Viral Video : ನೀಲಗಿರಿ ಬೆಟ್ಟಗಳಲ್ಲಿ ಪ್ಲಾಸ್ಟಿಕ್ ಚೀಲ ತಿಂದ ಆನೆ ವಿಡಿಯೋ ವೈರಲ್

Elephant Chewing Plastic : ಬಂಡೀಪುರ-ಮದುಮಲೈ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್​ ಬಳಕೆಯ ಕುರಿತು ನಿಷೇಧ ಹೇರಬೇಕೆಂದು ನೆಟ್ಟಿಗರು ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ.

Viral Video : ನೀಲಗಿರಿ ಬೆಟ್ಟಗಳಲ್ಲಿ ಪ್ಲಾಸ್ಟಿಕ್ ಚೀಲ ತಿಂದ ಆನೆ ವಿಡಿಯೋ ವೈರಲ್
ಪ್ಲಾಸ್ಟಿಕ್ ಬಾಟಲಿ ತಿನ್ನುತ್ತಿರುವ ಆನೆ
Follow us
| Updated By: ಶ್ರೀದೇವಿ ಕಳಸದ

Updated on: Sep 23, 2022 | 10:34 AM

Viral Video : ಪ್ಲಾಸ್ಟಿಕ್​ ಬಳಕೆ, ಪ್ರವಾಸಿಗರ ಬೇಜವಾಬ್ದಾರಿತನದಿಂದಾಗಿ ಅರಣ್ಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಉಂಟಾಗಿ, ಕಾಡುಪ್ರಾಣಿಗಳು ಅರಿವಿಲ್ಲದೆ ಪ್ಲಾಸ್ಟಿಕ್​ ತಿನ್ನತೊಡಗಿವೆ. ಇದೀಗ ನೀಲಗಿರಿ ಬೆಟ್ಟಗಳಲ್ಲಿರುವ ಬಂಡೀಪುರ ಮತ್ತು ಮದುಮಲೈ ಪ್ರದೇಶದಲ್ಲಿ ಆನೆಯೊಂದು ಪ್ಲಾಸ್ಟಿಕ್​ ಚೀಲವನ್ನು ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದೆ. ಪ್ಲಾಸ್ಟಿಕ್​ ಆನೆಯ ಜೀವಕ್ಕೆ ಅಪಾಯಕಾರಿ ಎಂಬ ಕಳವಳಕ್ಕೆ ನೆಟ್ಟಿಗರು ಬಿದ್ದಿದ್ದಾರೆ. ಐಪಿಎಸ್ ಅಧಿಕಾರಿ ಸುಸಾಂತ ನಂದಾ ಟ್ವಿಟರ್​ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ.

ಈ ಪೋಸ್ಟ್​​ಗೆ ಪ್ರತಿಕ್ರಿಯಿಸಿದ ಅನೇಕರು, ತ್ಯಾಜ್ಯ ನಿರ್ವಹಣೆ ಪ್ರವಾಸಿಗರ ಜವಾಬ್ದಾರಿಯೂ ಹೌದು. ಹಾಗಾಗಿ ಅರಣ್ಯ ಇಲಾಖೆಯು ಈ ಪ್ರದೇಶದಲ್ಲಿ ಪ್ಲಾಸ್ಟಿಕ್​ ಬಳಕೆ ನಿಷೇಧಿಸಬೇಕು ಎಂದಿದ್ದಾರೆ.

‘ರಾಷ್ಟ್ರೀಯ ಉದ್ಯಾನವನಗಳಲ್ಲಿ ಯಾವುದೇ ರೀತಿಯ ಪ್ಲಾಸ್ಟಿಕ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಅದು ನೀರು ಅಥವಾ ಹಾಗೂ ಇನ್ನಿತರೇ ನೆಪದಲ್ಲಿ ಪ್ಲಾಸ್ಟಿಕ್​ ಕಾಡು ಸೇರದಂತೆ ನೋಡಿಕೊಳ್ಳಬೇಕು. ಈ ನಿಯಮ ಮುರಿದವರಿಗೆ ದಂಡ ವಿಧಿಸಬೇಕು ಆಗ ಮಾತ್ರ ಜನ ಎಚ್ಚೆತ್ತುಕೊಳ್ಳುತ್ತಾರೆ. ಮಾಡಿದ ತಪ್ಪನ್ನು ಮತ್ತೆ ಮತ್ತೆ ಮಾಡಲಾರರು’ ಎಂದು ಟ್ವಿಟರ್ ಖಾತೆದಾರರೊಬ್ಬರು ಹಂಚಿಕೊಂಡಿದ್ದಾರೆ.

ಇನ್ನೊಬ್ಬ ಖಾತೆದಾರರು, ‘ರೈಲಿನ ಸ್ವಚ್ಛತಾ ಸಿಬ್ಬಂದಿಯು ಪ್ಲಾಸ್ಟಿಕ್​ ಬಾಟಲಿ, ತ್ಯಾಜ್ಯಗಳನ್ನು ಎರಡು ಬೋಗಿಗಳ ನಡುವೆ ಇರುವ ಜಾಗದಿಂದ ರೈಲ್ವೆ ಟ್ರ್ಯಾಕ್​ ಮೇಲೆ ಎಸೆಯುವುದನ್ನು ನೋಡಿದ್ದೇನೆ. ಕಾಡಿನ ಮಧ್ಯೆ ಇರುವ ಕೆಲ ರೈಲ್ವೆ ಹಳಿಗಳ ಬಳಿ ಕಾಡುಪ್ರಾಣಿಗಳು ಓಡಾಡುವಾಗ ಈ ತ್ಯಾಜ್ಯವನ್ನು ತಿನ್ನುವ ಅಪಾಯ ಇದೆ’ ಎಂದಿದ್ದಾರೆ.

1.8 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. 323 ಜನರು ರೀಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ​ 

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ