AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ನ್ಯೂಜೆರ್ಸಿಯಲ್ಲಿ ಅಮಿತಾಬ್​ ಬಚ್ಚನ್ ಮೂರ್ತಿ ಪ್ರತಿಷ್ಠಾಪನೆ

Amithab Bachchan : ಬಿಗ್​ಬಿ ಮೇಲಿನ ಪ್ರೀತಿಗೆ ಮಿತಿಯೇ ಇಲ್ಲ. ನ್ಯೂಜೆರ್ಸಿಯ ಮನೆಯೊಂದರಲ್ಲಿ ಭಾರತೀಯ-ಅಮೆರಿಕನ್ ಕುಟುಂಬ ಅಮಿತಾಬ್ ಬಚ್ಚನ್ ಪ್ರತಿಮೆಯನ್ನು ಸ್ಥಾಪಿಸಿದೆ.

Viral : ನ್ಯೂಜೆರ್ಸಿಯಲ್ಲಿ ಅಮಿತಾಬ್​ ಬಚ್ಚನ್ ಮೂರ್ತಿ ಪ್ರತಿಷ್ಠಾಪನೆ
ಅಮಿತಾಬ್​ ಬಚ್ಚನ್ ಮೂರ್ತಿಯೊಂದಿಗೆ ಸೇಠ್ ಕುಟುಂಬದ ಸದಸ್ಯರು
TV9 Web
| Edited By: |

Updated on:Aug 29, 2022 | 4:38 PM

Share

Viral  : ನ್ಯೂಜೆರ್ಸಿಯ ಎಡಿಸನ್ ನಗರದಲ್ಲಿರುವ ಇಂಡೋ-ಅಮೇರಿಕನ್ ಕುಟುಂಬವು ತಮ್ಮ ಮನೆಯ ಮುಂದೆ ಬಾಲಿವುಡ್ ಸೂಪರ್‌ಸ್ಟಾರ್‌ ಅಮಿತಾಬ್​ ಬಚ್ಚನ್​ ಅವರ ಪ್ರತಿಮೆಯನ್ನು ಸ್ಥಾಪಿಸಿದೆ.  ಪ್ರತಿಮೆಯನ್ನು ದೊಡ್ಡ ಗಾಜಿನ ಪೆಟ್ಟಿಗೆಯೊಳಗೆ ಇರಿಸಲಾಗಿದೆ. ಪ್ರತಿಮೆಯನ್ನು ರಾಜಸ್ಥಾನದಲ್ಲಿ ತಯಾರಿಸಿ ನಂತರ ಅಮೆರಿಕಕ್ಕೆ ತರಿಸಿಕೊಳ್ಳಲಾಗಿದೆ. ಇದಕ್ಕೆ ಅಂದಾಜು ರೂ. 60 ಲಕ್ಷ ಖರ್ಚು ಮಾಡಲಾಗಿದೆ. ಅನಾವರಣ ಕಾರ್ಯಕ್ರಮವೂ ಅದ್ಧೂರಿಯಾಗಿಯೇ ನಡೆದಿದೆ. ಅಭಿಮಾನಿಗಳ ಸಂಘದ ಸದಸ್ಯರುಗಳು ಇದರಲ್ಲಿ ಪಾಲ್ಗೊಂಡು, ಪಟಾಕಿ ಸಿಡಿಸಿ, ನೃತ್ಯ ಮಾಡಿ ಸಂಭ್ರಮಿಸಿದ್ದಾರೆ.

‘ನನಗೆ ಮತ್ತು ನನ್ನ ಹೆಂಡತಿಗೆ ಬಿಗ್​ ಬಿ ದೇವರಸಮಾನ’ ಎಂದು ಗೋಪಿ ಸೇಠ್ ಪಿಟಿಐಗೆ ತಿಳಿಸಿದ್ದಾರೆ. ಗೋಪಿ ಸೇಠ್ ಅವರ ಕುಟುಂಬಕ್ಕೆ ಮೀಸಲಾಗಿರುವ ಟ್ವಿಟರ್ ಖಾತೆಯಲ್ಲಿ ಈ ಸಮಾರಂಭದ ಫೋಟೋಗಳು ಪೋಸ್ಟ್ ಆಗಿವೆ.

‘ಆಗಸ್ಟ್ 27 ರ ಶನಿವಾರದಂದು ಎಡಿಸನ್ NJ USA ನಲ್ಲಿರುವ ನಮ್ಮ ಹೊಸ ಮನೆಯ ಮುಂಭಾಗದಲ್ಲಿ @SrBachchan ಪ್ರತಿಮೆಯನ್ನು ಸ್ಥಾಪಿಸಿದ್ದೇವೆ. ಬಚ್ಚನ್ ಅವರ ಪ್ರತಿಮೆ ಉದ್ಘಾಟನಾ ಸಮಾರಂಭದಲ್ಲಿ ಅವರ ಅನೇಕ ಅಭಿಮಾನಿಗಳು ಭಾಗವಹಿಸಿದ್ದರು’ ಎಂಬ ಒಕ್ಕಣೆ ಈ ಪೋಸ್ಟ್​ನದ್ದು.

ಸೇಠ್, 1990 ರಲ್ಲಿ ಪೂರ್ವ ಗುಜರಾತ್‌ನ ದಾಹೋಡ್‌ನಿಂದ ಯುಎಸ್‌ಗೆ ಬಂದವರು. ಕಳೆದ ಮೂವತ್ತು ವರ್ಷಗಳಿಂದ “ಬಿಗ್ ಬಿ ಎಕ್ಸ್ಟೆಂಡೆಡ್ ಫ್ಯಾಮಿಲಿ” ಗಾಗಿ ವೆಬ್‌ಸೈಟ್ www.BigBEFamily.com ಅನ್ನು ನಡೆಸುತ್ತಿದ್ದಾರೆ.

1991 ರಲ್ಲಿ ನ್ಯೂಜೆರ್ಸಿಯಲ್ಲಿ ನವರಾತ್ರಿ ಆಚರಣೆಯ ಸಂದರ್ಭದಲ್ಲಿ ಅಮಿತಾಬ್ ಬಚ್ಚನ್ ಅವರನ್ನು ಭೇಟಿಯಾದ ಸೇಠ್, ಅಂದಿನಿಂದಲೇ ಅವರ ಅಭಿಮಾನಿಯಾದರು.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 3:52 pm, Mon, 29 August 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?