AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS Officer Pulkit Garg: ದುಬಾರಿ ಬೇಬಿ ಸಿಟ್ಟಿಂಗ್​ ಬದಲಾಗಿ ತನ್ನ ಮಗಳನ್ನು ಅಂಗನವಾಡಿಗೆ ಸೇರಿಸಿದ IAS ಅಧಿಕಾರಿ

ಈಗಿನ ಕಾಲದಲ್ಲಿ ತಮ್ಮ ಮಕ್ಕಳು ಖಾಸಗಿ ಶಾಲೆಯಲ್ಲಿ ಓದಿದರೆ ಒಳ್ಳೆಯದು ಎನ್ನುವ ಸಾಕಷ್ಟು ಜನರ ಮಧ್ಯೆ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಮೂರು ವರ್ಷದ ಮಗಳನ್ನು ಅಂಗನವಾಡಿಗೆ ಸೇರಿಸುವ ಮೂಲಕ ಸರ್ಕಾರಿ ಶಿಕ್ಷಣ ವ್ಯವಸ್ಥೆಯ ಬಗ್ಗೆ ನಂಬಿಕೆ ಮೂಡಿಸಿದ್ದಾರೆ. ದುಬಾರಿ ಶಿಕ್ಷಣದತ್ತ ಮುಖಮಾಡದೇ ಸರಳತೆ ಮೆರೆದಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ.

IAS Officer Pulkit Garg: ದುಬಾರಿ ಬೇಬಿ ಸಿಟ್ಟಿಂಗ್​ ಬದಲಾಗಿ ತನ್ನ ಮಗಳನ್ನು ಅಂಗನವಾಡಿಗೆ ಸೇರಿಸಿದ IAS ಅಧಿಕಾರಿ
ಪುಲ್ಕಿತ್ ಗರ್ಗ್
ಅಕ್ಷತಾ ವರ್ಕಾಡಿ
|

Updated on:Feb 03, 2026 | 12:03 PM

Share

ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವವರ ನಡುವೆ ಇಲೊಬ್ಬರು IAS ಅಧಿಕಾರಿ ತನ್ನ ಮೂರು ವರ್ಷ ಮಗಳನ್ನು ಅಂಗನವಾಡಿಗೆ ಸೇರಿಸುವ ಮೂಲಕ ಸಾಕಷ್ಟು ಜನರಿಗೆ ಮಾದರಿಯಾಗಿದ್ದಾರೆ. ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್ (DM) ಪುಲ್ಕಿತ್ ಗರ್ಗ್ ಅವರು ತಮ್ಮ ಮಗಳು ಶಿಯಾನನ್ನು ಅಂಗನವಾಡಿಗೆ ಸೇರಿಸುವ ಮೂಲಕ ದುಬಾರಿ ಶಿಕ್ಷಣದತ್ತ ಮುಖ ಮಾಡದೆ ಸರಳತೆ ಮೆರೆದು ಜನರ ಮೆಚ್ಚುಗೆ ಪಡೆದಿದ್ದಾರೆ.

ಭಾರತದಲ್ಲಿ ಅತ್ಯಂತ ಗೌರವಾನ್ವಿತ ಹಾಗೂ ಶಕ್ತಿಶಾಲಿ ನಾಗರಿಕ ಸೇವೆಯಲ್ಲಿರುವ ಪುಲ್ಕಿತ್ ಗರ್ಗ್ ಅವರಿಗೆ ತನ್ನ ಮಗಳನ್ನು ದುಬಾರಿ ಖಾಸಗಿ ಶಾಲೆಗಳಲ್ಲಿ ಓದಿಸುವುದು ಕಷ್ಟವೇನಲ್ಲ, ಆದರೂ ಕೂಡ ತನ್ನ ಸ್ಥಳೀಯ ಅಂಗನವಾಡಿಗೆ ಕೇಂದ್ರಕ್ಕೆ ಸೇರಿಸಿದ್ದಾರೆ. ಈ ನಿರ್ಧಾರವು ಅವರು ಸರಕಾರಿ ವ್ಯವಸ್ಥೆಯ ಮೇಲೆ ಇಟ್ಟಿರುವ ನಂಬಿಕೆಯ ಸಂಕೇತ ಎಂದು ಅಂಗನವಾಡಿ ಕಾರ್ಯಕರ್ತೆ ಸಪ್ನಾ ಸೋನಿ ಮಾಧ್ಯಮದ ಮುಂದೆ ತಿಳಿಸಿದ್ದಾರೆ.

ಪುಲ್ಕಿತ್ ಗರ್ಗ್ ಯಾರು?

ಪುಲ್ಕಿತ್ ಗರ್ಗ್ ಮೂಲತಃ ಹರಿಯಾಣದವರು. ಅವರು ಉತ್ತರ ಪ್ರದೇಶ ಕೇಡರ್‌ನ 2016 ಬ್ಯಾಚ್‌ನ ಐಎಎಸ್ ಅಧಿಕಾರಿ. ಚಿತ್ರಕೂಟದ ಜಿಲ್ಲಾಧಿಕಾರಿಯಾಗುವ ಮೊದಲು, ಪುಲ್ಕಿತ್ ಗರ್ಗ್ ಅವರನ್ನು ಝಾನ್ಸಿ ನಗರ ಪಾಲಿಕೆ ಆಯುಕ್ತರಾಗಿ ಮತ್ತು ಬನಾರಸ್ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾಗಿ ನೇಮಿಸಲಾಯಿತು. ಪುಲ್ಕಿತ್ ಗರ್ಗ್ ಅವರ ತಂದೆ ಪ್ರದೀಪ್ ಗರ್ಗ್ ಹರಿಯಾಣ ಗ್ರಾಮೀಣ ಬ್ಯಾಂಕಿನಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಪತ್ನಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಧಿಕಾರಿಯಾಗಿಯೂ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್

ಜಿಲ್ಲಾ ಮ್ಯಾಜಿಸ್ಟ್ರೇಟ್ ಹುದ್ದೆಯನ್ನು ಹೊಂದಿದ್ದರೂ, ಸರ್ಕಾರಿ ಶಿಕ್ಷಣ ಕೇಂದ್ರಗಳಲ್ಲಿ ನಡೆಯುತ್ತಿರುವ ಗುಣಮಟ್ಟದ ಸುಧಾರಣೆಗಳ ಬಗ್ಗೆ ಪುಲ್ಕಿತ್ ಗರ್ಗ್ ವಿಶ್ವಾಸ ಹೊಂದಿದ್ದು,ಒಂದು ವಿಶಿಷ್ಟ ಉಪಕ್ರಮದಲ್ಲಿ, ಅವರು ತಮ್ಮ ಮಗಳು ಶಿಯಾಳನ್ನು ತನ್ನ ಪ್ರಧಾನ ಕಚೇರಿಯ ಧನುಷ್ ಚೌಕದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಸೇರಿಸಿದ್ದಾರೆ.ಈ ಮೂಲಕ ದುಬಾರಿ ಶಿಕ್ಷಣದತ್ತ ಮುಖ ಮಾಡದೆ ಸರಳತೆ ಮೆರೆದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:01 pm, Tue, 3 February 26

ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು