AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮದ ರಾಶಿಯ ನಡುವೆ ವಾಲಿಬಾಲ್​ ಆಡಿದ ಭಾರತೀಯ ಯೋಧರು: ವಿಡಿಯೋ ವೈರಲ್​

ಐಎಎಸ್​ ಅಧಿಕಾರಿ ಅವನೀಶ್​ ಶರಣ್​ ಯೋಧರು ವಾಲಿಬಾಲ್​ ಆಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.  ವಿಡಿಯೋದಲ್ಲಿ ಯೋಧರು ಎರಡು ತಂಡಗಳಾಗಿ ಹಿಮದ ರಾಶಿಯ ಮಧ್ಯೆ ವಾಲಿಬಾಲ್​ ಆಡವುದನ್ನು ಕಾಣಬಹುದು. 

ಹಿಮದ ರಾಶಿಯ ನಡುವೆ ವಾಲಿಬಾಲ್​ ಆಡಿದ ಭಾರತೀಯ ಯೋಧರು: ವಿಡಿಯೋ ವೈರಲ್​
ವಾಲಿಬಾಲ್​ ಆಡುತ್ತಿರುವ ಯೋಧರು
TV9 Web
| Edited By: |

Updated on: Jan 14, 2022 | 10:48 AM

Share

ದೇಶದ ಜನತೆ ಯಾವುದೇ ಭಯೋತ್ಪಾದಕರ ಭಯವಿಲ್ಲದೆ  ನೆಮ್ಮದಿಯಿಂದ ನಿದ್ದೆ ಮಾಡುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಸೈನಿಕರು. ದೇಶ ಕಾಯವ ಯೋಧರು ಹೆತ್ತವರು, ಮಡದಿ ಮಕ್ಕಳಿಂದ ದೂರವುಳಿದು ದೇಶವನ್ನು ಕಾಯಲು ತೆರಳುತ್ತಾರೆ. ಮಳೆ. ಮೈ ಕೊರೆಯುವ ಚಳಿ, ಬಿಸಿಲೆನ್ನದೆ ಮನೆಯವರೊಂದಿಗಿನ ಹಬ್ಬದ ಖುಷಿ ಇಲ್ಲದೆ ದೇಶಕ್ಕಾಗಿ ಜೀವನ ಮುಡಿಪಿಡುವ ಅವರ ಧೈರ್ಯ, ಸಾಹಸ ಪದಗಳಿಗೆ ನಿಲುಕದ್ದು. ತಮ್ಮ ಜತೆ ಇರುವವರನ್ನೇ ಕುಟುಂಬ ಎಂದು ತಿಳಿದು ಇದ್ದಲ್ಲೇ ಸಂಭ್ರಮಿಸಿ ಖುಷಿ ಪಡುವ ಸೈನಿಕರ ಮನಸ್ಥಿತಿಯನ್ನು ನಿಜಕ್ಕೂ ಮೆಚ್ಚಲೇಬೇಕು. ಇದೀಗ ಭಾರತೀಯ ಯೋಧರು ಮೈ ಕೊರೆಯುವ ಚಳಿಯಲ್ಲಿ ಹಿಮದ ಮಧ್ಯೆ ವಾಲಿಬಾಲ್​ ಆಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬೆಸ್ಟ್​ ವಿಂಟರ್​ ಗೇಮ್ಸ್​ ಎಂದು ಕ್ಯಾಪ್ಷನ್​ ನೀಡುವ ಮೂಲಕ ಐಎಎಸ್​ ಅಧಿಕಾರಿ ಅವನೀಶ್​ ಶರಣ್​ ಯೋಧರು ವಾಲಿಬಾಲ್​ ಆಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.  ವಿಡಿಯೋದಲ್ಲಿ ಯೋಧರು ಎರಡು ತಂಡಗಳಾಗಿ ಹಿಮದ ರಾಶಿಯ ಮಧ್ಯೆ ವಾಲಿಬಾಲ್​ ಆಡುವುದನ್ನು ಕಾಣಬಹುದು. ಸದ್ಯ ಟ್ವಿಟರ್​ನಲ್ಲಿ ವಿಡಿಯೋ ಸಖತ್​ ವೈರಲ್​ ಆಗಿದೆ.  ನೆಟ್ಟಿಗರು ಯೋಧರ ಸಂಭ್ರಮ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಈವರೆಗೆ  ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದ್ದು 13 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದಿದೆ. ವಿಡಿಯೋ ನೋಡಿ ಬಳಕೆದಾರರು ಯೋಧರ ಸಾಹಸಕ್ಕೆ ಸೆಲ್ಯೂಟ್​ ಮಾಡಿದ್ದಾರೆ. ಚಳಿಗಾಲದ ಕಾರಣ ಉತ್ತರ ಭಾರತದಲ್ಲಿ ಹಿಮಪಾತವಾಗುತ್ತಿದೆ. ತಾಪಮಾನ ಮೈನಸ್​ ಗೆ ಇಳಿದಿದೆ ಹೀಗಿದ್ದರೂ ಯೋಧರು ದೇಶವನ್ನು ಕಾಯುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಹಿಮಪಾತದ ನಡುವೆಯೂ ಯೋಧರು ಎದೆಗುಂದದೆ ಹಿಮದ ರಾಶಿಯ ನಡುವೆ ನಿಂತ ವಿಡಿಯೋ ವೈರಲ್ ಅಗಿತ್ತು.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು