AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ನಿಮಿಷ, ನನ್ನ ಮುದ್ದುನಾಯಿಗೆ ಊಟ ಮಾಡಿಸಬೇಕು; ಮೇಕಪ್​ ಮಧ್ಯೆ ಬ್ರೇಕ್​ ತೆಗೆದುಕೊಂಡ ವಧು

Indian Bride : ಸಾಕಿದ ನಾಯಿಗಳು ಮಕ್ಕಳಿಗಿಂತ ಹೆಚ್ಚು ಎನ್ನುವುದಕ್ಕೆ ಉದಾಹರಣೆ ಈ ವಿಡಿಯೋ. ತನ್ನ ನಾಯಿಗೆ ಊಟ ಮಾಡಿಸಬೇಕು ಎನ್ನುವ ಕಾರಣಕ್ಕೆ ಈ ವಧು ಮೇಕಪ್​ನಿಂದ ಬ್ರೇಕ್​ ತೆಗೆದುಕೊಳ್ಳುತ್ತಾಳೆ.

ಒಂದೇ ನಿಮಿಷ, ನನ್ನ ಮುದ್ದುನಾಯಿಗೆ ಊಟ ಮಾಡಿಸಬೇಕು; ಮೇಕಪ್​ ಮಧ್ಯೆ ಬ್ರೇಕ್​ ತೆಗೆದುಕೊಂಡ ವಧು
ಮೇಕಪ್ ಅರ್ಧಕ್ಕೆ ಬಿಟ್ಟು ತನ್ನ ನಾಯಿಗೆ ಉಣ್ಣಿಸುತ್ತಿರುವ ವಧು
TV9 Web
| Edited By: ಶ್ರೀದೇವಿ ಕಳಸದ|

Updated on: Dec 08, 2022 | 3:18 PM

Share

Viral Video : ವಧು ತನ್ನ ಮದುವೆಯ ತಯಾರಿಯಲ್ಲಿ ಮುಳುಗಿದರೆ ಮುಗಿಯಿತು. ಕೈಗೊಬ್ಬರು ಕಾಲಿಗೊಬ್ಬರು ತಲೆಗೊಬ್ಬರು, ಬೆರಳಿಗೊಬ್ಬರು… ಎಷ್ಟು ಜನರಾದರೂ ಸಾಲುವುದೇ ಇಲ್ಲ ಅವಳ ಸಹಾಯಕ್ಕೆ. ರಾಜಕುಮಾರಿಯಂತೆ ಮಿನುಗುತ್ತಿರುತ್ತಾಳೆ. ಆದರೆ ಈ ವಿಡಿಯೋದಲ್ಲಿ ನೋಡಿ. ಈ ವಧು ತನ್ನ ಮದುವೆಗೆಂದು ಮೇಕಪ್ ಮಾಡಿಸಿಕೊಳ್ಳುತ್ತಿದ್ದಾಗ ತನ್ನ ಮುದ್ದುನಾಯಿಗೆ ಊಟ ಮಾಡಿಸಬೇಕಿರುವುದು ನೆನಪಾಗಿದೆ. ಮೇಕಪ್​ ಅರ್ಧಕ್ಕೇ ಬಿಟ್ಟು, ನಾಯಿಗೆ ಊಟ ಮಾಡಿಸಲು ಬಂದಿದ್ದಾಳೆ.

View this post on Instagram

A post shared by Simar K (@simark_makeup)

ಮಗುವಿನಂತೆ ನೋಡಿಕೊಳ್ಳುತ್ತಿದ್ದರೆ ಮಾತ್ರ ಇಂಥ ನಾಯಿಗಳನ್ನು ಸಾಕಬೇಕು ಎನ್ನುವುದು ಅಕ್ಷರಶಃ ನಿಜ. ಇಲ್ಲವಾದಲ್ಲಿ ಜೋಲುಮುಖ ಹಾಕಿಕೊಂಡು ಕುಳಿತುಬಿಡುತ್ತವೆ ಅಥವಾ ಕುಣಿದು ಕುಪ್ಪಳಿಸಿ ನಿಮ್ಮ ಜೀವ ಹಿಂಡಿಬಿಡುತ್ತವೆ. ಒಟ್ಟು ಗರ್ಭಗುಡಿಯ ಮುಂದೆ ಬಸವಣ್ಣ ಕುಳಿತ ಹಾಗೆ ನೀವು ಸದಾ ಅವುಗಳ ದೇಖರೇಖಿ ಮಾಡುತ್ತಲೇ ಇರಬೇಕು.

ಹಿಂದೆಮುಂದೆ ನೋಡದೆ ಸೀದಾ ನೆಲದ ಮೇಲೆ ಕುಳಿತು ಮಗುವಿಗೆ ಉಣ್ಣಿಸಿದ ಹಾಗೆ ಉಣಿಸುತ್ತಿದ್ದಾಳೆ. 1 ಲಕ್ಷಕ್ಕೂ ಹೆಚ್ಚು ಜನ ಈ ವಿಡಿಯೋ ನೋಡಿದ್ದಾರೆ. 5,000ಕ್ಕೂ ಹೆಚ್ಚು ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಗಂಡನ ಮನೆಗೆ ಈ ಮುದ್ದುನಾಯಿಯನ್ನೂ ಕರೆದುಕೊಂಡು ಹೋಗುತ್ತಾಳೆಯೇ? ಎಂಬ ಪ್ರಶ್ನೆ ಏಳದೇ ಇರದು ಅಲ್ಲವೆ?

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ