AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಮೆರಿಕಕ್ಕೆ ಕೆಲಸಕ್ಕೆ ಮಾತ್ರ ಬರ್ಬೇಡಿ; ಯುವಜನತೆಗೆ ಕಿವಿ ಮಾತು ಹೇಳಿದ ಭಾರತೀಯ ದಂಪತಿ

ಓದು ಮುಗಿಯುತ್ತಿದ್ದಂತೆ ಕೆಲಸಕ್ಕಾಗಿ ವಿದೇಶದತ್ತ ಮುಖ ಮಾಡುತ್ತಾರೆ. ಆದರೆ ಅಮೆರಿಕದಲ್ಲಿ ನೆಲೆಸಿರುವ ದಂಪತಿ, ಸಾವಿರಾರು ಕನಸು ಕಟ್ಟಿಕೊಂಡು ವಿದೇಶಕ್ಕೆ ಬರುವವರಿಗೆ ಸಲಹೆ ನೀಡಿದ್ದಾರೆ. ಅಮೆರಿಕಕ್ಕೆ ಕೇವಲ ಉದ್ಯೋಗಕ್ಕಾಗಿ ಬರಬೇಡಿ, ಭಾರತದಲ್ಲಿಯೇ ನೆಲೆಸಿ ಎಂದು ಹೇಳಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಅಮೆರಿಕಕ್ಕೆ ಕೆಲಸಕ್ಕೆ ಮಾತ್ರ ಬರ್ಬೇಡಿ; ಯುವಜನತೆಗೆ ಕಿವಿ ಮಾತು ಹೇಳಿದ ಭಾರತೀಯ ದಂಪತಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 21, 2026 | 12:55 PM

Share

ಕೆಲವರಿಗೆ ವಿದೇಶ (foreign) ಅಂದ್ರೆ ವ್ಯಾಮೋಹ. ಹೀಗಾಗಿ ಓದು ಮುಗಿಯುತ್ತಿದ್ದಂತೆ ಸಾವಿರಾರು ಕನಸು ಹೊತ್ತು ವಿದೇಶಕ್ಕೆ ಹಾರುತ್ತಾರೆ. ವಿದೇಶದಲ್ಲಿ ಜಾಬ್ ಸಿಕ್ಕರೆ ಲೈಫ್ ಸೆಟ್ಲ್ ಆದಂತೆ ಎನ್ನುವುದು ಹೆಚ್ಚಿನವರ ಭಾವನೆ. ಆದರೆ ಅಮೆರಿಕದಲ್ಲಿ ನೆಲೆಸಿರುವ ದಂಪತಿ, ವಿದೇಶಿ ಜೀವನ ಅಷ್ಟು ಸುಲಭವಲ್ಲ ಎಂದಿದ್ದಾರೆ. ಇಲ್ಲಿಗೆ ಬರುವ ಯುವಜನತೆಗೆ ಇಂದು ಭಾರತದಲ್ಲಿ ಬೇಕಾದಷ್ಟು ಪ್ರತಿಷ್ಠಿತ ಕಂಪನಿಗಳಿವೆ, ಅಲ್ಲೇ ಉದ್ಯೋಗ ಗಿಟ್ಟಿಸಿಕೊಳ್ಳಿ ಎಂದು ಕಿವಿ ಮಾತು ಹೇಳಿದ್ದಾರೆ. ಈ ದಂಪತಿಯ ವಿಡಿಯೋ ಸದ್ಯ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್ ಕನೆಕ್ಟ್ (darshaanaconnects) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಅಮೆರಿಕದಲ್ಲಿ ನೆಲೆಸಿರುವ ದಂಪತಿ, ವಿದೇಶಕ್ಕೆ ಕೆಲಸಕ್ಕೆಂದು ಬರುವವರಿಗೆ ಸಲಹೆ ನೀಡಿದ್ದಾರೆ. ನಾವು ಇಲ್ಲಿಗೆ ಬಂದಿದ್ದೇವೆ.ಆದರೆ ಆ ಸಮಯದಲ್ಲಿ ಭಾರತದಲ್ಲಿ ಉತ್ತಮ ಉದ್ಯೋಗವನ್ನು ಪಡೆಯುವುದು ತುಂಬಾ ಕಷ್ಟವಾಗಿತ್ತು. ಉತ್ತಮ ಜೀವನ ಲೀಡ್ ಮಾಡೋದು ಕಷ್ಟಕರವಾಗಿತ್ತು. ಆದರೆ ಇಂದು ಭಾರತ ಅಭಿವೃದ್ಧಿ ಹೊಂದಿದೆ, ಅಲ್ಲಿ ಸಾಕಷ್ಟು ಎಂಎನ್‌ಸಿ ಕಂಪನಿಗಳಿವೆ. ಹೀಗಾಗಿ ಅಲ್ಲಿ ಉದ್ಯೋಗ ಪಡೋದು ಕಷ್ಟವಾಗಲ್ಲ ಎಂದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Darshana (@darshanaconnects)

ಮನೆ, ಫ್ಯಾಮಿಲಿ ಹಾಗೂ ಸ್ನೇಹಿತರನ್ನು ಬಿಟ್ಟು ವಿದೇಶದಲ್ಲಿ ಬದುಕು ಕಟ್ಟಿಕೊಳ್ಳುವುದು ಹೇಳಿದ್ದಷ್ಟು ಸುಲಭವಲ್ಲ. ಇಲ್ಲಿ ಅದೆಷ್ಟೋ ವರ್ಷಗಳು ಕಳೆದ್ರೂ ನಮ್ಮ ಊರು, ನಮ್ಮವರು ಎನ್ನುವ ಭಾವ ಬರಲ್ಲ. ಆದರೆ ಪರ ದೇಶ ಅಥವಾ ಊರಿನಲ್ಲಿ ಉದ್ಯೋಗ ಹಾಗೂ ಹಣವು ಒಂದು ಭಾಗವಷ್ಟೇ. ಆದರೆ ಇಲ್ಲಿನ ಜೀವನಶೈಲಿಗೆ ಹೊಂದಿಕೊಳ್ಳಲು ಸಾಕಷ್ಟು ಪ್ರಯತ್ನಗಳು ಬೇಕು ಎಂದು ಹೇಳಿದ್ದಾರೆ.

ಭಾರತೀಯರಿಗೆ ಗ್ರೀನ್ ಕಾರ್ಡ್‌ ಅಷ್ಟು ಸುಲಭವಾಗಿ ಸಿಗಲ್ಲ, ತುಂಬಾನೇ ಕಾಯಬೇಕು. ಆದರೆ ಚೀನಾದ ವಿದ್ಯಾರ್ಥಿಗಳು ಆಗಲ್ಲ, ವಿದೇಶಕ್ಕೆ ಬಂದು ಶಿಕ್ಷಣ ಪಡೆದು ಅವರ ದೇಶಕ್ಕೆ ಹೋಗಿ ಕೆಲಸ ಮಾಡ್ತಾರೆ. ವಿದೇಶದಲ್ಲಿ ಓದಿ ನಮ್ಮ ದೇಶದಲ್ಲೇ ದುಡಿದು ತಿನ್ನುವ ಎನ್ನುವ ಮನಸ್ಥಿತಿ ಭಾರತೀಯರಿಗೆ ಇರುವುದು ಕಡಿಮೆಯೇ ಎಂದು ವಿವರಿಸಿದ್ದಾರೆ. ವಿದೇಶಕ್ಕೆ ಹೋಗಿ ಬದುಕು ಕಟ್ಟಿಕೊಂಡ ಮೇಲೆ ಮತ್ತೆ ತಾಯ್ನಾಡಿಗೆ ಮರಳುವುದು ಸುಲಭವಲ್ಲ. ಈಗ ನಾವು ವಿದೇಶದಲ್ಲೇ ನೆಲೆಸಿದ್ದೇವೆ. ನಾನು ಪ್ರಸ್ತುತ ಭಾರತದಲ್ಲಿದ್ದರೆ ಖಂಡಿತ ವಿದೇಶಕ್ಕೆ ಹೋಗಿ ಉದ್ಯೋಗ ಮಾಡುವ ನಿರ್ಧಾರ ಮಾಡುತ್ತಿರಲಿಲ್ಲ ಎಂದು ತಮ್ಮ ಅಭಿಪ್ರಾಯ ಹೇಳಿದ್ದಾರೆ.

ಇದನ್ನೂ ಓದಿ: ಭಾರತೀಯ ಸ್ನೇಹಿತೆ ತಂದು ಕೊಟ್ಟ ಡ್ರೈ ಫ್ರೂಟ್ಸ್ ಲಡ್ಡು ಸವಿದ ರಷ್ಯನ್ ಯುವತಿ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಿಮ್ಮ ಮಾತನ್ನು ಒಪ್ಪುತ್ತೇನೆ.. ಆದರೆ ಸೆಟ್ಲ್ ಅನ್ನೋ ಪದಕ್ಕೆ ವಿದೇಶವನ್ನು ಆಯ್ಕೆ ಮಾಡುವವರೇ ಹೆಚ್ಚು ಎಂದು ಹೇಳಿದ್ದಾರೆ. ಇನ್ನೊಬ್ಬರು, ಅಲ್ಪ ಸಂಬಳವಾದ್ರೂ ಕುಟುಂಬದೊಂದಿಗೆ ಉಳಿಯುವ ಖುಷಿಯೇ ಬೇರೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಎಲ್ಲೇ ಹೋದ್ರು ಮತ್ತೆ ತಮ್ಮ ಹುಟ್ಟೂರಿಗೆ ಮರಳಬೇಕು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ