AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಚೀನಾ vs ಭಾರತ ಸೇನೆ ನಡುವೆ ಹಗ್ಗ ಜಗ್ಗಾಟ; ರೋಚಕ ಪಂದ್ಯದಲ್ಲಿ ಚೀನಾ ಯೋಧರನ್ನು  ಸೋಲಿಸಿದ ಭಾರತೀಯ ಸೇನೆ

ವಿಶ್ವ ಸಂಸ್ಥೆಯ ಶಾಂತಿಪಾಲನಾ ಕಾರ್ಯಾಕ್ರಮದ ಭಾಗವಾಗಿ ಸುಡಾನ್‌ನಲ್ಲಿ ಆಯೋಜಿಸಲಾಗಿದ್ದ ʼಟಗ್‌-ಆಫ್-ವಾರ್‌ʼ ಸ್ಪರ್ಧೆಯಲ್ಲಿ ಚೀನಾ ಸೈನಿಕರನ್ನು ಭಾರತೀಯ ಸೇನೆಯ ಸೈನಿಕರು ಸೋಲಿಸಿದ್ದಾರೆ. ಉಭಯ ದೇಶಗಳ ಸೈನಿಕರ ಸೌಹಾರ್ದಯುತವಾದ ಈ ಸ್ಪರ್ಧೆಯ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. 

Viral: ಚೀನಾ vs ಭಾರತ ಸೇನೆ ನಡುವೆ ಹಗ್ಗ ಜಗ್ಗಾಟ; ರೋಚಕ ಪಂದ್ಯದಲ್ಲಿ ಚೀನಾ ಯೋಧರನ್ನು  ಸೋಲಿಸಿದ ಭಾರತೀಯ ಸೇನೆ
ಮಾಲಾಶ್ರೀ ಅಂಚನ್​
| Edited By: |

Updated on: May 31, 2024 | 5:18 PM

Share

ಏಷ್ಯಾ ಖಂಡದಲ್ಲಿ ಬಲಿಷ್ಠ ರಾಷ್ಟ್ರಗಳು ಎಂಬ ಹೆಸರು ಪಡೆದಿರುವ ಭಾರತ ಮತ್ತು ಚೀನಾ ಬದ್ಧ ವೈರಿಗಳು ಅಂತಾನೇ ಹೇಳಬಹುದು. 1962 ರಿಂದಲೂ  ಚೀನಾ-ಭಾರತ ಬಾರ್ಡರ್‌ ಫೈಟ್‌ ನಡೆಯುತ್ತಲೇ ಇವೆ. ಇದೀಗ ಈ ಎರಡು ರಾಷ್ಟ್ರಗಳಿಗೆ ಸಂಬಂಧಪಟ್ಟ ವಿಡಿಯೋವೊಂದು ವೈರಲ್‌ ಆಗಿದ್ದು, ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸೌಹಾರ್ದಯುತ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ನಮ್ಮ ಹೆಮ್ಮೆಯ ಭಾರತೀಯ ಸೇನೆ  ಚೀನಾ ಯೋಧರನ್ನು ಸೋಲಿಸಿದೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಆಫ್ರಿಕಾದ ಸುಡಾನ್‌ನಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಕ್ರಮದ ಭಾಗವಾಗಿ  ಆಯೋಜಿಸಲಾಗಿದ್ದ ಸೌಹಾರ್ದಯುತ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ  ಭಾರತೀಯ ಸೇನೆಯ ಯೋಧರು ಚೀನಾದ ಸೈನಿಕರನ್ನು ಸೋಲಿಸಿದ್ದಾರೆ. ಈ ಕುರಿತ ವಿಡಿಯೋವೊಂದನ್ನು  ಸುದ್ದಿ ಸಂಸ್ಥೆ ANI ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಯುಎನ್‌ ಶಾಂತಿಪಾಲನಾ ಕಾರ್ಯಕ್ರಮದ ಅಡಿಯಲ್ಲಿ ಸುಡಾನ್‌ನಲ್ಲಿ ಆಯೋಜಿಸಲಾದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಚೀನಾ ಸೈನಿಕರ ವಿರುದ್ಧದ ಪಂದ್ಯದಲ್ಲಿ ಭಾರತೀಯ ಯೋಧರು ರೋಚಕ ಜಯ ಸಾಧಿಸಿದ್ದಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

49 ಸೆಕೆಂಡುಗಳ ಈ ವೈರಲ್‌ ವಿಡಿಯೋದಲ್ಲಿ ಭಾರತೀಯ ಸೈನ್ಯ ಮತ್ತು ಚೀನಾ ಸೈನ್ಯದ ನಡುವೆ ನಡೆದ ಸೌಹಾರ್ದಯುತ, ಮೋಜಿನ ಹಗ್ಗಜಗ್ಗಾಟ ಸ್ಪರ್ಧೆಯನ್ನು ಕಾಣಬಹುದು. ಈ ಪಂದ್ಯದಲ್ಲಿ ಭಾರತೀಯ ಯೋಧರು ರೋಚಕ ಜಯವನ್ನು ಸಾಧಿಸಿದ್ದಾರೆ.

ಇದನ್ನೂ ಓದಿ: ಬಾಡಿಗೆ ಗರ್ಲ್ ಫ್ರೆಂಡ್; ಈ ಹುಡುಗಿಯ ಕಡೆಯಿಂದ ಸಿಂಗಲ್ಸ್​​​​ ಹುಡುಗರಿಗೆ ಬಿಗ್​​ ಆಫರ್​

ಮೇ 28 ರಂದು ಹಂಚಿಕೊಳ್ಳಲಾದ ಈ ವಿಡಿಯೋ 4 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನೆಟ್ಟಿಗರು ಕಾಮೆಂಟ್ಸ್‌ ಮಾಡುತ್ತಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ