AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮದ ರಾಶಿಯ ನಡುವೆ ವಾಲಿಬಾಲ್​ ಆಡಿದ ಭಾರತೀಯ ಯೋಧರು: ವಿಡಿಯೋ ವೈರಲ್​

ಐಎಎಸ್​ ಅಧಿಕಾರಿ ಅವನೀಶ್​ ಶರಣ್​ ಯೋಧರು ವಾಲಿಬಾಲ್​ ಆಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.  ವಿಡಿಯೋದಲ್ಲಿ ಯೋಧರು ಎರಡು ತಂಡಗಳಾಗಿ ಹಿಮದ ರಾಶಿಯ ಮಧ್ಯೆ ವಾಲಿಬಾಲ್​ ಆಡವುದನ್ನು ಕಾಣಬಹುದು. 

ಹಿಮದ ರಾಶಿಯ ನಡುವೆ ವಾಲಿಬಾಲ್​ ಆಡಿದ ಭಾರತೀಯ ಯೋಧರು: ವಿಡಿಯೋ ವೈರಲ್​
ವಾಲಿಬಾಲ್​ ಆಡುತ್ತಿರುವ ಯೋಧರು
TV9 Web
| Edited By: |

Updated on: Jan 14, 2022 | 10:48 AM

Share

ದೇಶದ ಜನತೆ ಯಾವುದೇ ಭಯೋತ್ಪಾದಕರ ಭಯವಿಲ್ಲದೆ  ನೆಮ್ಮದಿಯಿಂದ ನಿದ್ದೆ ಮಾಡುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಸೈನಿಕರು. ದೇಶ ಕಾಯವ ಯೋಧರು ಹೆತ್ತವರು, ಮಡದಿ ಮಕ್ಕಳಿಂದ ದೂರವುಳಿದು ದೇಶವನ್ನು ಕಾಯಲು ತೆರಳುತ್ತಾರೆ. ಮಳೆ. ಮೈ ಕೊರೆಯುವ ಚಳಿ, ಬಿಸಿಲೆನ್ನದೆ ಮನೆಯವರೊಂದಿಗಿನ ಹಬ್ಬದ ಖುಷಿ ಇಲ್ಲದೆ ದೇಶಕ್ಕಾಗಿ ಜೀವನ ಮುಡಿಪಿಡುವ ಅವರ ಧೈರ್ಯ, ಸಾಹಸ ಪದಗಳಿಗೆ ನಿಲುಕದ್ದು. ತಮ್ಮ ಜತೆ ಇರುವವರನ್ನೇ ಕುಟುಂಬ ಎಂದು ತಿಳಿದು ಇದ್ದಲ್ಲೇ ಸಂಭ್ರಮಿಸಿ ಖುಷಿ ಪಡುವ ಸೈನಿಕರ ಮನಸ್ಥಿತಿಯನ್ನು ನಿಜಕ್ಕೂ ಮೆಚ್ಚಲೇಬೇಕು. ಇದೀಗ ಭಾರತೀಯ ಯೋಧರು ಮೈ ಕೊರೆಯುವ ಚಳಿಯಲ್ಲಿ ಹಿಮದ ಮಧ್ಯೆ ವಾಲಿಬಾಲ್​ ಆಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬೆಸ್ಟ್​ ವಿಂಟರ್​ ಗೇಮ್ಸ್​ ಎಂದು ಕ್ಯಾಪ್ಷನ್​ ನೀಡುವ ಮೂಲಕ ಐಎಎಸ್​ ಅಧಿಕಾರಿ ಅವನೀಶ್​ ಶರಣ್​ ಯೋಧರು ವಾಲಿಬಾಲ್​ ಆಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.  ವಿಡಿಯೋದಲ್ಲಿ ಯೋಧರು ಎರಡು ತಂಡಗಳಾಗಿ ಹಿಮದ ರಾಶಿಯ ಮಧ್ಯೆ ವಾಲಿಬಾಲ್​ ಆಡುವುದನ್ನು ಕಾಣಬಹುದು. ಸದ್ಯ ಟ್ವಿಟರ್​ನಲ್ಲಿ ವಿಡಿಯೋ ಸಖತ್​ ವೈರಲ್​ ಆಗಿದೆ.  ನೆಟ್ಟಿಗರು ಯೋಧರ ಸಂಭ್ರಮ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಈವರೆಗೆ  ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದ್ದು 13 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದಿದೆ. ವಿಡಿಯೋ ನೋಡಿ ಬಳಕೆದಾರರು ಯೋಧರ ಸಾಹಸಕ್ಕೆ ಸೆಲ್ಯೂಟ್​ ಮಾಡಿದ್ದಾರೆ. ಚಳಿಗಾಲದ ಕಾರಣ ಉತ್ತರ ಭಾರತದಲ್ಲಿ ಹಿಮಪಾತವಾಗುತ್ತಿದೆ. ತಾಪಮಾನ ಮೈನಸ್​ ಗೆ ಇಳಿದಿದೆ ಹೀಗಿದ್ದರೂ ಯೋಧರು ದೇಶವನ್ನು ಕಾಯುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಹಿಮಪಾತದ ನಡುವೆಯೂ ಯೋಧರು ಎದೆಗುಂದದೆ ಹಿಮದ ರಾಶಿಯ ನಡುವೆ ನಿಂತ ವಿಡಿಯೋ ವೈರಲ್ ಅಗಿತ್ತು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ