Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವಿದ್ಯಾರ್ಥಿಗಳ ಉತ್ತರ ಪತ್ರಿಕೆಯಲ್ಲಿ ನೋಟುಗಳು; ಇದು ಹಳೆಯ ವರಸೆ ಎಂದ ನೆಟ್ಟಿಗರು

Indian Education System : ಲಂಚಕೊಟ್ಟು ಅಂಕ ಪಡೆದರೂ ನಾಳೆ ನೌಕರಿಗಾಗಿ ಸಂದರ್ಶನದಲ್ಲಿ ಭಾಗಿಯಾದಾಗ ಇಂಥ ವಿದ್ಯಾರ್ಥಿಗಳು ಏನು ಮಾಡುತ್ತಾರೆ, ಜ್ಞಾನ ಮತ್ತು ಶ್ರಮ ಇಲ್ಲದೆ ಬದುಕು ಕಟ್ಟಿಕೊಳ್ಳಲು ಸಾಧ್ಯವೆ? ಒಟ್ಟಾರೆಯಾಗಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ನಮ್ಮ ಭಾರತಿಯ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದೆ ಎಂದೂ ಬೇಸರ ವ್ಯಕ್ತಪಡಿಸುತ್ತಿದ್ದಾರೆ ನೆಟ್ಟಿಗರು.

Viral: ವಿದ್ಯಾರ್ಥಿಗಳ ಉತ್ತರ ಪತ್ರಿಕೆಯಲ್ಲಿ ನೋಟುಗಳು; ಇದು ಹಳೆಯ ವರಸೆ ಎಂದ ನೆಟ್ಟಿಗರು
ಉತ್ತರ ಪತ್ರಿಕೆಗಳಲ್ಲಿ ವಿದ್ಯಾರ್ಥಿಗಳು ಅಡಗಿಸಿಟ್ಟ ನೋಟುಗಳು
Follow us
ಶ್ರೀದೇವಿ ಕಳಸದ
|

Updated on:Aug 22, 2023 | 11:40 AM

Answer Sheet: ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳಲ್ಲಿ ನೋಟುಗಳನ್ನಿಟ್ಟು ಮೌಲ್ಯಮಾಪಕರಿಗೆ ಲಂಚ ನೀಡಲು ಪ್ರಯತ್ನ ನಡೆಸುವುದು ಇದೇ ಮೊದಲೇನಲ್ಲ. ಉತ್ತಮ ಅಂಕ ಗಳಿಸಲು ವಿದ್ಯಾರ್ಥಿಗಳು ಇಂಥ ಅಸಹ್ಯಕರ ಪ್ರಯತ್ನಗಳನ್ನು ಮಾಡುವುದು ಭಾರತದಲ್ಲಿ ಸಾಮಾನ್ಯವೆನ್ನಿಸುವ ಮಟ್ಟಿಗಿದೆ. ಇತ್ತಿಚೆಗೆ ಭಾರತೀಯ ಪೊಲೀಸ್​ ಸೇವಾ ಅಧಿಕಾರಿ ಅರುಣ್ ಬೋತ್ರಾ ರೂ. 100, ರೂ. 200, ರೂ. 500 ನೋಟುಗಳಿರುವ ಫೋಟೋ ಅನ್ನು X (Twitter) ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : Viral Video: ಬಾಹ್ಯಾಕಾಶದಲ್ಲಿ ಹನಿ ಸ್ಯಾಂಡ್​ವಿಚ್ ತಯಾರಿಸಿ ಸವಿದ ಗಗನಯಾತ್ರಿ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

‘ಇದು ಶಿಕ್ಷಕರೊಬ್ಬರು ಕಳಿಸಿರುವ ಫೋಟೋ. ವಿದ್ಯಾರ್ಥಿಗಳು ಈ ನೋಟುಗಳನ್ನು ಉತ್ತರಪತ್ರಿಕೆಯೊಳಗೆ ಇಟ್ಟು,  ಉತ್ತೀರ್ಣಗೊಳ್ಳಲು ಬೇಕಾದ ಅಂಕಗಳನ್ನು ದಯಪಾಲಿಸಬೇಕೆಂದು ಕೇಳಿಕೊಂಡಿದ್ದಾರೆ. ಈ ಚಿತ್ರವು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ಬಗ್ಗೆ ಸಾಕಷ್ಟು ಸಂಗತಿಗಳನ್ನು ತಿಳಿಯಪಡಿಸುತ್ತಿದೆ’ ಎಂಬ ಒಕ್ಕಣೆಯನ್ನು ಬೋತ್ರಾ ಬರೆದಿದ್ದಾರೆ.

ಉತ್ತರ ಪತ್ರಿಕೆಯಲ್ಲಿ ಇಟ್ಟ ನೋಟುಗಳು ಇಲ್ಲಿವೆ

ನೆಟ್ಟಿಗರು ಈ ಪೋಸ್ಟ್​ನಡಿ ತಮ್ಮ ಅನುಭವಗಳನ್ನು ಹಂಚಿಕೊಂಡು ಚರ್ಚಿಸಿದ್ದಾರೆ. ಪತ್ರಿಕೆ ಮೌಲ್ಯಮಾಪನಕ್ಕೆಂದು ಹೋದಾಗ ಸುಮಾರು ಮೂರು ಸಲ ನಾನು ಇಂಥದನ್ನು ಎದುರಿಸಿದ್ದೇನೆ ಎಂದಿದ್ದಾರೆ ಒಬ್ಬರು. ಹಣವಷ್ಟೇ ಅಲ್ಲ, ವಿದ್ಯಾರ್ಥಿಗಳು ತಮ್ಮ ಪರಿಸ್ಥಿತಿಯ ಬಗ್ಗೆ ಕಥೆಗಳನ್ನೂ ಬರೆದಿರುತ್ತಾರೆ ಎಂದಿದ್ದಾರೆ ಇನ್ನೊಬ್ಬರು. ಹೀಗೆಲ್ಲ ಮಾಡಿದ ವಿದ್ಯಾರ್ಥಿಗಳು ಸಾಮಾನ್ಯವಾಗಿ ಫೇಲ್ ಆಗುತ್ತಾರೆ ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : Viral Video: ಬಾಂಗ್ಲಾಭಕ್ಷ್ಯ; ಅವಲಕ್ಕಿಯ ಕೊಲೆಯಾಗಿದೆ ಇಲ್ಲಿ! ಆಕ್ರೋಶಗೊಂಡ ನೆಟ್ಟಿಗರು

ಇದು ಹತ್ತಿಪ್ಪತ್ತು ವರ್ಷಗಳಿಂದ ನಡೆಯುತ್ತಲೇ ಇದೆ. ಕೆಲವು ವಿದ್ಯಾರ್ಥಿಗಳು ಇದಕ್ಕಾಗಿಯೇ ಹಣವನ್ನು ಕೂಡಿಡುತ್ತಾರೆ. ನಮ್ಮ ಕಾಲದಲ್ಲಿ ಕೆಲವರು ಉತ್ತರ ಪತ್ರಿಕೆಗಳಲ್ಲಿ ತಮ್ಮ ಫೋನ್​ ನಂಬರುಗಳನ್ನು ಬರೆಯುತ್ತಿದ್ದರು. ಅಕಸ್ಮಾತ್​ ಮೌಲ್ಯಮಾಪಕರು ಆ ನಂಬರಿಗೆ ಫೋನ್ ಮಾಡಿದರೆ ಆಯಾ ವಿದ್ಯಾರ್ಥಿಗಳು ಅವರಿಗೆ ಹಣ ತಲುಪಿಸುತ್ತಿದ್ದರು ಎಂದಿದ್ದಾರೆ ಒಬ್ಬರು.

ಟೇಪ್ ಅಂಟಿಸಿದ ನೋಟು!

ಆಸಕ್ತಿಯಿಲ್ಲದೇ ಗಳಿಸಿದ ಅಂಕಗಳಿಂದ ವಿದ್ಯಾರ್ಥಿಗಳು ತಮ್ಮ ಬದುಕನ್ನು ಹೇಗೆ ಕಟ್ಟಿಕೊಳ್ಳುತ್ತಾರೆ? ಜ್ಞಾನವಿಲ್ಲದೇ ಉದ್ಯೋಗದ ಸಂದರ್ಶನದಲ್ಲಿ ಹೇಗೆ ಭಾಗಿಯಾಗುತ್ತಾರೆ? ಎಂದು ಕೇಳಿದ್ದಾರೆ ಒಬ್ಬರು. ಭಾರತದಲ್ಲಿ ಹಣದಿಂದ ಏನನ್ನೂ ಪಡೆಯಬಹುದು ಎನ್ನುವುದು ವಿದ್ಯಾರ್ಥಿಗಳಿಗೆ ತಿಳಿದಿದೆ ಎಂದಿದ್ದಾರೆ ಇನ್ನೊಬ್ಬರು.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​​ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 11:39 am, Tue, 22 August 23

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ