AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ವೈಫೈ ಸಮಸ್ಯೆಯಾಗಿದೆ ಎಂದು ಏರ್​​​​ಟೆಲ್​​​ ಎಂಜಿನಿಯರ್​​​ನ ಕಾಲ್ಬೆರಳು ಮುರಿದ ಐಎಎಸ್ ಅಧಿಕಾರಿ 

ಮನೆಯ ವೈಫೈ ಸಮಸ್ಯೆಯಿಂದ ಅಸಮಾದಾನಗೊಂಡ ಐಎಎಸ್ ಅಧಿಕಾರಿ ಅಮನ್ ಮಿತ್ತಲ್ ಮತ್ತು ಅವರ ಸಹೋದರ ಏರ್​​​​ಟೆಲ್​​​ ಕಂಪೆನಿಯ ಇಬ್ಬರು ಎಂಜಿನಿಯರ್​​ಗಳ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ. ಪರಿಣಾಮವಾಗಿ ಅದರಲ್ಲಿ ಒಬ್ಬ  ಎಂಜಿನಿಯರ್​​ನ  ಕಾಲ್ಬೆರಳು ಮುರಿತಕ್ಕೊಳಗಾಗಿದೆ. ಈ ಘಟನೆಯು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಮಿತ್ತಲ್ ಸಹೋದರರ  ವಿರುದ್ಧ ಎಫ್.ಐ.ಆರ್ ದಾಖಲಾದೆ ಎಂದು ವರದಿಗಳು ತಿಳಿಸಿವೆ.

ಮನೆಯಲ್ಲಿ ವೈಫೈ ಸಮಸ್ಯೆಯಾಗಿದೆ ಎಂದು ಏರ್​​​​ಟೆಲ್​​​ ಎಂಜಿನಿಯರ್​​​ನ ಕಾಲ್ಬೆರಳು ಮುರಿದ ಐಎಎಸ್ ಅಧಿಕಾರಿ 
ಮಾಲಾಶ್ರೀ ಅಂಚನ್​
| Edited By: |

Updated on: Jan 04, 2024 | 10:51 AM

Share

ಮನುಷ್ಯನಿಗೆ ಹಣ, ಆಸ್ತಿ, ಅಂತಸ್ತು, ಅಧಿಕಾರ ಈ ಎಲ್ಲಕ್ಕಿಂತ  ಮುಖ್ಯವಾಗಿ ಮಾನವೀಯ ಗುಣ ಇರಬೇಕು ಎಂದು ಹೇಳ್ತಾರೆ. ಆದರೆ ಇಂದು ಕೆಲವೊಬ್ಬರು ತಮ್ಮ ಹಣ, ಅಧಿಕಾರದ ಸೊಕ್ಕಿನಿಂದ ಸಾಮಾನ್ಯ ಜನರ ಮೇಲೆ ತಮ್ಮ ದರ್ಪ ತೋರಿಸುತ್ತಿದ್ದಾರೆ.  ಅದೇ ರೀತಿ ಇಲ್ಲೊಂದು ಘಟನೆ ನಡೆದಿದ್ದು, ಮನೆಯ ಇಂಟರ್ನೆಟ್ ರೂಟರ್ ಸಮಸ್ಯೆಯನ್ನು ಪರಿಹರಿಸಲು ಬಂದಂತಹ ಇಬ್ಬರು ಎಂಜಿನಿಯರ್ಗಳ ಮೇಲೆ ಐಎಎಸ್ ಅಧಿಕಾರಿ ಅಮನ್ ಮಿತ್ತಲ್ ಮತ್ತು ಅವರ ಸಹೋದರ ದೇವೇಶ್ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಪರಿಣಾಮವಾಗಿ ಎಂಜಿನಿಯರ್ ಒಬ್ಬರ ಕಾಲ್ಬೆರಳು ಮುರಿತಕ್ಕೊಳಗಾಗಿದೆ.

ಈ ಘಟನೆ ಮುಂಬೈಯ ಘನ್ಸೋಲಿಯಲ್ಲಿರುವ ಅಮನ್ ಮಿತ್ತಲ್ ಅವರ ಮನೆಯಲ್ಲಿ ನಡೆದಿದ್ದು, ಇಂಟರ್ನೆಟ್ ರೂಟರ್ ಸಮಸ್ಯೆಯನ್ನು ಸರಿಪಡಿಸಲು ಬಂದ ಏರ್​​​​ಟೆಲ್​​​ ಎಂಜಿನಿಯರ್ಗಳಾದ ಭೂಷನ್ ಗುಜರ್ ಮತ್ತು ಸಾಗರ್ ಮಂಧಾರೆ ಅವರ ಮೇಲೆ  ಅಮನ್ ಮಿತ್ತಲ್ ಮತ್ತು ಅವರ ಸಹೋದರ ಹಲ್ಲೆ ನಡೆಸಿದ್ದಾರೆ.

ಡಿಸೆಂಬರ್ 30 ರಂದು ಈ ಘಟನೆ ನಡೆದಿದ್ದು, ಮನೆಯ ವೈಫೈ ಸರಿಪಡಿಸುವ ವೇಳೆಯಲ್ಲಿ ಎಂಜಿನಿಯರ್ಗಳು ಮತ್ತು ಮಿತ್ತಲ್ ಸಹೋದರರ ನಡುವೆ ಮಾತಿನ ಚಕಮಕಿ ಏರ್ಪಟ್ಟಿದೆ.   ಕೊನೆಯಲ್ಲಿ ಕೋಪದ ಕೈಗೆ ಬುದ್ಧಿ ಕೊಟ್ಟು ಮಿತ್ತಲ್ ಸಹೋದದರು ರಾಡ್ ಮತ್ತು ಪೈಪ್ನಿಂದ ಎಂಜಿನಿಯರ್ಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಪರಿಣಾಮವಾಗಿ ಒಬ್ಬ ಎಂಜಿನಿಯರ್ ನ  ಕಾಲ್ಬೆರಳು ಮುರಿತಕ್ಕೊಳಗಾಗಿದೆ.

ಈ ಘಟನೆಯ ಬಳಿಕ 2015 ನೇ ಬ್ಯಾಚ್ನ ಐಎಎಸ್ ಅಧಿಕಾರಿ ಹಾಗೂ ಮಹರಾಷ್ಟ್ರ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಉಪ ಕಾರ್ಯದರ್ಶಿಯಾಗಿರುವ  ಅಮನ್ ಮಿತ್ತಲ್ ಮತ್ತು ಅವರ ಸಹೋದರ ದೇವೇಶ್ ವಿರುದ್ಧ  ಹಿಂಸಾಚಾರದ ಅರೋಪದ ಮೇಲೆ  ರಬಲೆ ಪೊಲೀಸ್ ಠಾಣೆಯಲ್ಲಿ  ಎಫ್.ಐ.ಆರ್ ದಾಖಲಿಸಲಾಗಿದೆ. ಈ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆದರೆ  ಆರೋಪಿಗಳನ್ನು ಇನ್ನೂ ಬಂಧಿಸಲಾಗಿಲ್ಲ. ಅಲ್ಲದೆ ಮಿತ್ತಲ್ ಸಹೋದರರು ಕೂಡಾ ಎಂಜಿನಿಯರ್ ಗಳ ವಿರುದ್ಧ ಪ್ರತಿ ದೂರನ್ನು ದಾಖಲಿಸಿದ್ದಾರೆ  ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ: ಬಹುಶಃ ಹೋಮ್ ಡೆಲಿವರಿ ಅಂದ್ರೆ ಇದೇ ಇರ್ಬೇಕು ನೋಡಿ…

ವಿಚಾರಣೆಗಾಗಿ ಅಮನ್ ಮಿತ್ತಲ್ ಮತ್ತು ದೇವೇಶ್ ಮಿತ್ತಲ್ ಅವರಿಗೆ ನೋಟಿಸ್ ನೀಡಿರುವುದಾಗಿ ರಬಲೆ ಪೊಲೀಸ್ ಠಾಣೆಯ ಹಿರಿಯ ಇನ್ಸ್ಪೆಕ್ಟರ್ ರಾಜೇಂದ್ರ ಕೋಟೆ ಪಾಟೀಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಎರಡೂ ಕಡೆಯವರು ಪರಸ್ಪರ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ. ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ