ಹಿಮದ ರಾಶಿಯ ನಡುವೆ ವಾಲಿಬಾಲ್​ ಆಡಿದ ಭಾರತೀಯ ಯೋಧರು: ವಿಡಿಯೋ ವೈರಲ್​

ಐಎಎಸ್​ ಅಧಿಕಾರಿ ಅವನೀಶ್​ ಶರಣ್​ ಯೋಧರು ವಾಲಿಬಾಲ್​ ಆಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.  ವಿಡಿಯೋದಲ್ಲಿ ಯೋಧರು ಎರಡು ತಂಡಗಳಾಗಿ ಹಿಮದ ರಾಶಿಯ ಮಧ್ಯೆ ವಾಲಿಬಾಲ್​ ಆಡವುದನ್ನು ಕಾಣಬಹುದು. 

ಹಿಮದ ರಾಶಿಯ ನಡುವೆ ವಾಲಿಬಾಲ್​ ಆಡಿದ ಭಾರತೀಯ ಯೋಧರು: ವಿಡಿಯೋ ವೈರಲ್​
ವಾಲಿಬಾಲ್​ ಆಡುತ್ತಿರುವ ಯೋಧರು
Follow us
| Updated By: Pavitra Bhat Jigalemane

Updated on: Jan 14, 2022 | 10:48 AM

ದೇಶದ ಜನತೆ ಯಾವುದೇ ಭಯೋತ್ಪಾದಕರ ಭಯವಿಲ್ಲದೆ  ನೆಮ್ಮದಿಯಿಂದ ನಿದ್ದೆ ಮಾಡುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಸೈನಿಕರು. ದೇಶ ಕಾಯವ ಯೋಧರು ಹೆತ್ತವರು, ಮಡದಿ ಮಕ್ಕಳಿಂದ ದೂರವುಳಿದು ದೇಶವನ್ನು ಕಾಯಲು ತೆರಳುತ್ತಾರೆ. ಮಳೆ. ಮೈ ಕೊರೆಯುವ ಚಳಿ, ಬಿಸಿಲೆನ್ನದೆ ಮನೆಯವರೊಂದಿಗಿನ ಹಬ್ಬದ ಖುಷಿ ಇಲ್ಲದೆ ದೇಶಕ್ಕಾಗಿ ಜೀವನ ಮುಡಿಪಿಡುವ ಅವರ ಧೈರ್ಯ, ಸಾಹಸ ಪದಗಳಿಗೆ ನಿಲುಕದ್ದು. ತಮ್ಮ ಜತೆ ಇರುವವರನ್ನೇ ಕುಟುಂಬ ಎಂದು ತಿಳಿದು ಇದ್ದಲ್ಲೇ ಸಂಭ್ರಮಿಸಿ ಖುಷಿ ಪಡುವ ಸೈನಿಕರ ಮನಸ್ಥಿತಿಯನ್ನು ನಿಜಕ್ಕೂ ಮೆಚ್ಚಲೇಬೇಕು. ಇದೀಗ ಭಾರತೀಯ ಯೋಧರು ಮೈ ಕೊರೆಯುವ ಚಳಿಯಲ್ಲಿ ಹಿಮದ ಮಧ್ಯೆ ವಾಲಿಬಾಲ್​ ಆಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬೆಸ್ಟ್​ ವಿಂಟರ್​ ಗೇಮ್ಸ್​ ಎಂದು ಕ್ಯಾಪ್ಷನ್​ ನೀಡುವ ಮೂಲಕ ಐಎಎಸ್​ ಅಧಿಕಾರಿ ಅವನೀಶ್​ ಶರಣ್​ ಯೋಧರು ವಾಲಿಬಾಲ್​ ಆಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.  ವಿಡಿಯೋದಲ್ಲಿ ಯೋಧರು ಎರಡು ತಂಡಗಳಾಗಿ ಹಿಮದ ರಾಶಿಯ ಮಧ್ಯೆ ವಾಲಿಬಾಲ್​ ಆಡುವುದನ್ನು ಕಾಣಬಹುದು. ಸದ್ಯ ಟ್ವಿಟರ್​ನಲ್ಲಿ ವಿಡಿಯೋ ಸಖತ್​ ವೈರಲ್​ ಆಗಿದೆ.  ನೆಟ್ಟಿಗರು ಯೋಧರ ಸಂಭ್ರಮ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಈವರೆಗೆ  ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದ್ದು 13 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದಿದೆ. ವಿಡಿಯೋ ನೋಡಿ ಬಳಕೆದಾರರು ಯೋಧರ ಸಾಹಸಕ್ಕೆ ಸೆಲ್ಯೂಟ್​ ಮಾಡಿದ್ದಾರೆ. ಚಳಿಗಾಲದ ಕಾರಣ ಉತ್ತರ ಭಾರತದಲ್ಲಿ ಹಿಮಪಾತವಾಗುತ್ತಿದೆ. ತಾಪಮಾನ ಮೈನಸ್​ ಗೆ ಇಳಿದಿದೆ ಹೀಗಿದ್ದರೂ ಯೋಧರು ದೇಶವನ್ನು ಕಾಯುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಹಿಮಪಾತದ ನಡುವೆಯೂ ಯೋಧರು ಎದೆಗುಂದದೆ ಹಿಮದ ರಾಶಿಯ ನಡುವೆ ನಿಂತ ವಿಡಿಯೋ ವೈರಲ್ ಅಗಿತ್ತು.

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು