AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀ ರಾಮನ ಅಸ್ತಿತ್ವ ಪ್ರಶ್ನಿಸಿದ್ದ ಮಾಜಿ ಸಿಎಂನ ಊರಿನಲ್ಲಿ ಪತ್ತೆಯಾಯಿತು ಶ್ರೀರಾಮನ ವಿಗ್ರಹ

ಪಂಚಲೋಹದಿಂದ ತಯಾರಿಸಲಾದ ಅಮೂಲ್ಯ ಮೂರ್ತಿಯು ಸುಮಾರು 2 ಅಡಿ ಎತ್ತರವಿದೆ. ಮೂರ್ತಿ ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಹೂವಿನ ಹಾರ ಫಲಪುಷ್ಪವನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಬಳಿಕ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಶ್ರೀ ರಾಮನ ಅಸ್ತಿತ್ವ ಪ್ರಶ್ನಿಸಿದ್ದ ಮಾಜಿ ಸಿಎಂನ ಊರಿನಲ್ಲಿ ಪತ್ತೆಯಾಯಿತು ಶ್ರೀರಾಮನ ವಿಗ್ರಹ
ಅಕ್ಷತಾ ವರ್ಕಾಡಿ
|

Updated on: Mar 28, 2024 | 6:11 PM

Share

ತಮಿಳುನಾಡು: ತಿರುವಾರೂರಿನಲ್ಲಿ ಉತ್ಖನನದ ಸಮಯದಲ್ಲಿ ಪತ್ತೆಯಾದ ಶತಮಾನಗಳಷ್ಟು ಹಳೆಯದಾದ ಶ್ರೀ ರಾಮನ ವಿಗ್ರಹಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರೀರಾಮನನ್ನು ಹಲವು ಬಾರಿ ಅಪಹಾಸ್ಯ ಮಾಡಿದ್ದ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ತವರು ಜಿಲ್ಲೆ ತಿರುವಾರೂರಿನಲ್ಲಿ ಇದೀಗ ರಾಮನ ವಿಗ್ರಹ ಪತ್ತೆಯಾಗಿರುವುದು ಗಮನಾರ್ಹ.  ತಿರುವಾರೂರಿನ ಹೂವಿನ ಅಂಗಡಿ ಮಾಲೀಕ ಮಾರಿಮುತ್ತು ಅವರು ತಮ್ಮ ಮನೆಗೆ ಅಡಿಪಾಯವನ್ನು ಅಗೆಯುವ ವೇಳೆ ಶ್ರೀರಾಮನ ಈ ಪುರಾತನ ಮೂರ್ತಿಯ ಪತ್ತೆಯಾಗಿದ್ದು, ಸ್ಥಳೀಯ ಜನರಿಗೆ ಅಚ್ಚರಿಯುಂಟು ಮಾಡಿದೆ.

ಪಂಚಲೋಹ ಎಂದು ಕರೆಯಲ್ಪಡುವ 5-ಲೋಹದ ಮಿಶ್ರ ಲೋಹದಿಂದ ರಚಿಸಲಾದ ಅಮೂಲ್ಯ ಮೂರ್ತಿಯು ಸುಮಾರು 2 ಅಡಿ ಎತ್ತರವಿದೆ. ಮೂರ್ತಿ ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಹೂವಿನ ಹಾರ ಫಲಪುಷ್ಪವನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಬಳಿಕ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಈ ಫೋಟೋದಲ್ಲಿ ನಿಮಗೆ ಮೊದಲು ಕಾಣಿಸಿದ್ದು ಏನು? ನಿಮ್ಮ ವ್ಯಕ್ತಿತ್ವ ತಿಳಿಯಿರಿ

ತಹಶೀಲ್ದಾರ್ ದೇವೇಂದ್ರನ್ ಅವರೊಂದಿಗೆ ಗ್ರಾ.ಪಂ ಆಡಳಿತಾಧಿಕಾರಿ ರಾಜಕುಮಾರ್ ಸ್ಥಳಕ್ಕೆ ಆಗಮಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂರ್ತಿಯನ್ನು ವಶಪಡಿಸಿಕೊಂಡು ತಹಶೀಲ್ದಾರ್ ಕಚೇರಿಗೆ ಸಾಗಿಸಲು ವ್ಯವಸ್ಥೆ ಮಾಡಲಾಯಿತು. ‘ಪುರಾತತ್ವಶಾಸ್ತ್ರಜ್ಞರ ಪರೀಕ್ಷೆಯ ನಂತರವೇ ಪ್ರತಿಮೆಯ ನಿಜವಾದ ಸ್ವರೂಪ ಮತ್ತು ಮೌಲ್ಯವನ್ನು ಕಂಡುಹಿಡಿಯಬಹುದು’ ಎಂದು ದೇವೇಂದ್ರನ್ ಹೇಳಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್