AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ವೇಶ್ಯೆಯನ್ನು 140 ಬಾರಿ ಇರಿದು ಕೊಂದಿದ್ದ ಭಾರತೀಯ; 30 ವರ್ಷದ ಬಳಿಕ ಜೀವಾವಧಿ ಶಿಕ್ಷೆ

ಮರೀನಾ ಕೊಪ್ಪೆಲ್ ಹತ್ಯೆಯಾಗಿರುವ ಫ್ಲಾಟ್‌ನಲ್ಲಿದ್ದ ಪ್ಲಾಸ್ಟಿಕ್ ಬ್ಯಾಗ್‌ನಲ್ಲಿ ಪಟೇಲ್​​​ನ ಬೆರಳಚ್ಚು ಪತ್ತೆಯಾದರೂ ಕೂಡ ಬಹಳ ದಿನವಾದರೂ ಪ್ರಕರಣವನ್ನು ಭೇದಿಸಲು ಸಾಧ್ಯವಾಗಲಿಲ್ಲ. ಆದರೆ ಇದೀಗಾ ಕೊಪ್ಪೆಲ್ ಧರಿಸಿದ್ದ ಉಂಗುರದಲ್ಲಿ ಸಿಲುಕಿಕೊಂಡಿದ್ದ ತಲೆಕೂದಲಿನ ಎಳೆಯಿಂದಾಗಿ 1994ರಲ್ಲಿ ನಡೆದ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓಲ್ಡ್ ಬೈಲೇ ನ್ಯಾಯಾಲಯ ಮಹತ್ತರ ತೀರ್ಪು ನೀಡಿದೆ.

Viral News: ವೇಶ್ಯೆಯನ್ನು 140 ಬಾರಿ ಇರಿದು ಕೊಂದಿದ್ದ ಭಾರತೀಯ; 30 ವರ್ಷದ ಬಳಿಕ ಜೀವಾವಧಿ ಶಿಕ್ಷೆ
Sandip PatelImage Credit source: Pinterest
ಅಕ್ಷತಾ ವರ್ಕಾಡಿ
|

Updated on:Feb 22, 2024 | 10:55 AM

Share

30 ವರ್ಷ ಹಳೆಯ ಲಂಡನ್ ಕೊಲೆ ಪ್ರಕರಣದಲ್ಲಿ ಭಾರತೀಯ ಮೂಲದ ಸಂದೀಪ್ ಪಟೇಲ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಆರೋಪಿ ಲೈಂಗಿಕ ಕಾರ್ಯಕರ್ತೆಯನ್ನು 140 ಬಾರಿ ಇರಿದು ಕೊಂದಿದ್ದು, 30 ವರ್ಷಗಳ ಬಳಿಕ ತನ್ನದೊಂದು ತಲೆಕೂದಲಿನ ಎಳೆಯಿಂದಾಗಿ ಸಿಕ್ಕಿಬಿದ್ದಿದ್ದಾನೆ. ಸಂದೀಪ್ ಪಟೇಲ್(51) 1994 ರಲ್ಲಿ ಲಂಡನ್‌ನ ವೆಸ್ಟ್‌ಮಿನಿಸ್ಟರ್ ಪ್ರದೇಶದಲ್ಲಿದ ಫ್ಲಾಟ್‌ವೊಂದರಲ್ಲಿ ಲೈಂಗಿಕ ಕಾರ್ಯಕರ್ತೆ ಮರೀನಾ ಕೊಪ್ಪೆಲ್(39) ಅವರನ್ನು 140 ಬಾರಿ ಇರಿದು ಕೊಂದಿದ್ದ. ತಾನು ಕೊಂದಿರುವುದಾಗಿ ಯಾವುದೇ ಸಾಕ್ಷಿ ಸಿಗದಂತೆ ಸಲೀಸಾಗಿ ಪಾರಾಗಿದ್ದ.

BBC ಯ ವರದಿಯ ಪ್ರಕಾರ, ಮರೀನಾ ಕೊಪ್ಪೆಲ್ ಹತ್ಯೆಯಾಗಿರುವ ಫ್ಲಾಟ್‌ನಲ್ಲಿದ್ದ ಪ್ಲಾಸ್ಟಿಕ್ ಬ್ಯಾಗ್‌ನಲ್ಲಿ ಪಟೇಲ್​​​ನ ಬೆರಳಚ್ಚು ಪತ್ತೆಯಾದರೂ ಕೂಡ ಬಹಳ ದಿನವಾದರೂ ಪ್ರಕರಣವನ್ನು ಭೇದಿಸಲು ಸಾಧ್ಯವಾಗಲಿಲ್ಲ. ಆದರೆ ಇದೀಗಾ ಕೊಪ್ಪೆಲ್ ಧರಿಸಿದ್ದ ಉಂಗುರದಲ್ಲಿ ಸಿಲುಕಿಕೊಂಡಿದ್ದ ತಲೆಕೂದಲಿನ ಎಳೆಯಿಂದಾಗಿ 1994ರಲ್ಲಿ ನಡೆದ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓಲ್ಡ್ ಬೈಲೇ ನ್ಯಾಯಾಲಯ ಮಹತ್ತರ ಈ ತೀರ್ಪು ನೀಡಿದೆ. ತಲೆಕೂದಲಿನ ಎಳೆಯನ್ನು ಫೋರೆನ್ಸಿಕ್ ಪರೀಕ್ಷೆಗೆ ಒಳಪಡಿಸಿದಾಗ ಸಂದೀಪ್ ಪಟೇಲ್‌ಗೆ ಎಂದು ಸ್ಪಷ್ಟವಾಗಿ ತಿಳಿದುಬಂದಿದೆ.

ಇದನ್ನೂ ಓದಿ: ವಿಚ್ಛೇದನದ ವೇಳೆ ಕಿಡ್ನಿ ವಾಪಸ್ ಕೇಳಿದ ಪತಿ

ಹೆಚ್ಚುವರಿಯಾಗಿ, ಘಟನಾ ಸ್ಥಳದಲ್ಲಿ ಪತ್ತೆಯಾದ ರಕ್ತಸಿಕ್ತ ಹೆಜ್ಜೆಗುರುತು ಪಟೇಲ್‌ಗೆ ಹೊಂದಿಕೆಯಾಗಿದೆ ಎಂದು ತನಿಖಾಧಿಕಾರಿಗಳು ದೃಢಪಡಿಸಿದ್ದಾರೆ. ಇದಲ್ಲದೇ ಕೊಲೆಯಾದ ಸ್ವಲ್ಪ ಸಮಯದ ನಂತರ ಪಟೇಲ್ ಮರೀನಾ ಅವರ ಬ್ಯಾಂಕ್ ಕಾರ್ಡ್ ಅನ್ನು ಬಳಸುವುದು ಸೇರಿದಂತೆ ಹೆಚ್ಚಿನ ಪುರಾವೆಗಳು ಅವರ ವಿರುದ್ಧದ ಪ್ರಕರಣವನ್ನು ಬಲಗೊಳಿಸಿವೆ.

ಮರೀನಾ ಅವರು ಹಲವು ವರ್ಷಗಳಿಂದ ಮಸಾಜ್​​​ ಸೆಂಟರ್​​​ ತೆರೆದಿದ್ದು, ಈ ಮೂಲಕ ಲೈಂಗಿಕ ಕೆಲಸವನ್ನು ಮಾಡುತ್ತಿದ್ದರು, ಕೊಲಂಬಿಯಾದಲ್ಲಿ ತನ್ನ ಕುಟುಂಬಕ್ಕೆ ಸಹಾಯ ಮಾಡುವ ಉದ್ದೇಶದಿಂದಾಗಿ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದಳು ಎಂದು ತಿಳಿದುಬಂದಿದೆ. ಆದರೆ 1994 ರಲ್ಲಿ ರಕ್ತದ ಮಡುವಿನಲ್ಲಿ ಕೊಲೆಯಾಗಿ ಹೋಗಿದ್ದಳು.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:52 am, Thu, 22 February 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು