AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ನೀಲಗಿರಿ ಬೆಟ್ಟಗಳಲ್ಲಿ ಪ್ಲಾಸ್ಟಿಕ್ ಚೀಲ ತಿಂದ ಆನೆ ವಿಡಿಯೋ ವೈರಲ್

Elephant Chewing Plastic : ಬಂಡೀಪುರ-ಮದುಮಲೈ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್​ ಬಳಕೆಯ ಕುರಿತು ನಿಷೇಧ ಹೇರಬೇಕೆಂದು ನೆಟ್ಟಿಗರು ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ.

Viral Video : ನೀಲಗಿರಿ ಬೆಟ್ಟಗಳಲ್ಲಿ ಪ್ಲಾಸ್ಟಿಕ್ ಚೀಲ ತಿಂದ ಆನೆ ವಿಡಿಯೋ ವೈರಲ್
ಪ್ಲಾಸ್ಟಿಕ್ ಬಾಟಲಿ ತಿನ್ನುತ್ತಿರುವ ಆನೆ
TV9 Web
| Edited By: |

Updated on: Sep 23, 2022 | 10:34 AM

Share

Viral Video : ಪ್ಲಾಸ್ಟಿಕ್​ ಬಳಕೆ, ಪ್ರವಾಸಿಗರ ಬೇಜವಾಬ್ದಾರಿತನದಿಂದಾಗಿ ಅರಣ್ಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಉಂಟಾಗಿ, ಕಾಡುಪ್ರಾಣಿಗಳು ಅರಿವಿಲ್ಲದೆ ಪ್ಲಾಸ್ಟಿಕ್​ ತಿನ್ನತೊಡಗಿವೆ. ಇದೀಗ ನೀಲಗಿರಿ ಬೆಟ್ಟಗಳಲ್ಲಿರುವ ಬಂಡೀಪುರ ಮತ್ತು ಮದುಮಲೈ ಪ್ರದೇಶದಲ್ಲಿ ಆನೆಯೊಂದು ಪ್ಲಾಸ್ಟಿಕ್​ ಚೀಲವನ್ನು ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದೆ. ಪ್ಲಾಸ್ಟಿಕ್​ ಆನೆಯ ಜೀವಕ್ಕೆ ಅಪಾಯಕಾರಿ ಎಂಬ ಕಳವಳಕ್ಕೆ ನೆಟ್ಟಿಗರು ಬಿದ್ದಿದ್ದಾರೆ. ಐಪಿಎಸ್ ಅಧಿಕಾರಿ ಸುಸಾಂತ ನಂದಾ ಟ್ವಿಟರ್​ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ.

ಈ ಪೋಸ್ಟ್​​ಗೆ ಪ್ರತಿಕ್ರಿಯಿಸಿದ ಅನೇಕರು, ತ್ಯಾಜ್ಯ ನಿರ್ವಹಣೆ ಪ್ರವಾಸಿಗರ ಜವಾಬ್ದಾರಿಯೂ ಹೌದು. ಹಾಗಾಗಿ ಅರಣ್ಯ ಇಲಾಖೆಯು ಈ ಪ್ರದೇಶದಲ್ಲಿ ಪ್ಲಾಸ್ಟಿಕ್​ ಬಳಕೆ ನಿಷೇಧಿಸಬೇಕು ಎಂದಿದ್ದಾರೆ.

‘ರಾಷ್ಟ್ರೀಯ ಉದ್ಯಾನವನಗಳಲ್ಲಿ ಯಾವುದೇ ರೀತಿಯ ಪ್ಲಾಸ್ಟಿಕ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಅದು ನೀರು ಅಥವಾ ಹಾಗೂ ಇನ್ನಿತರೇ ನೆಪದಲ್ಲಿ ಪ್ಲಾಸ್ಟಿಕ್​ ಕಾಡು ಸೇರದಂತೆ ನೋಡಿಕೊಳ್ಳಬೇಕು. ಈ ನಿಯಮ ಮುರಿದವರಿಗೆ ದಂಡ ವಿಧಿಸಬೇಕು ಆಗ ಮಾತ್ರ ಜನ ಎಚ್ಚೆತ್ತುಕೊಳ್ಳುತ್ತಾರೆ. ಮಾಡಿದ ತಪ್ಪನ್ನು ಮತ್ತೆ ಮತ್ತೆ ಮಾಡಲಾರರು’ ಎಂದು ಟ್ವಿಟರ್ ಖಾತೆದಾರರೊಬ್ಬರು ಹಂಚಿಕೊಂಡಿದ್ದಾರೆ.

ಇನ್ನೊಬ್ಬ ಖಾತೆದಾರರು, ‘ರೈಲಿನ ಸ್ವಚ್ಛತಾ ಸಿಬ್ಬಂದಿಯು ಪ್ಲಾಸ್ಟಿಕ್​ ಬಾಟಲಿ, ತ್ಯಾಜ್ಯಗಳನ್ನು ಎರಡು ಬೋಗಿಗಳ ನಡುವೆ ಇರುವ ಜಾಗದಿಂದ ರೈಲ್ವೆ ಟ್ರ್ಯಾಕ್​ ಮೇಲೆ ಎಸೆಯುವುದನ್ನು ನೋಡಿದ್ದೇನೆ. ಕಾಡಿನ ಮಧ್ಯೆ ಇರುವ ಕೆಲ ರೈಲ್ವೆ ಹಳಿಗಳ ಬಳಿ ಕಾಡುಪ್ರಾಣಿಗಳು ಓಡಾಡುವಾಗ ಈ ತ್ಯಾಜ್ಯವನ್ನು ತಿನ್ನುವ ಅಪಾಯ ಇದೆ’ ಎಂದಿದ್ದಾರೆ.

1.8 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. 323 ಜನರು ರೀಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ​ 

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ