AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಮ್ಮನ ಕಛೇರಿಯಲ್ಲಿ ಬೇಸಿಗೆ ರಜೆ ಕಳೆದ ಐಎಎಸ್ ಅಧಿಕಾರಿಯ ತುಂಟ ಮಗ, ಇಲ್ಲಿದೆ ವಿಡಿಯೋ

ಐಎಎಸ್ ಅಧಿಕಾರಿ ಪಮೇಲಾ ಸತ್ಪತಿ ತನ್ನ ಮಗ ಬೇಸಿಗೆಯ ರಜೆಯಲ್ಲಿ ಕಚೇರಿಗೆ ಬಂದು ಹೇಗೆಲ್ಲಾ ತುಂಟತನ ಮಾಡುತ್ತಾನೆ ಎಂದು ತೋರಿಸುವ ಮುದ್ದಾದ ವಿಡಿಯೋವೊಂದನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು, ಈ ದೃಶ್ಯ ಇದೀಗ ನೆಟ್ಟಿಗರ ಮನ ಗೆದ್ದಿದೆ.

Viral Video: ಅಮ್ಮನ ಕಛೇರಿಯಲ್ಲಿ ಬೇಸಿಗೆ ರಜೆ ಕಳೆದ ಐಎಎಸ್ ಅಧಿಕಾರಿಯ ತುಂಟ ಮಗ, ಇಲ್ಲಿದೆ ವಿಡಿಯೋ
ಐಎಎಸ್ ಅಧಿಕಾರಿಯ ತುಂಟ ಮಗImage Credit source: Twitter
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Apr 12, 2024 | 6:17 PM

ಬೇಸಿಗೆ ರಜೆ ಆರಂಭವಾಗಿದೆ. ಈ ರಜಾ ದಿನಗಳಲ್ಲಿ ತುಂಟ ಮಕ್ಕಳನ್ನು ನಿಭಾಯಿಸುವುದೇ ಒಂದು ಕಷ್ಟದ ಕೆಲಸ. ಅದರಲ್ಲೂ ಹೊರಗಡೆ ಕೆಲಸಕ್ಕೆ ಹೋಗುವ ಅಮ್ಮಂದಿರು ಕೆಲಸ ಮತ್ತು ಮಕ್ಕಳನ್ನು ಒಟ್ಟಾಗಿ ನಿಭಾಯಿಸಲು ಹೆಣಗಾಡುತ್ತಿರುತ್ತಾರೆ. ಆದರೆ ಇಲ್ಲೊಬ್ಬರು ಐಎಎಸ್ ಅಧಿಕಾರಿ ತಮ್ಮ ಒತ್ತಡದ ಕೆಲಸದ ನಡುವೆಯೂ ವೃತ್ತಿ ಮತ್ತು ಮಗ ಈ ಎರಡೂ ಅಂಶವನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಹೋಗುವಂತಹ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಹೌದು ಐಎಎಸ್ ಅಧಿಕಾರಿ ತಮ್ಮ ಮಗ ಬೇಸಿಗೆ ರಜೆಯನ್ನು ಆನಂದಿಸುತ್ತಿರುವ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಈ ದೃಶ್ಯ ನೆಟ್ಟಿಗರ ಮನ ಗೆದ್ದಿದೆ. ವಿಡಿಯೋವನ್ನು ಐಎಎಸ್ ಅಧಿಕಾರಿ ಪಮೇಲಾ ಸತ್ಪತಿ (@PamelaSatpathy) ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಇದನ್ನೂ ಓದಿ: 7 ಕೆಜಿ ಚಿನ್ನದಿಂದ ತಯಾರಿಸಿದ ರಾಮಾಯಣ ಪುಸ್ತಕ; ಅಯೋಧ್ಯಾ ರಾಮನಿಗೆ ಸಮರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

ವೈರಲ್ ವಿಡಿಯೋದಲ್ಲಿ ಐಎಎಸ್ ಅಧಿಕಾರಿ ಪಮೇಲಾ ಸತ್ಪತಿಯವರು ತಮ್ಮ ಕಛೇರಿಯಲ್ಲಿ ಶ್ರದ್ಧೆಯಿಂದ ಕೆಲಸ ಮಾಡುತ್ತಿರುವ ವೇಳೆ, ಬೇಸಿಗೆ ರಜೆಯಲ್ಲಿರುವ ಅವರ ಮಗ ನೀಲಿ ಹಾಗೂ ಕೆಂಪು ಬಣ್ಣದ ಸೂಪರ್ ಮ್ಯಾನ್ ಬಟ್ಟೆ ತೊಟ್ಟು ಮೇಜಿನ ಮೇಲೆ ಆಟವಾಡುತ್ತಾ, ತುಂಟತನ ಮಾಡುತ್ತಿರುವುದನ್ನು ಕಾಣಬಹುದು.

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ಎರಡುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಪುಟ್ಟ ಹುಡುಗನ ತುಂಟಾಟಕ್ಕೆ ನೋಡುಗರು ಮನಸೋತಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ