AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಾವಿನ ದವಡೆಯಿಂದ ಪಾರಾದ ಪೆಂಗ್ವಿನ್, ಇದು ಆತ್ಮವಿಶ್ವಾಸದ ಶಕ್ತಿ 

ದೋಣಿ ಸಾಗಿಸಲು ಹರಿಗೋಲು ಎಷ್ಟು ಮುಖ್ಯವೋ ನಮ್ಮ ಜೀವನ ಸಾಗಿಸಲು ಆತ್ಮವಿಶ್ವಾಸವು ಅಷ್ಟೇ ಮುಖ್ಯ. ಹೌದು ಆತ್ಮವಿಶ್ವಾಸವೊಂದಿದ್ದರೆ, ಜೀವನದಲ್ಲಿ ಬರುವ ಎಂತಹ ಸವಾಲುಗಳನ್ನು ಸಹ ನಾವು ದೈರ್ಯದಿಂದ ಎದುರಿಸಿ, ಅದನ್ನು ಜಯಿಸಲು ಸಾಧ್ಯವಾಗುತ್ತದೆ. ಅದೇ ರೀತಿ ಇಲ್ಲೊಂದು ಪೆಂಗ್ವಿನ್ ಸ್ವಾರ್ಥ  ತುಂಬಿರುವ ಈ ಪ್ರಪಂಚದಲ್ಲಿ ನಮ್ಮ ಬದುಕನ್ನು ಸಾಗಿಸಲು ಆತ್ಮವಿಶ್ವಾಸ ಎಷ್ಟು ಮುಖ್ಯ ಎಂಬ ಜೀವನ ಪಾಠವನ್ನು ಕಲಿಸಿಕೊಟ್ಟಿದೆ. ಈ ಕುರಿತ ವಿಡಿಯೋ ಇಲ್ಲಿದೆ ನೋಡಿ.

Viral Video: ಸಾವಿನ ದವಡೆಯಿಂದ ಪಾರಾದ ಪೆಂಗ್ವಿನ್, ಇದು ಆತ್ಮವಿಶ್ವಾಸದ ಶಕ್ತಿ 
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Jan 02, 2024 | 6:50 PM

Share

ದೋಣಿ ಸಾಗಿಸಲು ಹರಿಗೋಲು ಎಷ್ಟು ಮುಖ್ಯವೋ, ನಮ್ಮ ಜೀವನ ಸಾಗಿಸಲು, ಜೀವನದಲ್ಲಿ ಏನಾದರೂ ಸಾಧನೆ ಮಾಡಲು ಆತ್ಮವಿಶ್ವಾಸವು ಅಷ್ಟೇ ಮುಖ್ಯ.  ಆತ್ಮವಿಶ್ವಾಸವೊಂದಿದ್ದರೆ, ಜೀವನದಲ್ಲಿ ಎದುರಾಗುವಂತಹ ಸವಾಲುಗಳನ್ನು ದೈರ್ಯದಿಂದ ಎದುರಿಸಿ, ಆ ಸವಾಲನ್ನು ಜಯಿಸಲು ಸಾಧ್ಯವಾಗುತ್ತದೆ. ಹೀಗೆ ಎಂಹತ  ಸಂದಿಗ್ಧ ಪರಿಸ್ಥಿತಿ ಎದುರಾದರೂ ನಾನು ಸೋತು ಹೋದೆ, ಇದನ್ನು ನನ್ನಿಂದು ಜಯಿಸಲು ಸಾಧ್ಯವಿಲ್ಲ ಎಂದು ಎದೆಗುಂದದೆ  ಆತ್ಮವಿಶ್ವಾಸದಿಂದ ಆ ಸಮಸ್ಯೆಯ ವಿರುದ್ಧ ಹೋರಾಡಬೇಕು. ಆಗ ಮಾತ್ರ ಯಾವುದೇ ಸಮಸ್ಯೆಯಿಂದಲೂ  ಮುಕ್ತಿ ಮತ್ತು ಯಾವುದೇ ಕೆಲಸದಲ್ಲಿ ನಿಮಗೆ ಯಶಸ್ಸು ಸಿಗಲು ಸಾಧ್ಯ. ಅದೇ ರೀತಿ ಇಲ್ಲೊಂದು ಪೆಂಗ್ವಿನ್ ಯಾವುದೇ ಸಂದಿಗ್ಧ ಪರಿಸ್ಥಿತಿಯಲ್ಲೂ ದೃತಿಗೆಡದೆ, ಆತ್ಮವಿಶ್ವಾಸ ಮತ್ತು ಧೈರ್ಯದಿಂದ ಆ ಕಷ್ಟದ ವಿರುದ್ಧ ಹೇಗೆ ಹೋರಾಡಬೇಕು ಎಂಬ ಜೀವನ ಪಾಠವನ್ನು ಕಲಿಸಿದೆ. ಈ ಕುರಿತ ವಿಡಿಯೋ ಇದೀಗ ವೈರಲ್ ಆಗಿದೆ.

ಈ ವಿಡಿಯೋವನ್ನು @explore_animal ಎಂಬ ಇನ್ಸ್ಟಾಗ್ರಾಮ್ ಪೇಜ್ ಅಲ್ಲಿ ಹಂಚಿಕೊಳ್ಳಲಾಗಿದ್ದು,   ವಿಡಿಯೋದಲ್ಲಿ ಸಾಗರದಲ್ಲಿ ದೈತ್ಯ ಮೀನೊಂದರ, ದಾಳಿಯಿಂದ ಪೆಂಗ್ವಿನ್  ಬುದ್ಧಿವಂತಿಕೆಯಿಂದ ತಪ್ಪಿಸಿಕೊಂಡು ತನ್ನ ಜೀವವನ್ನು ಹೇಗೆ ಉಳಿಸಿಕೊಳ್ಳುತ್ತೆ ಎಂಬ ರೋಚಕ ದೃಶ್ಯಾವಳಿಯನ್ನು ಕಾಣಬಹುದು.

ಈ ವೈರಲ್​​​ ವಿಡಿಯೋ ಇಲ್ಲಿದೆ:

ವೈರಲ್ ವಿಡಿಯೋದಲ್ಲಿ ಒಂದು ಪೆಂಗ್ವಿನ್ ಆಹಾರವನ್ನರಸುತ್ತಾ, ಸಮುದ್ರದೊಳಗೆ ಹೋಗುತ್ತೆ, ಆದ್ರೆ ನೀರಿನಲ್ಲಿ ಪೆಂಗ್ವಿನ್ ಈಜಾಡುತ್ತಿರುವುದನ್ನು ಕಂಡ ದೈತ್ಯ ಮೀನೊಂದು, ಇವತ್ತಿಗೆ ಭರ್ಜರಿ ಊಟ ಸಿಕ್ತು ಎಂದು, ಆ ಪುಟ್ಟ ಪೆಂಗ್ವಿನ್ ಅನ್ನು ಬೇಟೆಯಾಡಲು ಬರುತ್ತೆ, ಆದ್ರೆ ಈ ಕಠಿಣ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಎದೆಗುಂದದೆ ಪೆಂಗ್ವಿನ್ ವೇಗವಾಗಿ ಈಜಿಕೊಂಡು  ಹೋಗುತ್ತಾ, ಸಾವಿನ ದವಡೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನ ಪಡುತ್ತೆ, ಆದ್ರೆ ಮೀನು ಇನ್ನೂ ವೇಗವಾಗಿ ಈಜಿಕೊಂಡು ಹೋಗಿ, ಒಮ್ಮೆಲೆ ಪೆಂಗ್ವಿನ್ ಅನ್ನು ಬಾಯಲ್ಲಿ ಹಚ್ಚಿ ಹಿಡಿದುಕೊಳ್ಳುತ್ತೆ, ಈ ಸಂದರ್ಭದಲ್ಲಿ ಪೆಂಗ್ವಿನ್ ಸತ್ತಂತೆ ನಾಟಕವಾಡಿ, ಥಟ್ಟನೆ ಸಾವಿನ ದವಡೆಯಿಂದ ತಪ್ಪಿಸಿಕೊಂಡು ವೇಗವಾಗಿ ಅತ್ತಿಂದ ಇತ್ತ ಈಜುತ್ತಾ ದಡ ಸೇರಿ, ಅಬ್ಬಬ್ಬಾ ಬದುಕಿತು ಬಡಜೀವ ಎಂದು ನಿಟ್ಟುಸಿರು ಬಿಡುವ  ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ:  ಜಪಾನಿನ ಮ್ಯಾಜಿಕ್ ಬೌಲ್ ನೋಡಿದ್ದೀರಾ

ಡಿಸೆಂಬರ್ 28 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3.3 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 2 ಲಕ್ಷಕ್ಕೂ ಅಧಿಕ ಲೈಕ್ಸ್ಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ಗಳೂ ಹರಿದುಬಂದಿವೆ. ಒಬ್ಬ ಬಳಕೆದಾರರು ʼಈ ವಿಡಿಯೋ ಯಾವತ್ತೂ ಧೈರ್ಯವನ್ನು ಕಳೆದುಕೊಳ್ಳಬಾರದು ಎಂಬ ಉತ್ತಮ ಪಾಠವನ್ನು ಕಲಿಸಿದೆʼ ಅಂತ ಹೇಳಿದ್ದಾರೆ.  ಇನ್ನೊಬ್ಬ ಬಳಕೆದಾರರು ʼಈ ದೃಶ್ಯವಾವಳಿ ನಿಜಕ್ಕೂ ಅದ್ಭುತವಾಗಿದೆʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:01 pm, Tue, 2 January 24

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ