AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಸ್ಟಿಕರ್​; ಯುಪಿಎಸ್​ಸಿ ಆಕಾಂಕ್ಷಿಗಳಿಗೆ ಹಾರೈಸಲು ಹೀಗೊಂದು ಉಪಾಯ ಕಂಡುಕೊಂಡ ಐಎಎಸ್​ ಅಧಿಕಾರಿ

UPSC : ಐಎಎಸ್​ ಅಧಿಕಾರಿ ಅವನೀಶ ಶರಣ ಅವರ ಈ ನಡೆಗೆ, ‘ಕಷ್ಟಪಟ್ಟು ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅನೇಕರಿಗೆ ನಿಮ್ಮ ಈ ಸ್ಪಂದನೆ ಶಕ್ತಿ ನೀಡುವಲ್ಲಿ ಎರಡು ಮಾತಿಲ್ಲ, ದೇವರು ನಿಮ್ಮನ್ನು ಚೆನ್ನಾಗಿಟ್ಟಿರಲಿ’ ಎಂದಿದ್ದಾರೆ ನೆಟ್ಟಿಗರು.

ಬೈಕ್​ ಸ್ಟಿಕರ್​; ಯುಪಿಎಸ್​ಸಿ ಆಕಾಂಕ್ಷಿಗಳಿಗೆ ಹಾರೈಸಲು ಹೀಗೊಂದು ಉಪಾಯ ಕಂಡುಕೊಂಡ ಐಎಎಸ್​ ಅಧಿಕಾರಿ
IAS Awanish Sharan shares about a bike sticker netizens react
TV9 Web
| Edited By: |

Updated on:Nov 08, 2022 | 10:42 AM

Share

Viral : ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವುದೆಂದರೆ ಎಷ್ಟು ಕಷ್ಟ ಎನ್ನುವುದು ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವುದೇ. ಅನೇಕ ಪ್ರಯತ್ನಗಳ ನಂತರವೂ ಅಲ್ಲಿ ಫಲ ಸಿಗುವ ಬಗ್ಗೆ ಖಚಿತತೆ ಇರುವುದಿಲ್ಲ. ಆದರೂ ಆಕಾಂಕ್ಷಿಗಳು ಈ ಸವಾಲನ್ನು ದಿಟ್ಟವಾಗಿ ತೆಗೆದುಕೊಳ್ಳಲೇಬೇಕು. ಐಎಎಸ್​ ಅಧಿಕಾರಿ ಅವನೀಶ ಶರಣ್​ ತಮ್ಮ ಬೈಕ್​ ಮೇಲೆ ಸ್ಟಿಕರ್ ಅಂಟಿಸಿಕೊಂಡು ಪೋಸ್ಟ್ ಮಾಡಿದ ಫೋಟೋ ಇದೀಗ ವೈರಲ್ ಆಗುತ್ತಿದೆ. UPSC-Aspirants ಎಂಬ ಸ್ಟಿಕರ್ ಮೂಲಕ ಯುಪಿಎಸ್​ಸಿ ಅಭ್ಯರ್ಥಿಗಳಿಗೆ ಶುಭ ಹಾರೈಸಿದ್ದಾರೆ. ನೆಟ್ಟಿಗರು ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ.

ಸಾಮಾನ್ಯವಾಗಿ ಬೈಕ್​ಗಳ ಮೇಲೆ ತಮ್ಮ ಅಥವಾ ಕುಟುಂಬಸ್ಥರ ಹೆಸರುಗಳನ್ನು ಅಥವಾ ಇನ್ನೇನೋ ಟ್ಯಾಗ್​​ಲೈನ್​ಗಳನ್ನು ಬೈಕ್​ಗಳ ಮೇಲೆ ಅಂಟಿಸಿಕೊಂಡಿರುವುದನ್ನು ನೋಡಿರುತ್ತೀರಿ. ಆದರೆ ಐಎಎಸ್​ ಅಧಿಕಾರಿ ಅವನೀಶ ಶರಣ್ ತಮ್ಮ ಬೈಕಿಗೆ ಅಂಟಿಸಿಕೊಂಡ ಈ ಸ್ಟಿಕರ್​ ನೆಟ್ಟಿಗರನ್ನು ಕುತೂಹಲಕ್ಕೆ ಬೀಳಿಸಿದೆ. ಜೊತೆಗೆ ಯುಪಿಎಸ್​ಸಿ ಅಭ್ಯರ್ಥಿಗಳಿಗೆ ಶಕ್ತಿ ಮತ್ತು ಪ್ರೋತ್ಸಾಹವನ್ನು ನೀಡಿದೆ.

ಛತ್ತೀಸ್​ಗಢ ಕೇಡರ್​ನಲ್ಲಿರುವ ಈ ಅಧಿಕಾರಿಗಳ ಈ ನಡೆಯನ್ನು ಕೆಲವರು ಶ್ಲಾಘಿಸಿದ್ದಾರೆ. ಆಗಾಗ ಅವನೀಶ ಸಾಮಾಜಿಕ ಜಾಲತಾಣದಲ್ಲಿ ಆಕಸ್ತಿಕರ ಮತ್ತು ಪ್ರೇರಣಾದಾಯಕ ವಿಷಯಗಳನ್ನು ಪೋಸ್ಟ್​ ಮಾಡುವ ಮೂಲಕ ಜನಜನಿತರಾಗಿದ್ದಾರೆ.

ಇದೊಂದು ಸಕಾರಾತ್ಮಕ ನಡೆ, ಕೆಲವರು ಮಾತ್ರ ಇತರರ ಬಗ್ಗೆ ಯೋಚಿಸುತ್ತಾರೆ ಎಂದಿದ್ದಾರೆ ಒಬ್ಬರು. ಪೇಪರ್​ ಕೊಟ್ಟುಬಿಡಿ ಎಂದು ಹಗೂರಾಗಿ ಮಾತನಾಡಿದ್ದಾರೆ ಇನ್ನೂ ಒಬ್ಬರು. ಕಷ್ಟಪಟ್ಟು ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅನೇಕರಿಗೆ ನಿಮ್ಮ ಈ ಸ್ಪಂದನೆ ಶಕ್ತಿ ನೀಡುವಲ್ಲಿ ಎರಡು ಮಾತಿಲ್ಲ, ದೇವರು ನಿಮ್ಮನ್ನು ಚೆನ್ನಾಗಿಟ್ಟಿರಲಿ ಎಂದಿದ್ದಾರೆ ಮತ್ತೊಬ್ಬರು.

ಇಂದು ಒಟ್ಟಾರೆಯಾಗಿ ಬೇಕಿರುವುದು ಪರಸ್ಪರ ಒಳಿತನ್ನು ಹಾರೈಸುವ ವಿಶಾಲ ಮನೋಭಾವ.

ನಿಮಗೇನು ಅನ್ನಿಸಿತು ಈ ಪೋಸ್ಟ್​ ನೋಡಿ?

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 10:42 am, Tue, 8 November 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?