ಅಕ್ಕನ ಜೀವನ ಹಾಳಾಗುತ್ತದೆ, ಇದನ್ನು ಇಲ್ಲೇ ಬಿಟ್ಟು ಬಿಡು ಎಂದು ಬುದ್ದಿವಾದ ಹೇಳಿದ್ದಾರೆ. ಇದರಿಂದ ನೊಂದ ಯುವತಿ ಮಾಡಿದ್ದೇನು ಗೊತ್ತಾ?

ಅಕ್ಕನ ಗಂಡನೇ ಬೇಕು, ಆತನನ್ನೇ ಮದುವೆಯಾಗುತ್ತೇನೆಂದು ಹಠ ಹಿಡಿದ ಯುವತಿ! ಆಮೇಲೆನಾಯ್ತು?
ಅಕ್ಕನ ಗಂಡನೇ ಬೇಕು ಎಂದ ಯುವತಿ
Follow us
ಅಕ್ಷತಾ ವರ್ಕಾಡಿ
|

Updated on: Jul 18, 2024 | 2:57 PM

ತೆಲಂಗಾಣ: ತನ್ನ ಸ್ವಂತ ಅಕ್ಕನ ಗಂಡನನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದು, ಈ ಸಂಬಂಧವನ್ನು ಮನೆಯವರು ಒಪ್ಪದೇ ಇದ್ದಾಗ ಯುವತಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​​​​ನ ಹಯಾತ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಕ್ಕನ ಮದುವೆಯಾದ ದಿನದಿಂದ ತನ್ನ ಭಾವನನ್ನು ಪ್ರೀತಿಸುತ್ತಿದ್ದ ಯುವತಿ ಇಂದಿರಾ , ಆತನನ್ನೇ ಮದುವೆಯಾಗುವುದಾಗಿ ಪೋಷಕರಿಗೆ ಹೇಳಿದ್ದಾಳೆ. ಈ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದ ಪೋಷಕರು ಆಕೆಗೆ ಇದರಿಂದಾಗಿ ನಿನ್ನ ಅಕ್ಕನ ಜೀವನ ಹಾಳಾಗುತ್ತದೆ, ಇದನ್ನು ಇಲ್ಲೇ ಬಿಟ್ಟು ಬಿಡು ಎಂದು ಬುದ್ದಿ ಹೇಳಿದ್ದಾರೆ.

ಆದರೆ ಹಠ ಬಿಡದ ಇಂದಿರಾ ಭಾವನವರ ಜೊತೆ ನನ್ನ ಜೀವನ ಹಂಚಿಕೊಳ್ಳಲು ಬಯಸಿದ್ದೇನೆ ಎಂದು ಹೇಳಿದ್ದಾಳೆ. ಈ ಸಮಯದಲ್ಲಿ ಕುಟುಂಬದ ಹಿರಿಯರು ಮನವೊಲಿಸಲು ಮುಂದಾದ ವೇಳೆ ಯುವತಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನೂ ಓದಿ: Aanvi Kamdar: ರೀಲ್ಸ್ ಮಾಡುವ ವೇಳೆ 300 ಅಡಿ ಜಲಪಾತಕ್ಕೆ ಬಿದ್ದು ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್ ಸಾವು

ಸೋಮವಾರ ಬೆಳಗ್ಗೆ ಇಂದಿರಾ ಮನೆಯಿಂದ ಹೊರಗೆ ಹೋಗಿ ಕೀಟನಾಶಕ ಸೇವಿಸಿದ್ದು, ಮನೆಯ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕುಸಿದು ಬಿದ್ದಿದ್ದು, ಕೂಡಲೇ ಕುಟುಂಬಸ್ಥರು ಆಕೆಯನ್ನು ಉಸ್ಮಾನಿಯಾ ಆಸ್ಪತ್ರೆಗೆ ಕರೆದ್ಯೊಯ್ದಿದ್ದಾರೆ. ಆದರೆ ಇಂದಿರಾ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!