AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2.9 ಕೋಟಿ ರೂ ಸಂಬಳದ ಉದ್ಯೋಗ ತೊರೆದು ಅಮೆರಿಕದಿಂದ ಭಾರತಕ್ಕೆ ಬರಲು ನಿರ್ಧರಿಸಿದ ಅನಿವಾಸಿ ಭಾರತೀಯ

ಅಮೆರಿಕದಲ್ಲಿ ನೆಲೆಸಿರುವ ವ್ಯಕ್ತಿಯೊಬ್ಬರು ಹೆಚ್ಚಿನ ಸಂಬಳ ಮತ್ತು ಉತ್ತಮ ಮನೆ ಇದ್ದರೂ, ಕುಟುಂಬ ನಿರ್ವಹಣೆಗಾಗಿ ಭಾರತಕ್ಕೆ ಬರಲು ನಿರ್ಧರಿಸಿದ್ದಾರೆ. ತಮ್ಮ ಈ ನಿರ್ಧಾರ ಹಿಂದಿನ ಕಾರಣ ಬಹಿರಂಗಪಡಿಸಿದ್ದಾರೆ. ಅವರ ರೆಡ್ಡಿಟ್ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ

2.9 ಕೋಟಿ ರೂ ಸಂಬಳದ ಉದ್ಯೋಗ ತೊರೆದು ಅಮೆರಿಕದಿಂದ ಭಾರತಕ್ಕೆ ಬರಲು ನಿರ್ಧರಿಸಿದ ಅನಿವಾಸಿ ಭಾರತೀಯ
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on: Feb 20, 2026 | 12:13 PM

Share

ಓದು ಮುಗಿಯುತ್ತಿದ್ದಂತೆ ವಿದೇಶಕ್ಕೆ (foreign) ಹಾರುವ ಯುವಕ ಯುವತಿಯರು ಅಲ್ಲೇ ಸೆಟಲ್ ಆಗಲು ಬಯಸುತ್ತಾರೆ. ಆದರೆ ಭಾರತದಲ್ಲಿರುವ ಹೆತ್ತವರಿಗೆ ಮಕ್ಕಳ ಜತೆಗೆ ಇರಬೇಕೇಂಬ ಆಸೆ ಇದ್ದರೂ, ಮಕ್ಕಳ ಕನಸಿಗೆ ಅಡ್ಡಿಯಾಗಬಾರದೆನ್ನುವ ಕಾರಣ ಸುಮ್ಮನಾಗುತ್ತಾರೆ. ಆದರೆ ಅಮೆರಿಕದಲ್ಲಿ (America) ನೆಲೆಸಿರುವ ಅನಿವಾಸಿ ಭಾರತೀಯ ವ್ಯಕ್ತಿಯೊಬ್ಬರು, 2.9 ಕೋಟಿ ರೂ ಸಂಬಳ ಇರುವ ಉದ್ಯೋಗವನ್ನು ತೊರೆದು ಭಾರತಕ್ಕೆ ಬರಲು ನಿರ್ಧಾರ ಮಾಡಿದ್ದಾರೆ. ಇದಕ್ಕೆ ಮುಖ್ಯ ಕಾರಣವೇ ಆ ವ್ಯಕ್ತಿಯ ತಂದೆತಾಯಿಯಂತೆ. ಈ ಬಗ್ಗೆ ಪೋಸ್ಟ್ ಮಾಡಿ ನನ್ನ ನಿರ್ಧಾರ ಸರಿ ಇದೆಯೇ ಎಂದು ನೆಟ್ಟಿಗರಲ್ಲಿ ಸಲಹೆ ಕೇಳಿದ್ದಾರೆ.

r/returnToIndia ರೆಡ್ಡಿಟ್‌ನಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಅನಿವಾಸಿ ಭಾರತೀಯರೊಬ್ಬರು, ಅಮೆರಿಕದಲ್ಲಿ ನೆಲೆಸಿದ್ದು, 12 ವರ್ಷಗಳ ನಂತರ ಭಾರತಕ್ಕೆ ಹಿಂತಿರುಗುತ್ತಿದ್ದೇನೆ. ನಾನು ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆಯೇ?” ಎಂಬ ಶೀರ್ಷಿಕೆ ನೀಡಿದ್ದಾರೆ. ಆಂತರಿಕ ಉದ್ಯೋಗ ವರ್ಗಾವಣೆಯ ನಂತರ ಈ ಜೂನ್‌ನಲ್ಲಿ ತಮ್ಮ ಕುಟುಂಬವನ್ನು ನವಿ ಮುಂಬೈಗೆ ಸ್ಥಳಾಂತರಿಸಲು ನಿರ್ಧರಿಸಿದ್ದೇವೆ. ಅಮೆರಿಕದಲ್ಲಿ ತನ್ನ ಒಟ್ಟು ಆದಾಯ 2.9 ಕೋಟಿ ರೂ ಆಗಿದ್ದು, ಅಡಮಾನ ರಹಿತ ಮನೆ ಸೇರಿದಂತೆ ನಿವ್ವಳ ಮೌಲ್ಯ 1 ಮಿಲಿಯನ್ ಮೀರಿದೆ ಎಂದು ಹೇಳಿದ್ದಾರೆ.

ನನಗೆ 6 ರಿಂದ 9 ವರ್ಷ ವಯಸ್ಸಿನ 3 ಮಕ್ಕಳಿದ್ದಾರೆ. ಎಲ್ಲರೂ ಯುಎಸ್ ನಾಗರಿಕರಾಗಿದ್ದಾರೆ. ಭಾರತದಲ್ಲಿ ಈ ಉದ್ಯೋಗವು 1.5 ಕೋಟಿ ಪ್ಯಾಕೇಜ್‌ನೊಂದಿಗೆ ಬರುತ್ತದೆ. ನನ್ನ ಹೆತ್ತವರು ಹೈದರಾಬಾದ್‌ನಲ್ಲಿ ನೆಲೆಸಿದ್ದಾರೆ. ನನ್ನ ಮಕ್ಕಳು ಅಜ್ಜ-ಅಜ್ಜಿ ಮತ್ತು ಸೋದರಸಂಬಂಧಿಗಳ ಜತೆಯಲ್ಲಿ ಬೆಳೆಯಬೇಕೆಂದು ಬಯಸಿದ್ದಾರೆ. ಇಲ್ಲಿನ ಮನೆ ಹಾಗೂ ಅಧಿಕ ಸಂಬಳದ ಉದ್ಯೋಗ ತೊರೆಯುವುದು ಬೃಹತ್ ಬದಲಾವಣೆಯಂತೆ ಭಾಸವಾಗುತ್ತದೆ ಎಂದು ಉಲ್ಲೇಖಿಸಿದ್ದಾರೆ. ಅಮೆರಿಕದಲ್ಲಿ ಹುಟ್ಟಿ ಬೆಳೆದ ಮಕ್ಕಳು ಭಾರತದಲ್ಲಿನ ಶಾಲಾ ಶಿಕ್ಷಣಕ್ಕೆ ಹೇಗೆ ಹೊಂದಿಕೊಳ್ಳುತ್ತಾರೆ. ಇದು , ಉನ್ನತೀಕರಣದ ಹೆಜ್ಜೆಯಾಗಿ ಅಥವಾ ಕುಟುಂಬಕ್ಕಾಗಿ ನಾನು ಮಾಡಿದ ತ್ಯಾಗವಾಗಿ ನೋಡಬೇಕೇ ಎಂದು ಕೇಳಿದ್ದಾರೆ.

ಇದನ್ನೂ ಓದಿ: ದುಬೈನಿಂದ ಭಾರತಕ್ಕೆ ಮರಳಿದ ಕೇರಳದ ಮಹಿಳೆ; ಕಾರಣ ಇದೇ ನೋಡಿ

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಸರಿ ಮತ್ತು ತಪ್ಪುಗಳು ಜೀವನದಲ್ಲಿ ನಿಮ್ಮ ಆದ್ಯತೆಗಳನ್ನು ಅವಲಂಬಿಸಿರುತ್ತದೆ. ಭಾರತದಲ್ಲಿ 1.5 ಕೋಟಿ ರೂ ಉತ್ತಮ ಸಂಬಳವಾಗಿದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ಭಾರತದಲ್ಲಿ 1.5 ಕೋಟಿ ರೂ ಸಂಬಳದ ವಾರ್ಷಿಕ ಪ್ಯಾಕೇಜ್ ನೊಂದಿಗೆ ಕೆಲಸ ಸಿಕ್ಕಿರುವುದು ನಿಮ್ಮ ಪುಣ್ಯ. ಅಮೆರಿಕಕ್ಕಿಂತ ಇಲ್ಲಿನ ಜೀವನಶೈಲಿ ಉತ್ತಮವಾಗಿರುತ್ತದೆ ಎಂದು ಧೈರ್ಯ ತುಂಬಿದ್ದಾರೆ. ಮತ್ತೊಬ್ಬರು, ನಿಮ್ಮ ಇಂಡಿಯಾ ಜಾಬ್ ಪ್ಯಾಕೇಜ್ ಚೆನ್ನಾಗಿದೆ. ನೀವು ಕನಿಷ್ಠ 50 ಪ್ರತಿಶತವನ್ನು ಉಳಿಸುತ್ತೀರಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?