AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀ ರಾಮನ ಅಸ್ತಿತ್ವ ಪ್ರಶ್ನಿಸಿದ್ದ ಮಾಜಿ ಸಿಎಂನ ಊರಿನಲ್ಲಿ ಪತ್ತೆಯಾಯಿತು ಶ್ರೀರಾಮನ ವಿಗ್ರಹ

ಪಂಚಲೋಹದಿಂದ ತಯಾರಿಸಲಾದ ಅಮೂಲ್ಯ ಮೂರ್ತಿಯು ಸುಮಾರು 2 ಅಡಿ ಎತ್ತರವಿದೆ. ಮೂರ್ತಿ ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಹೂವಿನ ಹಾರ ಫಲಪುಷ್ಪವನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಬಳಿಕ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಶ್ರೀ ರಾಮನ ಅಸ್ತಿತ್ವ ಪ್ರಶ್ನಿಸಿದ್ದ ಮಾಜಿ ಸಿಎಂನ ಊರಿನಲ್ಲಿ ಪತ್ತೆಯಾಯಿತು ಶ್ರೀರಾಮನ ವಿಗ್ರಹ
ಅಕ್ಷತಾ ವರ್ಕಾಡಿ
|

Updated on: Mar 28, 2024 | 6:11 PM

Share

ತಮಿಳುನಾಡು: ತಿರುವಾರೂರಿನಲ್ಲಿ ಉತ್ಖನನದ ಸಮಯದಲ್ಲಿ ಪತ್ತೆಯಾದ ಶತಮಾನಗಳಷ್ಟು ಹಳೆಯದಾದ ಶ್ರೀ ರಾಮನ ವಿಗ್ರಹಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರೀರಾಮನನ್ನು ಹಲವು ಬಾರಿ ಅಪಹಾಸ್ಯ ಮಾಡಿದ್ದ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ತವರು ಜಿಲ್ಲೆ ತಿರುವಾರೂರಿನಲ್ಲಿ ಇದೀಗ ರಾಮನ ವಿಗ್ರಹ ಪತ್ತೆಯಾಗಿರುವುದು ಗಮನಾರ್ಹ.  ತಿರುವಾರೂರಿನ ಹೂವಿನ ಅಂಗಡಿ ಮಾಲೀಕ ಮಾರಿಮುತ್ತು ಅವರು ತಮ್ಮ ಮನೆಗೆ ಅಡಿಪಾಯವನ್ನು ಅಗೆಯುವ ವೇಳೆ ಶ್ರೀರಾಮನ ಈ ಪುರಾತನ ಮೂರ್ತಿಯ ಪತ್ತೆಯಾಗಿದ್ದು, ಸ್ಥಳೀಯ ಜನರಿಗೆ ಅಚ್ಚರಿಯುಂಟು ಮಾಡಿದೆ.

ಪಂಚಲೋಹ ಎಂದು ಕರೆಯಲ್ಪಡುವ 5-ಲೋಹದ ಮಿಶ್ರ ಲೋಹದಿಂದ ರಚಿಸಲಾದ ಅಮೂಲ್ಯ ಮೂರ್ತಿಯು ಸುಮಾರು 2 ಅಡಿ ಎತ್ತರವಿದೆ. ಮೂರ್ತಿ ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಹೂವಿನ ಹಾರ ಫಲಪುಷ್ಪವನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಬಳಿಕ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಈ ಫೋಟೋದಲ್ಲಿ ನಿಮಗೆ ಮೊದಲು ಕಾಣಿಸಿದ್ದು ಏನು? ನಿಮ್ಮ ವ್ಯಕ್ತಿತ್ವ ತಿಳಿಯಿರಿ

ತಹಶೀಲ್ದಾರ್ ದೇವೇಂದ್ರನ್ ಅವರೊಂದಿಗೆ ಗ್ರಾ.ಪಂ ಆಡಳಿತಾಧಿಕಾರಿ ರಾಜಕುಮಾರ್ ಸ್ಥಳಕ್ಕೆ ಆಗಮಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂರ್ತಿಯನ್ನು ವಶಪಡಿಸಿಕೊಂಡು ತಹಶೀಲ್ದಾರ್ ಕಚೇರಿಗೆ ಸಾಗಿಸಲು ವ್ಯವಸ್ಥೆ ಮಾಡಲಾಯಿತು. ‘ಪುರಾತತ್ವಶಾಸ್ತ್ರಜ್ಞರ ಪರೀಕ್ಷೆಯ ನಂತರವೇ ಪ್ರತಿಮೆಯ ನಿಜವಾದ ಸ್ವರೂಪ ಮತ್ತು ಮೌಲ್ಯವನ್ನು ಕಂಡುಹಿಡಿಯಬಹುದು’ ಎಂದು ದೇವೇಂದ್ರನ್ ಹೇಳಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ