AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನಿಗೆ ಅದೃಷ್ಟ ತಂದ ತಾಯಿ ಜನ್ಮ ದಿನಾಂಕ: ಲಾಟರಿಯಲ್ಲಿ 240 ಕೋಟಿ ರೂ ಗೆದ್ದ ಯುವಕ

ತೆಲಂಗಾಣದ ಯುವಕ ಅನಿಲ್ ಕುಮಾರ್ ಅಬುಧಾಬಿಯಲ್ಲಿ 240 ಕೋಟಿ ರೂ. ಲಾಟರಿ ಗೆದ್ದಿದ್ದಾನೆ. ತನ್ನ ತಾಯಿಯ ಜನ್ಮದಿನಾಂಕ 11 ಸಂಖ್ಯೆಯಿಂದ ಲಾಟರಿ ಖರೀದಿಸಿರುವುದರಿಂದ ಇಷ್ಟು ದೊಡ್ಡ ಮಟ್ಟದ ಮೊತ್ತ ಲಭಿಸಿದೆ. ಸರ್ಕಾರಿ ಶಾಲೆಯಲ್ಲಿ ಕಲಿತು, ಸಾಫ್ಟ್‌ವೇರ್ ಇಂಜಿನಿಯರ್ ಆದ ಅನಿಲ್, ಗೆದ್ದ ಹಣದಿಂದ ಬಡವರಿಗೆ ಸಹಾಯ ಮಾಡುವ ಹಾಗೂ ಉತ್ತಮವಾಗಿ ಹೂಡಿಕೆ ಮಾಡುವ ಯೋಜನೆ ಹೊಂದಿದ್ದಾರೆ. ಈ ಸುದ್ದಿ ಇದೀಗ ಭಾರೀ ವೈರಲ್ ಆಗಿದೆ.

ಮಗನಿಗೆ ಅದೃಷ್ಟ ತಂದ ತಾಯಿ ಜನ್ಮ ದಿನಾಂಕ: ಲಾಟರಿಯಲ್ಲಿ 240 ಕೋಟಿ ರೂ ಗೆದ್ದ ಯುವಕ
ವೈರಲ್​​​ ಫೋಸ್ಟ್
ಅಕ್ಷಯ್​ ಪಲ್ಲಮಜಲು​​
|

Updated on: Nov 10, 2025 | 4:15 PM

Share

ಅದೃಷ್ಟ ಹೇಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ, ಅದು ಬಂದಾಗ ತಿರಸ್ಕರಿಸಬಾರದು. ಇಲ್ಲೊಬ್ಬ ಯುವಕನಿಗೆ ತನ್ನ ಅಮ್ಮನ ಜನ್ಮ ಸಂಖ್ಯೆಯಿಂದ ಅದೃಷ್ಟ ಒಲಿದು ಬಂದಿದೆ. ಬಾಲ್ಯದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿ, ಉನ್ನತ ಶಿಕ್ಷಣ ಮುಗಿಸಿ, ಇದೀಗ ಉದ್ಯೋಗಕ್ಕಾಗಿ ವಿದೇಶಕ್ಕೆ ಹೋದ ಯುವಕನಿಗೆ ಲಾಟರಿ ರೂಪದಲ್ಲಿ ಅದೃಷ್ಟ ಒಲಿದು ಬಂದಿದೆ. ಈ ಅದೃಷ್ಟ ಆತನ ತಾಯಿಯ ಜನ್ಮ ದಿನಾಂಕದಿಂದ ಬಂದಿದೆ.  ತಾಯಿಯ ಜನ್ಮ ದಿನಾಂಕ 11, ಆ ಸಂಖ್ಯೆಯಲ್ಲೇ ಲಾಟರಿ ಖರೀದಿಸಿದ್ದಾನೆ. ಈ 11 ಸಂಖ್ಯೆ ಆತನ ಜೀವನನ್ನೇ ಬದಲಾಯಿಸಿದೆ. ಅಬುಧಾಬಿಯ ಲಾಟರಿಯಿಂದ ಬರೋಬ್ಬರಿ 240 ಕೋಟಿ ರೂಪಾಯಿ ಹಣವನ್ನು ಗೆದ್ದಿದ್ದಾನೆ.  ಈ ವಿಚಾರ ತಿಳಿದ ಆತನ ಹಳ್ಳಿಯ ಜನ ಸಂತೋಷ ವ್ಯಕ್ತಪಡಿಸಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಈ ಯುವಕ, ತೆಲಂಗಾಣದ ಖಮ್ಮಂ ಜಿಲ್ಲೆಯ ವೆಮಸೂರ್ ಮಂಡಲದಲ್ಲಿರುವ ಭೀಮವರಂ ಗ್ರಾಮ ಅನಿಲ್ ಕುಮಾರ್ ಎಂದು ಹೇಳಲಾಗಿದೆ.  ಒಂದೂವರೆ ವರ್ಷದಿಂದ ಅಬುಧಾಬಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ, ಅನಿಲ್ ತನ್ನ ಸ್ನೇಹಿತರ ಒತ್ತಾಯಕ್ಕೆ ಲಾಟರಿ ಟಿಕೆಟ್ ಖರೀದಿಸಿದ್ದಾನೆ. ತನ್ನ ತಾಯಿಯ ಜನ್ಮ ದಿನಾಂಕ 11ರ ಸಂಖ್ಯೆಯಲ್ಲಿ ಲಾಟರಿ ಖರೀದಿ ಮಾಡಿರುವುದು ಇನ್ನು ವಿಶೇಷವಾಗಿತ್ತು. ತಮ್ಮ ಮಗನಿಗೆ ಲಾಟರಿಯಲ್ಲಿ 240 ಕೋಟಿ ಹಣ ಬಂದಿದೆ ಎಂಬುದನ್ನು ನಂಬಲು ಸಾಧ್ಯವಾಗಿಲ್ಲ, ನಮ್ಮ ಕಷ್ಟಕ್ಕೆ ದೇವರು ಒಳ್ಳೆಯ ದಾರಿ ತೋರಿಸಿದ್ದಾರೆ ಎಂದು ಯುವಕನ ಪೋಷಕರು ಹೇಳಿದ್ದಾರೆ.

ಇದನ್ನೂ ಓದಿ:  ಒಂದು ಕೋಟಿ ಲಾಟರಿ ಗೆದ್ದವನನ್ನ ಡೋಲು ಬಾರಿಸಿ ಹುಡುಕುತ್ತಿದ್ದಾರೆ ಇಲ್ಲಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇನ್ನು ಲಾಟರಿ ಗೆದ್ದ ಅನಿಲ್ ಕುಮಾರ್ ಎಕ್ಸ್​​ನಲ್ಲಿ ತನ್ನ ಅಭಿಪ್ರಾಯವನ್ನು ಹೀಗೆ ಹಂಚಿಕೊಂಡಿದ್ದಾನೆ. “ನಾನು ಈ ಹಣವನ್ನು ಹೇಗೆ ಹೊಡಿಕೆ ಮಾಡಬೇಕು ಹಾಗೂ ಸರಿಯಾದ ರೀತಿಯಲ್ಲಿ ಖರ್ಚು ಮಾಡಬೇಕು ಎಂಬ ಯೋಚನೆ ಇದೆ. ಲಾಟರಿ ಗೆದ್ದ ನಂತರ ನನ್ನ ಬಳಿ ಹಣವಿದೆ ಎಂಬ ನಂಬಿಕೆ ಬಂದಿದೆ. ಸರಿಯಾದ ರೀತಿಯಲ್ಲಿ ಖರ್ಚು ಮಾಡಬೇಕು. ಹಾಗೂ ಈ ಹಣದಿಂದ ದೊಡ್ಡದನ್ನು ಮಾಡಬೇಕು ಎಂಬು ಕನಸಿದೆ” ಎಂದು ಹೇಳಿದ್ದಾನೆ. ಇದರ ಜತೆಗೆ ಈ ಹಣದಲ್ಲಿ ಬಡವರಿಗೆ ಸಹಾಯ ಮಾಡುವ ಕೆಲಸ ಕೂಡ ಮಾಡುತ್ತೇನೆ ಎಂದು ಹೇಳಿದ್ದಾನೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ