AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ಆಸ್ಪತ್ರೆಯೊಂದರ ಐಸಿಯು ವಾರ್ಡ್​ನಲ್ಲಿ ತಿರುಗಾಡುತ್ತಿರುವ ಹಸುವಿನ ಆರೋಗ್ಯದ ಬಗ್ಗೆ ನೆಟ್ಟಿಗರ ಕಳವಳ

Madhyapradesh : ಬಿಜೆಪಿ ಆಡಳಿತಾವಧಿಯಲ್ಲಿ ಇಂಥ ಪರಿಸ್ಥಿತಿ ಉದ್ಭವಿಸುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಎಂದಿದ್ದಾರೆ ಒಬ್ಬರು. ಗೋರಕ್ಷಕರೆಲ್ಲ ಈಗೆಲ್ಲಿ ಹೋಗಿದ್ದಾರೆ ಎಂದು ಮಗದೊಬ್ಬರು ಕೇಳಿದ್ದಾರೆ. ಇದರಲ್ಲೂ ಬಿಜೆಪಿ? ಎಂದಿದ್ದಾರೆ ಇನ್ನೂ ಒಬ್ಬರು.

ಮಧ್ಯಪ್ರದೇಶದ ಆಸ್ಪತ್ರೆಯೊಂದರ ಐಸಿಯು ವಾರ್ಡ್​ನಲ್ಲಿ ತಿರುಗಾಡುತ್ತಿರುವ ಹಸುವಿನ ಆರೋಗ್ಯದ ಬಗ್ಗೆ ನೆಟ್ಟಿಗರ ಕಳವಳ
ಮಧ್ಯಪ್ರದೇಶದ ಆಸ್ಪತ್ರೆಯ ಐಸಿಯು ವಾರ್ಡ್​ನೊಳಗೆ ತಿರಗಾಡುತ್ತಿರುವ ಹಸು
Follow us
TV9 Web
| Updated By: ಶ್ರೀದೇವಿ ಕಳಸದ

Updated on: Nov 21, 2022 | 12:56 PM

Viral Video : ಕೆಲದಿನಗಳ ಹಿಂದೆ ತೆಲಂಗಾಣದ ಸರ್ಕಾರಿ ಆಸ್ಪತ್ರೆಯ ವಾರ್ಡ್​ನೊಳಗೆ ಹಾವು ಹರಿದಾಡಿದ್ದನ್ನು ನೋಡಿದಿರಿ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಮಧ್ಯಪ್ರದೆಶದ ರಾಜ್​ಗಢ್​ನ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕದ (ICU)ಕ್ಕೆ ಹಸುವೊಂದು ನುಗ್ಗಿದೆ. ಒಳಗಿರುವ ಕಸದ ಬುಟ್ಟಿಗಳನ್ನೆಲ್ಲ ತಡಕಾಡಿಕೊಂಡು ಆಹಾರಕ್ಕಾಗಿ ಹುಡುಕಾಟ ನಡೆಸುತ್ತಿದೆ. ನೆಟ್ಟಿಗರು ಈ ಅವ್ಯವಸ್ಥೆಯ ಬಗ್ಗೆ ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ಕಿಡಿಕಾರುತ್ತಿದ್ದಾರೆ.

ಸಿವಿಲ್ ಸರ್ಜನ್​ ಡಾ. ರಾಜೇಂದ್ರ ಕಟಾರಿಯಾ, ‘ಇದು ಹಳೆಯ ಕೋವಿಡ್ ಐಡಿಯು ವಾರ್ಡ್​. ವಾರ್ಡ್​ ಬಾಯ್​ ಮತ್ತು ಭದ್ರತಾ ಸಿಬ್ಬಂದಿಯ ಅಚಾತುರ್ಯದಿಂದ ಈ ಘಟನೆ ನಡೆಇದೆ. ಈ ವಿಷಯವಾಗಿ ಕ್ರಮ ಗೈಗೊಳ್ಳಲಾಗುವುದು’ ಎಂದಿದ್ದಾರೆ.

ಹೀಗೆ ಮನಬಂದಂತೆ ಈ ಹಸು ಐಸಿಯು ಒಳಗೆ ತಿರುಗಾಡಿಕೊಂಡಿದ್ದರೂ ಯಾವೊಬ್ಬ ಸಿಬ್ಬಂದಿಯೂ ಇತ್ತ ಗಮನ ಕೊಟ್ಟಿಲ್ಲ. ವಿಡಿಯೋ ವೈರಲ್ ಆದ ನಂತರ ಪೊಲೀಸರಿಗೆ ಈ ವಿಷಯ ತಲುಪಿದೆ. ಆಡಳಿತ ಸಿಬ್ಬಂದಿರ ವಿರುದ್ಧ ಕ್ರಮವನ್ನು ಕೈಗೊಂಡಿದ್ದಾರೆ.

ನೆಟ್ಟಿಗರು ಈ ಬಗ್ಗೆ ಕುಪಿತರಾಗಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ಇಂಥ ಪರಿಸ್ಥಿತಿ ಉದ್ಭವಿಸುತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ ಎಂದಿದ್ದಾರೆ ಒಬ್ಬರು. ಇದರಲ್ಲೂ ಬಿಜೆಪಿ! ಎಂದು ಮರುಪ್ರಶ್ನಿಸಿದ್ದಾರೆ ಇನ್ನೊಬ್ಬರು. ಗೋರಕ್ಷಕರೆಲ್ಲ ಈಗೆಲ್ಲಿ ಹೋಗಿದ್ದಾರೆ ಎಂದು ಮಗದೊಬ್ಬರು ಕೇಳಿದ್ದಾರೆ. ಅದ್ಭುತ! ಇದು ಪ್ರಾಣಿಚಿಕಿತ್ಸಾಲಯ ಎಂದುಕೊಂಡಿದ್ದೆ ಎಂದಿದ್ದಾರೆ ಒಬ್ಬರು. ಆಕೆ ಐಸಿಯು ಪ್ರವೇಶಿಸಿದ್ದು ನನಗೆ ಬೇಸರ ತಂದಿಲ್ಲ. ಆದರೆ ಆಸ್ಪತ್ರೆಯ ತ್ಯಾಜ್ಯವನ್ನು ತಿನ್ನುತ್ತಿರುವ ಆಕೆಯ ಆರೋಗ್ಯದ ಪರಿಸ್ಥಿತಿ ಏನಾಗಬಹುದು ಎಂದು ಕಳವಳಕ್ಕೀಡಾಗಿದ್ದೇನೆ ಎಂದಿದ್ದಾರೆ ಇನ್ನೊಬ್ಬರು.

ಒಂದು ಘಟನೆಗೆ ಎಷ್ಟೊಂದು ಮುಖಗಳಿರುತ್ತವಲ್ಲ?

ಈ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್