AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಪರ ಟ್ವೀಟ್ ಮಾಡಿದ ಹುಂಡೈ: ಸೋಷಿಯಲ್ ಮೀಡಿಯಾದಲ್ಲಿ ತರಾಟೆಗೆ ತೆಗೆದುಕೊಂಡ ನೆಟ್ಟಿಗರು

ದಕ್ಷಿಣ ಕೋರಿಯಾದ ಹುಂಡೈ (Hyundai) ಕಾರು ಕಂಪನಿಯ ಪಾಕಿಸ್ತಾನದ ಘಟಕವು ಕಾಶ್ಮೀರ ಏಕತಾ ದಿನದ ಕುರಿತು ಮಾಡಿರುವ ಟ್ವೀಟ್ ಬಗ್ಗೆ ಭಾರತದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ

ಪಾಕ್ ಪರ ಟ್ವೀಟ್ ಮಾಡಿದ ಹುಂಡೈ: ಸೋಷಿಯಲ್ ಮೀಡಿಯಾದಲ್ಲಿ ತರಾಟೆಗೆ ತೆಗೆದುಕೊಂಡ ನೆಟ್ಟಿಗರು
ಕಾಶ್ಮೀರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 07, 2022 | 6:00 AM

Share

ಬೆಂಗಳೂರು: ದಕ್ಷಿಣ ಕೋರಿಯಾದ ಹುಂಡೈ (Hyundai) ಕಾರು ಕಂಪನಿಯ ಪಾಕಿಸ್ತಾನದ ಘಟಕವು ಕಾಶ್ಮೀರ ಏಕತಾ ದಿನದ ಕುರಿತು ಮಾಡಿರುವ ಟ್ವೀಟ್ ಬಗ್ಗೆ ಭಾರತದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಿಯಾ ಕಂಪನಿಯು ಸಹ ಕಾಶ್ಮೀರದ ವಿಚಾರದಲ್ಲಿ ಹಗುರವಾಗಿ ಮಾತನಾಡಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ #BoycottHyundai ಹ್ಯಾಷ್​ಟ್ಯಾಗ್ ಟ್ರೆಂಡ್ ಆಗುತ್ತಿದೆ. ಸಾವಿರಾರು ಜನರು ಭಾರತದಿಂದ ಹುಂಡೈ ಕಂಪನಿಯನ್ನು ಬಹಿಷ್ಕರಿಸಬೇಕು, ಹುಂಡೈ ಕಾರುಗಳನ್ನು ಖರೀದಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಪೈಕಿ ಬಹುತೇಕರು ಹುಂಡೈ ಬದಲು ಟಾಟಾ ಕಂಪನಿಯ ಕಾರುಗಳನ್ನು ಖರೀದಿಸಬೇಕೆಂದು ಕರೆ ನೀಡುತ್ತಿದ್ದಾರೆ.

ಕಾಶ್ಮೀರದ ಸಹೋದರರ ತ್ಯಾಗವನ್ನು ಸ್ಮರಿಸುತ್ತೇವೆ. ಅವರು ಇಂದಿಗೂ ನಡೆಸುತ್ತಿರುವ ಸ್ವಾತಂತ್ರ್ಯ ಹೋರಾಟವನ್ನು ಗೌರವಿಸುತ್ತೇವೆ ಎಂದು ಹುಂಡೈ ಕಂಪನಿಯ ಪಾಕಿಸ್ತಾನ ಘಟಕ (Hyundai Pakistan) ಘಟಕವು ಟ್ವೀಟ್ ಮಾಡಿದೆ. ಈ ಟ್ವೀಟ್ ಬಗ್ಗೆ ಭಾರತೀಯರು ವ್ಯಾಪಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹುಂಡೈ ಕಂಪನಿಯ ಭಾರತ ಘಟಕವು ಸ್ಪಷ್ಟನೆ ನೀಡಿದೆ. ಆದರೆ ಕಂಪನಿಯು ಭಾರತೀಯರಲ್ಲಿ ಕ್ಷಮೆ ಯಾಚಿಸಿಲ್ಲ.

ಹುಂಡೈ ಕಂಪನಿಯು ಭಾರತದಲ್ಲಿ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಭಾರತದ ಪರವಾಗಿ ನಾವಿದ್ದೇವೆ. ಭಾರತದ ಬಗ್ಗೆ ಹುಂಡೈ ಕಂಪನಿಯ ನಿಲುವನ್ನು ಪ್ರಶ್ನಿಸುವಂಥ ಕೆಲ ಪೋಸ್ಟ್​ಗಳನ್ನು ಹಲವು ಮಾಡುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಭಾರತಕ್ಕೆ ಹುಂಡೈ 2ನೇ ಮನೆಯಿದ್ದಂತೆ. ನಾವು ಈ ದೇಶದ ಸೇವೆಗೆ ಬದ್ಧರಾಗಿದ್ದೇವೆ. ಹುಂಡೈ ಬಗ್ಗೆ ತಪ್ಪು ಮಾಹಿತಿ ಹರಡುತ್ತಿರುವುದನ್ನು ನಾವು ಖಂಡಿಸುತ್ತೇವೆ ಎಂದಿದೆ. ಭಾರತ ಮತ್ತು ಭಾರತೀಯರ ಅಭ್ಯುದಯಕ್ಕಾಗಿ ನಾವು ಶ್ರಮಿಸುತ್ತೇವೆ ಎಂದು ಹುಂಡೈ ತನ್ನ ಅಧಿಕೃತ ಹೇಳಿಕೆಯನ್ನು ಟ್ವೀಟ್ ಮಾಡಿದೆ.

ಆದರೆ ಈ ಸ್ಪಷ್ಟನೆಯನ್ನು ಬಹುತೇಕರು ಒಪ್ಪಿಲ್ಲ. ‘ಇಲ್ಲ, ಹುಂಡೈ. ಈ ಹೇಳಿಕೆಯಿಂದ ಏನನ್ನೂ ಸಾಧಿಸಿದಂತೆ ಆಗಲಿಲ್ಲ. ಹುಂಡೈನ ಪಾಕಿಸ್ತಾನ ಘಟಕ ಮಾಡಿರುವ ಟ್ವೀಟ್​ಗೆ ಸ್ಪಷ್ಟವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಎಲ್ಲ ಭಾರತೀಯರೂ ಹುಂಡೈ ಉತ್ಪನ್ನಗಳಿಗೆ ಬಹಿಷ್ಕಾರ ಹಾಕಲಿದ್ದಾರೆ’ ಎಂದು ಹಲವರು ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ಮಜವಾದ ಚರ್ಚೆಗೆ ಕಾರಣವಾಯ್ತು ರಾಹುಲ್ ಗಾಂಧಿ ಟ್ವಿಟರ್​​ಗೆ ಬರೆದ ಪತ್ರ; ನೆಟ್ಟಿಗರು ಹೇಳಿದ್ದೇನು? ಇಲ್ಲಿದೆ ನೋಡಿ

ಇದನ್ನೂ ಓದಿ: ಮತ್ತೆ ಭಾರತೀಯರ ಕೆಂಗಣ್ಣಿಗೆ ಗುರಿಯಾದ ಅಮೇಜಾನ್​; ಟ್ವಿಟರ್​ನಲ್ಲಿ ಟ್ರೆಂಡ್​ ಆಗ್ತಿದೆ Boycott Amazon ಹ್ಯಾಷ್​ಟ್ಯಾಗ್​

ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್