AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending: ಅರುಣಾಚಲ ಪ್ರದೇಶ ಮತ್ತು ಲಡಾಖ್​ಗೆ ಐಎಎಸ್ ದಂಪತಿ ವರ್ಗಾವಣೆ, ಶ್ವಾನದ ಪಯಣ ಯಾವ ಕಡೆ? ಇಲ್ಲಿದೆ ಟ್ರೋಲ್ಸ್

ಕ್ರೀಡಾಂಗಣವನ್ನು ಮುಚ್ಚಿಸಿ ಅದರೊಳಗೆ ಸಾಕು ನಾಯಿಯೊಂದಿಗೆ ವಾಕಿಂಗ್ ಮಾಡಿದ ಐಎಎಸ್ ದಂಪತಿಗಳು ಲಡಾಖ್ ಮತ್ತು ಅರುಣಾಚಲ ಪ್ರದೇಶಕ್ಕೆ ವರ್ಗಾವಣೆ ಮಾಡಲಾಗಿದೆ. ಇದೀಗ ಅವರ ಸಾಕು ನಾಯಿಯ ಭವಿಷ್ಯದ ಬಗ್ಗೆ ಸಖತ್ ಟ್ರೋಲ್ ಆಗುತ್ತಿದೆ.

Trending: ಅರುಣಾಚಲ ಪ್ರದೇಶ ಮತ್ತು ಲಡಾಖ್​ಗೆ ಐಎಎಸ್ ದಂಪತಿ ವರ್ಗಾವಣೆ, ಶ್ವಾನದ ಪಯಣ ಯಾವ ಕಡೆ? ಇಲ್ಲಿದೆ ಟ್ರೋಲ್ಸ್
ನಾಯಿ ಜೊತೆ ಐಎಎಸ್ ದಂಪತಿಗಲ ವಾಕಿಂಕ್
TV9 Web
| Updated By: Rakesh Nayak Manchi|

Updated on:May 27, 2022 | 11:35 AM

Share

ಹಿರಿಯ ಐಎಎಸ್​ ಅಧಿಕಾರಿ (IAS Officer) ಸಂಜೀವ್ ಖಿರ್ವಾರ್ ಮತ್ತು ಇವರ ಪತ್ನಿಯೂ ಆಗಿರುವ ಐಎಎಸ್ ಅಧಿಕಾರಿ ರಿಂಕು ದುಗ್ಗಾ ಅವರನ್ನು ಕ್ರಮವಾಗಿ ಲಡಾಖ್ (Ladakh)​ಗೆ ಹಾಗೂ ಅರುಣಾಚಲ ಪ್ರದೇಶ (Arunachal Pradesh)ಕ್ಕೆ ವರ್ಗಾವಣೆ ಮಾಡಲಾಗಿದೆ. ಇದಕ್ಕೆ ಕಾರಣವೆಂದರೆ, ದೆಹಲಿಯ ತ್ಯಾಗರಾಜ್ ಕ್ರೀಡಾಂಗಣದಲ್ಲಿ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಂಡಿರುವುದು. ಸಾಮಾನ್ಯ ಸಮಯಕ್ಕಿಂತ ಮುಂಚಿತವಾಗಿ ರಾತ್ರಿ 7 ಗಂಟೆಗೆ ಕ್ರೀಡಾಂಗಣವನ್ನು ಮುಚ್ಚಿಸಿ ದಂಪತಿಗಳು ಅದರೊಳಗೆ ತಮ್ಮ ಸಾಕು ನಾಯಿಯೊಂದಿಗೆ ವಾಕಿಂಗ್ ಮಾಡುತ್ತಿದ್ದರು. ಇದರಿಂದ ಕ್ರೀಡಾಪಟುಗಳಿಗೆ ಅಡಚಣೆಯಾಗುತ್ತಿತ್ತು. ಅಧಿಕಾರಿಗಳ ನಡೆ ಪ್ರಶ್ನೆಗೆ ಗ್ರಾಸವಾಗಿ ಸುದ್ದಿಗಳು ಪ್ರಸಾರವಾದವು.

ಇದನ್ನೂ ಓದಿ: Trending: ಚೆಂಡು ಕಳೆದುಕೊಂಡು ದುಃಖಿತವಾಗಿರುವ ಮುದ್ದಿನ ಶ್ವಾನವನ್ನು ಸಮಾಧಾನ ಮಾಡುತ್ತಿರುವ ವಿಡಿಯೋ ವೈರಲ್

1994ರ ಐಎಎಸ್ ಬ್ಯಾಚ್​ನವರಾಗಿರುವ ಇವರು ಸದ್ಯ ಲಡಾಖ್​ ಹಾಗೂ ಅರುಣಾಚಲ ಪ್ರದೇಶಕ್ಕೆ ವರ್ಗಾವಣೆಯಾಗಿದ್ದು, ಈಗ ನೆಟ್ಟಿಗರನ್ನು ಕಾಡಿದ ಕಟ್ಟಕಡೇಯ ಪ್ರಶ್ನೆ ನಾಯಿಯ ಪಯಣ ಯಾವ ಕಡೆ? ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಟ್ರೋಲ್ ಕೂಡ ಆಗುತ್ತಿವೆ. ಅವುಗಳು ಈ ಕೆಳಗಿನಂತಿವೆ.

ಇದನ್ನೂ ಓದಿ: Trending: ಕಾಫಿ ಬೀಜಗಳ ಮೇಲೆ ಎಚ್ಚರಿಕೆಯಿಂದ ಕಣ್ಣಾಡಿಸಿ, ಈಗ ನೀವು ಏನನ್ನು ಗುರುತಿಸಿದ್ದೀರಾ?

ಇದನ್ನೂ ಓದಿ: Viral Video: ಸೆಲ್ಫಿ ವಿಡಿಯೋ ಮಾಡುವಾಗ ಬಂದು ಸ್ಕರ್ಟ್​ ಎತ್ತಿ ನೋಡುವುದೇ? ಛಿ! ನಾಟಿ ಮಂಕಿ

ಕ್ರೀಡಾಂಗಣದ ಸಮಯದ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿಯ ಸರ್ಕಾರಿ ಕ್ರೀಡಾಂಗಣಗಳನ್ನು ಸಂಜೆ 7 ಗಂಟಗೆ ಮುಚ್ಚಲಾಗುತ್ತದೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದೆ. ಎಲ್ಲಾ ಕ್ರೀಡಾಂಗಣಗಳು ರಾತ್ರಿ 10 ಗಂಟೆಯವರೆಗೆ ತೆರೆದಿರುತ್ತದೆ. ಕ್ರೀಡಾಪಟುಗಳು ಕ್ರೀಡಾಭ್ಯಾಸ ಮಾಡಬಹುದು ಎಂದು ಸೂಚಿಸಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:35 am, Fri, 27 May 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?