AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಪರ ಟ್ವೀಟ್ ಮಾಡಿದ ಹುಂಡೈ: ಸೋಷಿಯಲ್ ಮೀಡಿಯಾದಲ್ಲಿ ತರಾಟೆಗೆ ತೆಗೆದುಕೊಂಡ ನೆಟ್ಟಿಗರು

ದಕ್ಷಿಣ ಕೋರಿಯಾದ ಹುಂಡೈ (Hyundai) ಕಾರು ಕಂಪನಿಯ ಪಾಕಿಸ್ತಾನದ ಘಟಕವು ಕಾಶ್ಮೀರ ಏಕತಾ ದಿನದ ಕುರಿತು ಮಾಡಿರುವ ಟ್ವೀಟ್ ಬಗ್ಗೆ ಭಾರತದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ

ಪಾಕ್ ಪರ ಟ್ವೀಟ್ ಮಾಡಿದ ಹುಂಡೈ: ಸೋಷಿಯಲ್ ಮೀಡಿಯಾದಲ್ಲಿ ತರಾಟೆಗೆ ತೆಗೆದುಕೊಂಡ ನೆಟ್ಟಿಗರು
ಕಾಶ್ಮೀರ
TV9 Web
| Edited By: |

Updated on: Feb 07, 2022 | 6:00 AM

Share

ಬೆಂಗಳೂರು: ದಕ್ಷಿಣ ಕೋರಿಯಾದ ಹುಂಡೈ (Hyundai) ಕಾರು ಕಂಪನಿಯ ಪಾಕಿಸ್ತಾನದ ಘಟಕವು ಕಾಶ್ಮೀರ ಏಕತಾ ದಿನದ ಕುರಿತು ಮಾಡಿರುವ ಟ್ವೀಟ್ ಬಗ್ಗೆ ಭಾರತದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಿಯಾ ಕಂಪನಿಯು ಸಹ ಕಾಶ್ಮೀರದ ವಿಚಾರದಲ್ಲಿ ಹಗುರವಾಗಿ ಮಾತನಾಡಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ #BoycottHyundai ಹ್ಯಾಷ್​ಟ್ಯಾಗ್ ಟ್ರೆಂಡ್ ಆಗುತ್ತಿದೆ. ಸಾವಿರಾರು ಜನರು ಭಾರತದಿಂದ ಹುಂಡೈ ಕಂಪನಿಯನ್ನು ಬಹಿಷ್ಕರಿಸಬೇಕು, ಹುಂಡೈ ಕಾರುಗಳನ್ನು ಖರೀದಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಪೈಕಿ ಬಹುತೇಕರು ಹುಂಡೈ ಬದಲು ಟಾಟಾ ಕಂಪನಿಯ ಕಾರುಗಳನ್ನು ಖರೀದಿಸಬೇಕೆಂದು ಕರೆ ನೀಡುತ್ತಿದ್ದಾರೆ.

ಕಾಶ್ಮೀರದ ಸಹೋದರರ ತ್ಯಾಗವನ್ನು ಸ್ಮರಿಸುತ್ತೇವೆ. ಅವರು ಇಂದಿಗೂ ನಡೆಸುತ್ತಿರುವ ಸ್ವಾತಂತ್ರ್ಯ ಹೋರಾಟವನ್ನು ಗೌರವಿಸುತ್ತೇವೆ ಎಂದು ಹುಂಡೈ ಕಂಪನಿಯ ಪಾಕಿಸ್ತಾನ ಘಟಕ (Hyundai Pakistan) ಘಟಕವು ಟ್ವೀಟ್ ಮಾಡಿದೆ. ಈ ಟ್ವೀಟ್ ಬಗ್ಗೆ ಭಾರತೀಯರು ವ್ಯಾಪಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹುಂಡೈ ಕಂಪನಿಯ ಭಾರತ ಘಟಕವು ಸ್ಪಷ್ಟನೆ ನೀಡಿದೆ. ಆದರೆ ಕಂಪನಿಯು ಭಾರತೀಯರಲ್ಲಿ ಕ್ಷಮೆ ಯಾಚಿಸಿಲ್ಲ.

ಹುಂಡೈ ಕಂಪನಿಯು ಭಾರತದಲ್ಲಿ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಭಾರತದ ಪರವಾಗಿ ನಾವಿದ್ದೇವೆ. ಭಾರತದ ಬಗ್ಗೆ ಹುಂಡೈ ಕಂಪನಿಯ ನಿಲುವನ್ನು ಪ್ರಶ್ನಿಸುವಂಥ ಕೆಲ ಪೋಸ್ಟ್​ಗಳನ್ನು ಹಲವು ಮಾಡುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಭಾರತಕ್ಕೆ ಹುಂಡೈ 2ನೇ ಮನೆಯಿದ್ದಂತೆ. ನಾವು ಈ ದೇಶದ ಸೇವೆಗೆ ಬದ್ಧರಾಗಿದ್ದೇವೆ. ಹುಂಡೈ ಬಗ್ಗೆ ತಪ್ಪು ಮಾಹಿತಿ ಹರಡುತ್ತಿರುವುದನ್ನು ನಾವು ಖಂಡಿಸುತ್ತೇವೆ ಎಂದಿದೆ. ಭಾರತ ಮತ್ತು ಭಾರತೀಯರ ಅಭ್ಯುದಯಕ್ಕಾಗಿ ನಾವು ಶ್ರಮಿಸುತ್ತೇವೆ ಎಂದು ಹುಂಡೈ ತನ್ನ ಅಧಿಕೃತ ಹೇಳಿಕೆಯನ್ನು ಟ್ವೀಟ್ ಮಾಡಿದೆ.

ಆದರೆ ಈ ಸ್ಪಷ್ಟನೆಯನ್ನು ಬಹುತೇಕರು ಒಪ್ಪಿಲ್ಲ. ‘ಇಲ್ಲ, ಹುಂಡೈ. ಈ ಹೇಳಿಕೆಯಿಂದ ಏನನ್ನೂ ಸಾಧಿಸಿದಂತೆ ಆಗಲಿಲ್ಲ. ಹುಂಡೈನ ಪಾಕಿಸ್ತಾನ ಘಟಕ ಮಾಡಿರುವ ಟ್ವೀಟ್​ಗೆ ಸ್ಪಷ್ಟವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಎಲ್ಲ ಭಾರತೀಯರೂ ಹುಂಡೈ ಉತ್ಪನ್ನಗಳಿಗೆ ಬಹಿಷ್ಕಾರ ಹಾಕಲಿದ್ದಾರೆ’ ಎಂದು ಹಲವರು ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ಮಜವಾದ ಚರ್ಚೆಗೆ ಕಾರಣವಾಯ್ತು ರಾಹುಲ್ ಗಾಂಧಿ ಟ್ವಿಟರ್​​ಗೆ ಬರೆದ ಪತ್ರ; ನೆಟ್ಟಿಗರು ಹೇಳಿದ್ದೇನು? ಇಲ್ಲಿದೆ ನೋಡಿ

ಇದನ್ನೂ ಓದಿ: ಮತ್ತೆ ಭಾರತೀಯರ ಕೆಂಗಣ್ಣಿಗೆ ಗುರಿಯಾದ ಅಮೇಜಾನ್​; ಟ್ವಿಟರ್​ನಲ್ಲಿ ಟ್ರೆಂಡ್​ ಆಗ್ತಿದೆ Boycott Amazon ಹ್ಯಾಷ್​ಟ್ಯಾಗ್​

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ