AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೆಯುವ ಚಳಿಯಲ್ಲಿ ಗರ್ಭಿಣಿ ಮಹಿಳೆಯನ್ನು ಸ್ಟ್ರೆಚರ್​ನಲ್ಲಿ ಹೊತ್ತು ಆಸ್ಪತ್ರೆಗೆ ದಾಖಲಿಸಿದ ಭಾರತೀಯ ಯೋಧರು; ವಿಡಿಯೋ ಇಲ್ಲಿದೆ

Army helps to Pregnant woman: ಭಾರತೀಯ ಸೇನೆಯ ಯೋಧರು ಅನಾರೋಗ್ಯ ಹೊಂದಿದ್ದ ಗರ್ಭಿಣಿ ಮಹಿಳೆಯನ್ನು ಸ್ಟ್ರೆಚರ್​ನಲ್ಲಿ ಹೊತ್ತು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆ ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ,

ಕೊರೆಯುವ ಚಳಿಯಲ್ಲಿ ಗರ್ಭಿಣಿ ಮಹಿಳೆಯನ್ನು ಸ್ಟ್ರೆಚರ್​ನಲ್ಲಿ ಹೊತ್ತು ಆಸ್ಪತ್ರೆಗೆ ದಾಖಲಿಸಿದ ಭಾರತೀಯ ಯೋಧರು; ವಿಡಿಯೋ ಇಲ್ಲಿದೆ
ಗರ್ಭಿಣಿ ಮಹಿಳೆಯನ್ನು ಸಾಗಿಸುತ್ತಿರುವ ಭಾರತೀಯ ಸೇನೆ
TV9 Web
| Edited By: |

Updated on:Jan 09, 2022 | 3:07 PM

Share

ಉತ್ತರ ಭಾರತದಲ್ಲಿ ತಾಪಮಾನ ತೀವ್ರವಾಗಿ ಕುಸಿಯುತ್ತಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತದ ನಡುವೆಯೂ ಸೈನಿಕರು ದೇಶಕ್ಕಾಗಿ ಕರ್ತವ್ಯ ಸಲ್ಲಿಸುತ್ತಿದ್ದಾರೆ. ಈ ನಡುವೆ ಅಗತ್ಯವಿರುವವರಿಗೆ ಭಾರತೀಯ ಸೇನೆ ಹೆಗಲಾಗಿ ನಿಂತು ಸಹಾಯವನ್ನೂ ಮಾಡುತ್ತಿದೆ. ಸುರಿಯುತ್ತಿರುವ ಹಿಮದ ನಡುವೆ ಗರ್ಭಿಣಿ ಮಹಿಳೆಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಕೊರೆಯುವ ಚಳಿಯಲ್ಲಿ ನಡೆದಾಡಲು ಕಷ್ಟಕರವಾದ ಪ್ರದೇಶದಲ್ಲಿ ಸೈನಿಕರು ಗರ್ಭಿಣಿ ಮಹಿಳೆಯನ್ನು ಸ್ಟ್ರೆಚರ್ ಮೇಲೆ ಹೊತ್ತುಕೊಂಡು ಸಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ವಿಡಿಯೋವನ್ನು ಸೇನೆಯ ಚಿನಾರ್ ಕಾರ್ಪ್ಸ್ ಪಡೆಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಬಾರಾಮುಲ್ಲಾ ಜಿಲ್ಲೆಯ ರಾಮನಗರಿ ಗಜ್ಜರ್ ಕಣಿವೆಯಲ್ಲಿ ಗರ್ಭಿಣಿಯೋರ್ವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕುಟುಂಬಸ್ಥರು ನೆರವು ನೀಡುವಂತೆ ಸೇನೆಗೆ ಮನವಿ ಮಾಡಿದರು. ಚಿನಾರ್ ಆರ್ಮಿ ವೈದ್ಯಕೀಯ ತಂಡವು ಹಿಮದಲ್ಲಿ ಹೊರಟು ಪ್ರದೇಶವನ್ನು ತಲುಪಿ ಮಹಿಳೆಯನ್ನು ಸ್ಟ್ರೆಚರ್‌ನಲ್ಲಿ ಸುರಕ್ಷಿತವಾಗಿ ಆಸ್ಪತ್ರೆಗೆ ಸ್ಥಳಾಂತರಿಸಿತು. ಶೋಪಿಯಾನ್‌ನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆಯನ್ನು ಗಜ್ಜರ್ ಹಿಲ್ಸ್ ನಿಂದ ಸಲಾಸನ್​ವರೆಗೆ ಒಟ್ಟು 6.5 ಕಿ.ಮೀ ದೂರವನ್ನು ಹೊತ್ತುಕೊಂಡೇ ಸಾಗಿಸಿ ಸೇನೆ ಚಿಕಿತ್ಸೆ ನೀಡಿದೆ ಎನ್ನಲಾಗಿದೆ.

ತೀವ್ರ ಹಿಮಪಾತ ಮತ್ತು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ನಡುವೆಯೂ ಯೋಧರ ಸೇವೆಗೆ ಸ್ಥಳೀಯರು ಕೃತಜ್ಞತೆ ಸೂಚಿಸಿದ್ದಾರೆ. ಇಂದು ಮಾಹಿತಿ ಹಂಚಿಕೊಂಡಿರುವ ಚಿನಾರ್ ಕಾರ್ಪ್ಸ್ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ತಿಳಿಸಿದೆ. ಸದ್ಯ ವಿಡಿಯೋ ವೈರಲ್ ಆಗಿದ್ದು, ವಿಡಿಯೋ ಇಲ್ಲಿದೆ.

ಇದನ್ನೂ ಓದಿ:

Viral Video: ಪೊಲೀಸ್ ವ್ಯಾನ್​ನಲ್ಲಿ ಕರೆದೊಯ್ಯುತ್ತಿರುವಾಗಲೇ ಕೈಕೋಳ ತೊಡಿಸಿದ್ದ ಖೈದಿ ಎಸ್ಕೇಪ್; ಇಲ್ಲಿದೆ ವೈರಲ್ ವಿಡಿಯೋ

ಬಿಜೆಪಿ ಸಂಸದ ವರುಣ್​ ಗಾಂಧಿಗೆ ಕೊವಿಡ್ 19 ಸೋಂಕು; ಗಂಭೀರ ಸ್ವರೂಪದ ಲಕ್ಷಣಗಳಿವೆ ಎಂದು ಟ್ವೀಟ್​

Published On - 3:05 pm, Sun, 9 January 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್