AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ನೀಲಗಿರಿ ಬೆಟ್ಟಗಳಲ್ಲಿ ಪ್ಲಾಸ್ಟಿಕ್ ಚೀಲ ತಿಂದ ಆನೆ ವಿಡಿಯೋ ವೈರಲ್

Elephant Chewing Plastic : ಬಂಡೀಪುರ-ಮದುಮಲೈ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್​ ಬಳಕೆಯ ಕುರಿತು ನಿಷೇಧ ಹೇರಬೇಕೆಂದು ನೆಟ್ಟಿಗರು ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ.

Viral Video : ನೀಲಗಿರಿ ಬೆಟ್ಟಗಳಲ್ಲಿ ಪ್ಲಾಸ್ಟಿಕ್ ಚೀಲ ತಿಂದ ಆನೆ ವಿಡಿಯೋ ವೈರಲ್
ಪ್ಲಾಸ್ಟಿಕ್ ಬಾಟಲಿ ತಿನ್ನುತ್ತಿರುವ ಆನೆ
TV9 Web
| Edited By: |

Updated on: Sep 23, 2022 | 10:34 AM

Share

Viral Video : ಪ್ಲಾಸ್ಟಿಕ್​ ಬಳಕೆ, ಪ್ರವಾಸಿಗರ ಬೇಜವಾಬ್ದಾರಿತನದಿಂದಾಗಿ ಅರಣ್ಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಉಂಟಾಗಿ, ಕಾಡುಪ್ರಾಣಿಗಳು ಅರಿವಿಲ್ಲದೆ ಪ್ಲಾಸ್ಟಿಕ್​ ತಿನ್ನತೊಡಗಿವೆ. ಇದೀಗ ನೀಲಗಿರಿ ಬೆಟ್ಟಗಳಲ್ಲಿರುವ ಬಂಡೀಪುರ ಮತ್ತು ಮದುಮಲೈ ಪ್ರದೇಶದಲ್ಲಿ ಆನೆಯೊಂದು ಪ್ಲಾಸ್ಟಿಕ್​ ಚೀಲವನ್ನು ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದೆ. ಪ್ಲಾಸ್ಟಿಕ್​ ಆನೆಯ ಜೀವಕ್ಕೆ ಅಪಾಯಕಾರಿ ಎಂಬ ಕಳವಳಕ್ಕೆ ನೆಟ್ಟಿಗರು ಬಿದ್ದಿದ್ದಾರೆ. ಐಪಿಎಸ್ ಅಧಿಕಾರಿ ಸುಸಾಂತ ನಂದಾ ಟ್ವಿಟರ್​ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ.

ಈ ಪೋಸ್ಟ್​​ಗೆ ಪ್ರತಿಕ್ರಿಯಿಸಿದ ಅನೇಕರು, ತ್ಯಾಜ್ಯ ನಿರ್ವಹಣೆ ಪ್ರವಾಸಿಗರ ಜವಾಬ್ದಾರಿಯೂ ಹೌದು. ಹಾಗಾಗಿ ಅರಣ್ಯ ಇಲಾಖೆಯು ಈ ಪ್ರದೇಶದಲ್ಲಿ ಪ್ಲಾಸ್ಟಿಕ್​ ಬಳಕೆ ನಿಷೇಧಿಸಬೇಕು ಎಂದಿದ್ದಾರೆ.

‘ರಾಷ್ಟ್ರೀಯ ಉದ್ಯಾನವನಗಳಲ್ಲಿ ಯಾವುದೇ ರೀತಿಯ ಪ್ಲಾಸ್ಟಿಕ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಅದು ನೀರು ಅಥವಾ ಹಾಗೂ ಇನ್ನಿತರೇ ನೆಪದಲ್ಲಿ ಪ್ಲಾಸ್ಟಿಕ್​ ಕಾಡು ಸೇರದಂತೆ ನೋಡಿಕೊಳ್ಳಬೇಕು. ಈ ನಿಯಮ ಮುರಿದವರಿಗೆ ದಂಡ ವಿಧಿಸಬೇಕು ಆಗ ಮಾತ್ರ ಜನ ಎಚ್ಚೆತ್ತುಕೊಳ್ಳುತ್ತಾರೆ. ಮಾಡಿದ ತಪ್ಪನ್ನು ಮತ್ತೆ ಮತ್ತೆ ಮಾಡಲಾರರು’ ಎಂದು ಟ್ವಿಟರ್ ಖಾತೆದಾರರೊಬ್ಬರು ಹಂಚಿಕೊಂಡಿದ್ದಾರೆ.

ಇನ್ನೊಬ್ಬ ಖಾತೆದಾರರು, ‘ರೈಲಿನ ಸ್ವಚ್ಛತಾ ಸಿಬ್ಬಂದಿಯು ಪ್ಲಾಸ್ಟಿಕ್​ ಬಾಟಲಿ, ತ್ಯಾಜ್ಯಗಳನ್ನು ಎರಡು ಬೋಗಿಗಳ ನಡುವೆ ಇರುವ ಜಾಗದಿಂದ ರೈಲ್ವೆ ಟ್ರ್ಯಾಕ್​ ಮೇಲೆ ಎಸೆಯುವುದನ್ನು ನೋಡಿದ್ದೇನೆ. ಕಾಡಿನ ಮಧ್ಯೆ ಇರುವ ಕೆಲ ರೈಲ್ವೆ ಹಳಿಗಳ ಬಳಿ ಕಾಡುಪ್ರಾಣಿಗಳು ಓಡಾಡುವಾಗ ಈ ತ್ಯಾಜ್ಯವನ್ನು ತಿನ್ನುವ ಅಪಾಯ ಇದೆ’ ಎಂದಿದ್ದಾರೆ.

1.8 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. 323 ಜನರು ರೀಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ​ 

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​