AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಡಿಬಾಸ್ ಜೈಲಿಂದ ಹೊರಗಡೆ ಬಂದಿಲ್ಲಾಂದ್ರೆ ನನ್ ಬದುಕಿರೋಲ್ಲ, ದರ್ಶನ್ ಅಭಿಮಾನಿಯ ಹುಚ್ಚಾಟ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಈ ಕೊಲೆ ಕೇಸ್ ರಾಜ್ಯದ್ಯಂತ ಸಂಚಲನ ಸೃಷ್ಟಿಸಿದ್ದು, ನಮ್ ಡಿ ಬಾಸ್ ಯಾವುದೇ ತಪ್ಪು ಮಾಡಿಲ್ಲ ಅಂತ ಅಭಿಮಾನಿಗಳೆಲ್ಲಾ ಹೇಳ್ತಿದ್ದಾರೆ. ಈ ನಡುವೆ ಇಲ್ಲೊಬ್ಬ ಅಂಧಾಭಿಮಾನಿ ಡಿ ಬಾಸ್ ಏನಾದ್ರೂ ಜೈಲಿಂದ ಹೊರಗಡೆ ಬಂದಿಲ್ಲಾಂದ್ರೆ ನಾನು ಬದುಕಿರೋಲ್ಲ, ಎಲ್ಲಾದ್ರೂ ಹೋಗಿ ಸಾಯ್ತೀನಿ ಎಂದು ಹುಚ್ಚು ಮಾತುಗಳನ್ನಾಡಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ.

Viral Video: ಡಿಬಾಸ್ ಜೈಲಿಂದ ಹೊರಗಡೆ ಬಂದಿಲ್ಲಾಂದ್ರೆ ನನ್ ಬದುಕಿರೋಲ್ಲ, ದರ್ಶನ್ ಅಭಿಮಾನಿಯ ಹುಚ್ಚಾಟ
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jun 17, 2024 | 6:13 PM

Share

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಕರ್ನಾಟಕದಾದ್ಯಂತ ದೊಡ್ಡ ಅಭಿಮಾನಿ ಬಳಗವೇ ಇದೆ. ಆದರೆ ಇದೀಗ ನಟ ದರ್ಶನ್ ಅವರನ್ನು  ನಟಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು  ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಈ ಸುದ್ದಿ ಫ್ಯಾನ್ಸ್ ಗಳಿಗೆ ದೊಡ್ಡ ಶಾಕ್ ನೀಡಿದೆ. ದರ್ಶನ್ ಕೊಲೆ ಆರೋಪಿಯಾಗಿದ್ದರೂ ಕೆಲವು ಹುಚ್ಚು ಅಭಿಮಾನಿಗಳು ನಮ್ ಡಿ ಬಾಸ್ ಯಾವುದೇ ತಪ್ಪು ಮಾಡಿಲ್ಲ, ನಮ್ಮ ಸಪೋರ್ಟ್ ಯಾವತ್ತಿದ್ರೂ ಅವರಿಗೆ ಎಂದೆಲ್ಲಾ ಹೇಳ್ತಿದ್ದಾರೆ. ಈ ನಡುವೆ ಇಲ್ಲೊಬ್ಬ ಅಂಧಾಭಿಮಾನಿ ಡಿ ಬಾಸ್ ಏನಾದ್ರೂ ಜೈಲಿಂದ ಹೊರಗಡೆ ಬಂದಿಲ್ಲಾಂದ್ರೆ ನಾನು ಬದುಕಿರೋಲ್ಲ, ಎಲ್ಲಾದ್ರೂ ಹೋಗಿ ಸಾಯ್ತೀನಿ ಅಂತ ಹುಚ್ಚು ಮಾತುಗಳನ್ನಾಡಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗುತ್ತಿದೆ.

ಈ ವಿಡಿಯೋವನ್ನು ʼಕರ್ನಾಟಕ ನ್ಯಾಯ ಬೆಲೆ ಅಂಗಡಿʼ ಎಂಬ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ನಟ ದರ್ಶನ್ ಬಂಧನಕ್ಕೊಳಗಾದ ಆಘಾತದಲ್ಲಿ ಅಭಿಮಾನಿಯೊಬ್ಬ ನಾನು ಇನ್ಮೇಲೆ ಬದುಕಿರೋಕೆ ಚಾನ್ಸೇ ಇಲ್ಲ. ಡಿ ಬಾಸ್ ಹೊರಗಡೆ ಬಂದಿಲ್ಲಾ ಅಂದ್ರೆ ನನ್ ಹೆಣ ಕೂಡಾ ಸಿಗೋಲ್ಲ, ಎಲ್ಲೋ ಮೂಲೆಗೆ ಹೋಗಿ ಸತ್ತೋಗ್ತೀನಿ ಎಂದು ಹೇಳುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: 80ರ ವೃದ್ಧನನ್ನು ಪ್ರೀತಿಸಿ ಮದುವೆಯಾದ 23ರ ಯುವತಿ, ಅಪರೂಪದ ಲವ್ ಸ್ಟೋರಿ 

ವೈರಲ್​​ ವಿಡಿಯೋ ಇಲ್ಲಿದೆ:

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 7 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಕೆಲವರು ಈ ಹುಚ್ಚಾಟ ಬಿಟ್ಟು ಹೋಗಿ ಅಮ್ಮ ಅಪ್ಪನನ್ನು ಚೆನ್ನಾಗಿ ನೋಡ್ಕೋ ಎಂದು ಹೇಳಿದ್ರೆ, ಇನ್ನೂ ಅನೇಕರು ಒಳ್ಳೆಯ ನಿರ್ಧಾರ ಮೊದ್ಲು ಇಲ್ಲಿಂದ ಹೋಗ್ಬಿಡು ಎಂದು ಕಾಮೆಂಟ್ಸ್ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ