AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ನೀಲಗಿರಿ ಬೆಟ್ಟಗಳಲ್ಲಿ ಪ್ಲಾಸ್ಟಿಕ್ ಚೀಲ ತಿಂದ ಆನೆ ವಿಡಿಯೋ ವೈರಲ್

Elephant Chewing Plastic : ಬಂಡೀಪುರ-ಮದುಮಲೈ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್​ ಬಳಕೆಯ ಕುರಿತು ನಿಷೇಧ ಹೇರಬೇಕೆಂದು ನೆಟ್ಟಿಗರು ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ.

Viral Video : ನೀಲಗಿರಿ ಬೆಟ್ಟಗಳಲ್ಲಿ ಪ್ಲಾಸ್ಟಿಕ್ ಚೀಲ ತಿಂದ ಆನೆ ವಿಡಿಯೋ ವೈರಲ್
ಪ್ಲಾಸ್ಟಿಕ್ ಬಾಟಲಿ ತಿನ್ನುತ್ತಿರುವ ಆನೆ
TV9 Web
| Updated By: ಶ್ರೀದೇವಿ ಕಳಸದ|

Updated on: Sep 23, 2022 | 10:34 AM

Share

Viral Video : ಪ್ಲಾಸ್ಟಿಕ್​ ಬಳಕೆ, ಪ್ರವಾಸಿಗರ ಬೇಜವಾಬ್ದಾರಿತನದಿಂದಾಗಿ ಅರಣ್ಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಉಂಟಾಗಿ, ಕಾಡುಪ್ರಾಣಿಗಳು ಅರಿವಿಲ್ಲದೆ ಪ್ಲಾಸ್ಟಿಕ್​ ತಿನ್ನತೊಡಗಿವೆ. ಇದೀಗ ನೀಲಗಿರಿ ಬೆಟ್ಟಗಳಲ್ಲಿರುವ ಬಂಡೀಪುರ ಮತ್ತು ಮದುಮಲೈ ಪ್ರದೇಶದಲ್ಲಿ ಆನೆಯೊಂದು ಪ್ಲಾಸ್ಟಿಕ್​ ಚೀಲವನ್ನು ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದೆ. ಪ್ಲಾಸ್ಟಿಕ್​ ಆನೆಯ ಜೀವಕ್ಕೆ ಅಪಾಯಕಾರಿ ಎಂಬ ಕಳವಳಕ್ಕೆ ನೆಟ್ಟಿಗರು ಬಿದ್ದಿದ್ದಾರೆ. ಐಪಿಎಸ್ ಅಧಿಕಾರಿ ಸುಸಾಂತ ನಂದಾ ಟ್ವಿಟರ್​ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ.

ಈ ಪೋಸ್ಟ್​​ಗೆ ಪ್ರತಿಕ್ರಿಯಿಸಿದ ಅನೇಕರು, ತ್ಯಾಜ್ಯ ನಿರ್ವಹಣೆ ಪ್ರವಾಸಿಗರ ಜವಾಬ್ದಾರಿಯೂ ಹೌದು. ಹಾಗಾಗಿ ಅರಣ್ಯ ಇಲಾಖೆಯು ಈ ಪ್ರದೇಶದಲ್ಲಿ ಪ್ಲಾಸ್ಟಿಕ್​ ಬಳಕೆ ನಿಷೇಧಿಸಬೇಕು ಎಂದಿದ್ದಾರೆ.

‘ರಾಷ್ಟ್ರೀಯ ಉದ್ಯಾನವನಗಳಲ್ಲಿ ಯಾವುದೇ ರೀತಿಯ ಪ್ಲಾಸ್ಟಿಕ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಅದು ನೀರು ಅಥವಾ ಹಾಗೂ ಇನ್ನಿತರೇ ನೆಪದಲ್ಲಿ ಪ್ಲಾಸ್ಟಿಕ್​ ಕಾಡು ಸೇರದಂತೆ ನೋಡಿಕೊಳ್ಳಬೇಕು. ಈ ನಿಯಮ ಮುರಿದವರಿಗೆ ದಂಡ ವಿಧಿಸಬೇಕು ಆಗ ಮಾತ್ರ ಜನ ಎಚ್ಚೆತ್ತುಕೊಳ್ಳುತ್ತಾರೆ. ಮಾಡಿದ ತಪ್ಪನ್ನು ಮತ್ತೆ ಮತ್ತೆ ಮಾಡಲಾರರು’ ಎಂದು ಟ್ವಿಟರ್ ಖಾತೆದಾರರೊಬ್ಬರು ಹಂಚಿಕೊಂಡಿದ್ದಾರೆ.

ಇನ್ನೊಬ್ಬ ಖಾತೆದಾರರು, ‘ರೈಲಿನ ಸ್ವಚ್ಛತಾ ಸಿಬ್ಬಂದಿಯು ಪ್ಲಾಸ್ಟಿಕ್​ ಬಾಟಲಿ, ತ್ಯಾಜ್ಯಗಳನ್ನು ಎರಡು ಬೋಗಿಗಳ ನಡುವೆ ಇರುವ ಜಾಗದಿಂದ ರೈಲ್ವೆ ಟ್ರ್ಯಾಕ್​ ಮೇಲೆ ಎಸೆಯುವುದನ್ನು ನೋಡಿದ್ದೇನೆ. ಕಾಡಿನ ಮಧ್ಯೆ ಇರುವ ಕೆಲ ರೈಲ್ವೆ ಹಳಿಗಳ ಬಳಿ ಕಾಡುಪ್ರಾಣಿಗಳು ಓಡಾಡುವಾಗ ಈ ತ್ಯಾಜ್ಯವನ್ನು ತಿನ್ನುವ ಅಪಾಯ ಇದೆ’ ಎಂದಿದ್ದಾರೆ.

1.8 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. 323 ಜನರು ರೀಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ​ 

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್