AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಮ್ಮನ ಕಛೇರಿಯಲ್ಲಿ ಬೇಸಿಗೆ ರಜೆ ಕಳೆದ ಐಎಎಸ್ ಅಧಿಕಾರಿಯ ತುಂಟ ಮಗ, ಇಲ್ಲಿದೆ ವಿಡಿಯೋ

ಐಎಎಸ್ ಅಧಿಕಾರಿ ಪಮೇಲಾ ಸತ್ಪತಿ ತನ್ನ ಮಗ ಬೇಸಿಗೆಯ ರಜೆಯಲ್ಲಿ ಕಚೇರಿಗೆ ಬಂದು ಹೇಗೆಲ್ಲಾ ತುಂಟತನ ಮಾಡುತ್ತಾನೆ ಎಂದು ತೋರಿಸುವ ಮುದ್ದಾದ ವಿಡಿಯೋವೊಂದನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು, ಈ ದೃಶ್ಯ ಇದೀಗ ನೆಟ್ಟಿಗರ ಮನ ಗೆದ್ದಿದೆ.

Viral Video: ಅಮ್ಮನ ಕಛೇರಿಯಲ್ಲಿ ಬೇಸಿಗೆ ರಜೆ ಕಳೆದ ಐಎಎಸ್ ಅಧಿಕಾರಿಯ ತುಂಟ ಮಗ, ಇಲ್ಲಿದೆ ವಿಡಿಯೋ
ಐಎಎಸ್ ಅಧಿಕಾರಿಯ ತುಂಟ ಮಗImage Credit source: Twitter
ಮಾಲಾಶ್ರೀ ಅಂಚನ್​
| Edited By: |

Updated on: Apr 12, 2024 | 6:17 PM

Share

ಬೇಸಿಗೆ ರಜೆ ಆರಂಭವಾಗಿದೆ. ಈ ರಜಾ ದಿನಗಳಲ್ಲಿ ತುಂಟ ಮಕ್ಕಳನ್ನು ನಿಭಾಯಿಸುವುದೇ ಒಂದು ಕಷ್ಟದ ಕೆಲಸ. ಅದರಲ್ಲೂ ಹೊರಗಡೆ ಕೆಲಸಕ್ಕೆ ಹೋಗುವ ಅಮ್ಮಂದಿರು ಕೆಲಸ ಮತ್ತು ಮಕ್ಕಳನ್ನು ಒಟ್ಟಾಗಿ ನಿಭಾಯಿಸಲು ಹೆಣಗಾಡುತ್ತಿರುತ್ತಾರೆ. ಆದರೆ ಇಲ್ಲೊಬ್ಬರು ಐಎಎಸ್ ಅಧಿಕಾರಿ ತಮ್ಮ ಒತ್ತಡದ ಕೆಲಸದ ನಡುವೆಯೂ ವೃತ್ತಿ ಮತ್ತು ಮಗ ಈ ಎರಡೂ ಅಂಶವನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಹೋಗುವಂತಹ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಹೌದು ಐಎಎಸ್ ಅಧಿಕಾರಿ ತಮ್ಮ ಮಗ ಬೇಸಿಗೆ ರಜೆಯನ್ನು ಆನಂದಿಸುತ್ತಿರುವ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಈ ದೃಶ್ಯ ನೆಟ್ಟಿಗರ ಮನ ಗೆದ್ದಿದೆ. ವಿಡಿಯೋವನ್ನು ಐಎಎಸ್ ಅಧಿಕಾರಿ ಪಮೇಲಾ ಸತ್ಪತಿ (@PamelaSatpathy) ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಇದನ್ನೂ ಓದಿ: 7 ಕೆಜಿ ಚಿನ್ನದಿಂದ ತಯಾರಿಸಿದ ರಾಮಾಯಣ ಪುಸ್ತಕ; ಅಯೋಧ್ಯಾ ರಾಮನಿಗೆ ಸಮರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

ವೈರಲ್ ವಿಡಿಯೋದಲ್ಲಿ ಐಎಎಸ್ ಅಧಿಕಾರಿ ಪಮೇಲಾ ಸತ್ಪತಿಯವರು ತಮ್ಮ ಕಛೇರಿಯಲ್ಲಿ ಶ್ರದ್ಧೆಯಿಂದ ಕೆಲಸ ಮಾಡುತ್ತಿರುವ ವೇಳೆ, ಬೇಸಿಗೆ ರಜೆಯಲ್ಲಿರುವ ಅವರ ಮಗ ನೀಲಿ ಹಾಗೂ ಕೆಂಪು ಬಣ್ಣದ ಸೂಪರ್ ಮ್ಯಾನ್ ಬಟ್ಟೆ ತೊಟ್ಟು ಮೇಜಿನ ಮೇಲೆ ಆಟವಾಡುತ್ತಾ, ತುಂಟತನ ಮಾಡುತ್ತಿರುವುದನ್ನು ಕಾಣಬಹುದು.

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ಎರಡುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಪುಟ್ಟ ಹುಡುಗನ ತುಂಟಾಟಕ್ಕೆ ನೋಡುಗರು ಮನಸೋತಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!