AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೆಯುವ ಚಳಿಯಲ್ಲಿ ಗರ್ಭಿಣಿ ಮಹಿಳೆಯನ್ನು ಸ್ಟ್ರೆಚರ್​ನಲ್ಲಿ ಹೊತ್ತು ಆಸ್ಪತ್ರೆಗೆ ದಾಖಲಿಸಿದ ಭಾರತೀಯ ಯೋಧರು; ವಿಡಿಯೋ ಇಲ್ಲಿದೆ

Army helps to Pregnant woman: ಭಾರತೀಯ ಸೇನೆಯ ಯೋಧರು ಅನಾರೋಗ್ಯ ಹೊಂದಿದ್ದ ಗರ್ಭಿಣಿ ಮಹಿಳೆಯನ್ನು ಸ್ಟ್ರೆಚರ್​ನಲ್ಲಿ ಹೊತ್ತು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆ ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ,

ಕೊರೆಯುವ ಚಳಿಯಲ್ಲಿ ಗರ್ಭಿಣಿ ಮಹಿಳೆಯನ್ನು ಸ್ಟ್ರೆಚರ್​ನಲ್ಲಿ ಹೊತ್ತು ಆಸ್ಪತ್ರೆಗೆ ದಾಖಲಿಸಿದ ಭಾರತೀಯ ಯೋಧರು; ವಿಡಿಯೋ ಇಲ್ಲಿದೆ
ಗರ್ಭಿಣಿ ಮಹಿಳೆಯನ್ನು ಸಾಗಿಸುತ್ತಿರುವ ಭಾರತೀಯ ಸೇನೆ
TV9 Web
| Edited By: |

Updated on:Jan 09, 2022 | 3:07 PM

Share

ಉತ್ತರ ಭಾರತದಲ್ಲಿ ತಾಪಮಾನ ತೀವ್ರವಾಗಿ ಕುಸಿಯುತ್ತಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತದ ನಡುವೆಯೂ ಸೈನಿಕರು ದೇಶಕ್ಕಾಗಿ ಕರ್ತವ್ಯ ಸಲ್ಲಿಸುತ್ತಿದ್ದಾರೆ. ಈ ನಡುವೆ ಅಗತ್ಯವಿರುವವರಿಗೆ ಭಾರತೀಯ ಸೇನೆ ಹೆಗಲಾಗಿ ನಿಂತು ಸಹಾಯವನ್ನೂ ಮಾಡುತ್ತಿದೆ. ಸುರಿಯುತ್ತಿರುವ ಹಿಮದ ನಡುವೆ ಗರ್ಭಿಣಿ ಮಹಿಳೆಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಕೊರೆಯುವ ಚಳಿಯಲ್ಲಿ ನಡೆದಾಡಲು ಕಷ್ಟಕರವಾದ ಪ್ರದೇಶದಲ್ಲಿ ಸೈನಿಕರು ಗರ್ಭಿಣಿ ಮಹಿಳೆಯನ್ನು ಸ್ಟ್ರೆಚರ್ ಮೇಲೆ ಹೊತ್ತುಕೊಂಡು ಸಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ವಿಡಿಯೋವನ್ನು ಸೇನೆಯ ಚಿನಾರ್ ಕಾರ್ಪ್ಸ್ ಪಡೆಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಬಾರಾಮುಲ್ಲಾ ಜಿಲ್ಲೆಯ ರಾಮನಗರಿ ಗಜ್ಜರ್ ಕಣಿವೆಯಲ್ಲಿ ಗರ್ಭಿಣಿಯೋರ್ವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕುಟುಂಬಸ್ಥರು ನೆರವು ನೀಡುವಂತೆ ಸೇನೆಗೆ ಮನವಿ ಮಾಡಿದರು. ಚಿನಾರ್ ಆರ್ಮಿ ವೈದ್ಯಕೀಯ ತಂಡವು ಹಿಮದಲ್ಲಿ ಹೊರಟು ಪ್ರದೇಶವನ್ನು ತಲುಪಿ ಮಹಿಳೆಯನ್ನು ಸ್ಟ್ರೆಚರ್‌ನಲ್ಲಿ ಸುರಕ್ಷಿತವಾಗಿ ಆಸ್ಪತ್ರೆಗೆ ಸ್ಥಳಾಂತರಿಸಿತು. ಶೋಪಿಯಾನ್‌ನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆಯನ್ನು ಗಜ್ಜರ್ ಹಿಲ್ಸ್ ನಿಂದ ಸಲಾಸನ್​ವರೆಗೆ ಒಟ್ಟು 6.5 ಕಿ.ಮೀ ದೂರವನ್ನು ಹೊತ್ತುಕೊಂಡೇ ಸಾಗಿಸಿ ಸೇನೆ ಚಿಕಿತ್ಸೆ ನೀಡಿದೆ ಎನ್ನಲಾಗಿದೆ.

ತೀವ್ರ ಹಿಮಪಾತ ಮತ್ತು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ನಡುವೆಯೂ ಯೋಧರ ಸೇವೆಗೆ ಸ್ಥಳೀಯರು ಕೃತಜ್ಞತೆ ಸೂಚಿಸಿದ್ದಾರೆ. ಇಂದು ಮಾಹಿತಿ ಹಂಚಿಕೊಂಡಿರುವ ಚಿನಾರ್ ಕಾರ್ಪ್ಸ್ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ತಿಳಿಸಿದೆ. ಸದ್ಯ ವಿಡಿಯೋ ವೈರಲ್ ಆಗಿದ್ದು, ವಿಡಿಯೋ ಇಲ್ಲಿದೆ.

ಇದನ್ನೂ ಓದಿ:

Viral Video: ಪೊಲೀಸ್ ವ್ಯಾನ್​ನಲ್ಲಿ ಕರೆದೊಯ್ಯುತ್ತಿರುವಾಗಲೇ ಕೈಕೋಳ ತೊಡಿಸಿದ್ದ ಖೈದಿ ಎಸ್ಕೇಪ್; ಇಲ್ಲಿದೆ ವೈರಲ್ ವಿಡಿಯೋ

ಬಿಜೆಪಿ ಸಂಸದ ವರುಣ್​ ಗಾಂಧಿಗೆ ಕೊವಿಡ್ 19 ಸೋಂಕು; ಗಂಭೀರ ಸ್ವರೂಪದ ಲಕ್ಷಣಗಳಿವೆ ಎಂದು ಟ್ವೀಟ್​

Published On - 3:05 pm, Sun, 9 January 22

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್