AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮದ ರಾಶಿಯ ನಡುವೆ ವಾಲಿಬಾಲ್​ ಆಡಿದ ಭಾರತೀಯ ಯೋಧರು: ವಿಡಿಯೋ ವೈರಲ್​

ಐಎಎಸ್​ ಅಧಿಕಾರಿ ಅವನೀಶ್​ ಶರಣ್​ ಯೋಧರು ವಾಲಿಬಾಲ್​ ಆಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.  ವಿಡಿಯೋದಲ್ಲಿ ಯೋಧರು ಎರಡು ತಂಡಗಳಾಗಿ ಹಿಮದ ರಾಶಿಯ ಮಧ್ಯೆ ವಾಲಿಬಾಲ್​ ಆಡವುದನ್ನು ಕಾಣಬಹುದು. 

ಹಿಮದ ರಾಶಿಯ ನಡುವೆ ವಾಲಿಬಾಲ್​ ಆಡಿದ ಭಾರತೀಯ ಯೋಧರು: ವಿಡಿಯೋ ವೈರಲ್​
ವಾಲಿಬಾಲ್​ ಆಡುತ್ತಿರುವ ಯೋಧರು
TV9 Web
| Edited By: |

Updated on: Jan 14, 2022 | 10:48 AM

Share

ದೇಶದ ಜನತೆ ಯಾವುದೇ ಭಯೋತ್ಪಾದಕರ ಭಯವಿಲ್ಲದೆ  ನೆಮ್ಮದಿಯಿಂದ ನಿದ್ದೆ ಮಾಡುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಸೈನಿಕರು. ದೇಶ ಕಾಯವ ಯೋಧರು ಹೆತ್ತವರು, ಮಡದಿ ಮಕ್ಕಳಿಂದ ದೂರವುಳಿದು ದೇಶವನ್ನು ಕಾಯಲು ತೆರಳುತ್ತಾರೆ. ಮಳೆ. ಮೈ ಕೊರೆಯುವ ಚಳಿ, ಬಿಸಿಲೆನ್ನದೆ ಮನೆಯವರೊಂದಿಗಿನ ಹಬ್ಬದ ಖುಷಿ ಇಲ್ಲದೆ ದೇಶಕ್ಕಾಗಿ ಜೀವನ ಮುಡಿಪಿಡುವ ಅವರ ಧೈರ್ಯ, ಸಾಹಸ ಪದಗಳಿಗೆ ನಿಲುಕದ್ದು. ತಮ್ಮ ಜತೆ ಇರುವವರನ್ನೇ ಕುಟುಂಬ ಎಂದು ತಿಳಿದು ಇದ್ದಲ್ಲೇ ಸಂಭ್ರಮಿಸಿ ಖುಷಿ ಪಡುವ ಸೈನಿಕರ ಮನಸ್ಥಿತಿಯನ್ನು ನಿಜಕ್ಕೂ ಮೆಚ್ಚಲೇಬೇಕು. ಇದೀಗ ಭಾರತೀಯ ಯೋಧರು ಮೈ ಕೊರೆಯುವ ಚಳಿಯಲ್ಲಿ ಹಿಮದ ಮಧ್ಯೆ ವಾಲಿಬಾಲ್​ ಆಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬೆಸ್ಟ್​ ವಿಂಟರ್​ ಗೇಮ್ಸ್​ ಎಂದು ಕ್ಯಾಪ್ಷನ್​ ನೀಡುವ ಮೂಲಕ ಐಎಎಸ್​ ಅಧಿಕಾರಿ ಅವನೀಶ್​ ಶರಣ್​ ಯೋಧರು ವಾಲಿಬಾಲ್​ ಆಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.  ವಿಡಿಯೋದಲ್ಲಿ ಯೋಧರು ಎರಡು ತಂಡಗಳಾಗಿ ಹಿಮದ ರಾಶಿಯ ಮಧ್ಯೆ ವಾಲಿಬಾಲ್​ ಆಡುವುದನ್ನು ಕಾಣಬಹುದು. ಸದ್ಯ ಟ್ವಿಟರ್​ನಲ್ಲಿ ವಿಡಿಯೋ ಸಖತ್​ ವೈರಲ್​ ಆಗಿದೆ.  ನೆಟ್ಟಿಗರು ಯೋಧರ ಸಂಭ್ರಮ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಈವರೆಗೆ  ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದ್ದು 13 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದಿದೆ. ವಿಡಿಯೋ ನೋಡಿ ಬಳಕೆದಾರರು ಯೋಧರ ಸಾಹಸಕ್ಕೆ ಸೆಲ್ಯೂಟ್​ ಮಾಡಿದ್ದಾರೆ. ಚಳಿಗಾಲದ ಕಾರಣ ಉತ್ತರ ಭಾರತದಲ್ಲಿ ಹಿಮಪಾತವಾಗುತ್ತಿದೆ. ತಾಪಮಾನ ಮೈನಸ್​ ಗೆ ಇಳಿದಿದೆ ಹೀಗಿದ್ದರೂ ಯೋಧರು ದೇಶವನ್ನು ಕಾಯುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಹಿಮಪಾತದ ನಡುವೆಯೂ ಯೋಧರು ಎದೆಗುಂದದೆ ಹಿಮದ ರಾಶಿಯ ನಡುವೆ ನಿಂತ ವಿಡಿಯೋ ವೈರಲ್ ಅಗಿತ್ತು.

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ