AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ‘ನಮ್ಮ ಗ್ರಾಮಭಾರತದ ಅವಸ್ಥೆ’ ವಿದ್ಯುತ್ ಬದಲಾಗಿ ಎತ್ತುಗಳ ಬಳಕೆ

Jugaad : ‘ಗ್ರಾಮಭಾರತದ ಅನ್ವೇಷಣೆ’ ಅದ್ಭುತ! ಎಂದು ಐಎಎಸ್​ ಅಧಿಕಾರಿ ಶರಣ್ ಅವನೀಶ್ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ಇದು ಪ್ರಾಣಿಹಿಂಸೆಯನ್ನು ಉತ್ತೇಜಿಸುವಂತಿದೆ ಎಂದು ಟೀಕಿಸಿದ್ದಾರೆ ನೆಟ್ಟಿಗರು.

Viral Video : ‘ನಮ್ಮ ಗ್ರಾಮಭಾರತದ ಅವಸ್ಥೆ’ ವಿದ್ಯುತ್ ಬದಲಾಗಿ ಎತ್ತುಗಳ ಬಳಕೆ
ಟ್ರೆಡ್​ಮಿಲ್​ನಂತಹ ಯಂತ್ರದೊಂದಿಗೆ ಎತ್ತು
TV9 Web
| Edited By: ಶ್ರೀದೇವಿ ಕಳಸದ|

Updated on:Sep 24, 2022 | 11:24 AM

Share

Viral Video : ಈ ವಿಡಿಯೋದಲ್ಲಿ ಟ್ರೆಡ್​ಮಿಲ್​ನಂತಹ ಯಂತ್ರದ ಮೇಲೆ ಎತ್ತು ಸತತವಾಗಿ ನಡೆಯುತ್ತಿದೆ. ಇದಕ್ಕೆ ನೀರಿನ ಪಂಪ್ ಅನ್ನು ಜೋಡಿಸಲಾಗಿದೆ. ಎತ್ತು ಉತ್ಪಾದಿಸುವ ಶಕ್ತಿಯಿಂದ ಹೊಲಕ್ಕೆ ನೀರು ಸಿಂಪರಣೆಗೊಳ್ಳುತ್ತದೆ. ಈ ಚಮತ್ಕಾರಿಕ ದೃಶ್ಯ ಇಲ್ಲಿಗೇ ಮುಗಿಯುವುದಿಲ್ಲ. ಕ್ಯಾಮೆರಾ ಪ್ಯಾನ್ ಆಗುತ್ತಿದ್ದಂತೆ ಹೀಗೆ ಸಾಲಾಗಿಟ್ಟ ಟ್ರೆಡ್​ಮಿಲ್​ನಂಥ ಯಂತ್ರಗಳ ಮೇಲೆ ಮತ್ತಷ್ಟು ಎತ್ತುಗಳು ನಡೆಯುತ್ತಿರುತ್ತಲೇ ಇರುತ್ತವೆ. ಈ ವಿಡಿಯೋ ಅನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಾಗಿದೆ. ನೋಡಿದ ತಕ್ಷಣ ಭಾರತೀಯರು ಇಂಥ ತಂತ್ರಕೌಶಲಗಳನ್ನು ರೂಪಿಸುವಲ್ಲಿ ಸದಾ ಮುಂದು ಎಂದು ಅಚ್ಚರಿ ಉಂಟಾಗುತ್ತದೆ.

‘ಗ್ರಾಮಭಾರತದ ಅನ್ವೇಷಣೆ’ ಅದ್ಭುತ! ಎಂದು ಈ ವಿಡಿಯೋಗೆ ಶೀರ್ಷಿಕೆ ಕೊಟ್ಟು ಐಎಎಸ್​ ಅಧಿಕಾರಿ ಅವನೀಶ್ ಶರಣ್ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ ನಿಜ. ಆದರೆ ನೆಟ್ಟಿಗರು, ಈ ತಂತ್ರದ ಮೂಲಕ ಪ್ರಾಣಿಹಿಂಸೆಯನ್ನು ಪ್ರೋತ್ಸಾಹಿಸುವಂತಿದೆ ಎಂದು ಕಿಡಿಕಾರಿದ್ದಾರೆ. ವಿದ್ಯುತ್ ಬದಲಾಗಿ ಪ್ರಾಣಿಗಳನ್ನು ಬಳಸಿಕೊಂಡಿರುವುದರ ಬಗ್ಗೆ ತೀವ್ರವಾಗಿ ಟೀಕಿಸಿದ್ದಾರೆ. ಈ ವಿಡಿಯೋ ಅನ್ನು 52,000 ಜನರು ವೀಕ್ಷಿಸಿದ್ದಾರೆ.

ಹಿಂಡಿನಲ್ಲಿ ಸಾಗುವುದು ನಮಗೆ ಅಭ್ಯಾಸವಾಗಿದೆ. ಆದರೆ, ಆಗಾಗ ನೆಟ್ಟಿಗರು ಹೀಗೆ ಪರಾಮರ್ಶೆ ಮಾಡುವುದು ಒಳ್ಳೆಯದು. ಮಾನವೀಯತೆ ಇನ್ನೂ ಬದುಕಿದೆ ಎನ್ನುವುದನ್ನು ಇದು ತೋರಿಸುತ್ತದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಲಿ ಕ್ಲಿಕ್ ಮಾಡಿ 

Published On - 11:14 am, Sat, 24 September 22

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ