AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navaratri : ರೈಲುಪ್ರಯಾಣಿಕರಿಗೆ ಶುಭಸುದ್ದಿ, ನವರಾತ್ರಿ ಪ್ರಯುಕ್ತ ವ್ರತ ವಿಶೇಷ ತಿಂಡಿತಿನಿಸುಗಳು ಲಭ್ಯ

IRCTC : ನವರಾತ್ರಿ ಪ್ರಯುಕ್ತ ವ್ರತ ಆಚರಿಸುವ ರೈಲು ಪ್ರಯಾಣಿಕರಿಗೆ ರೈಲ್ವೆ ಸಚಿವಾಲಯವು ಒಂಬತ್ತು ದಿನಗಳ ಕಾಲ ವಿಶೇಷ ತಿಂಡಿತಿನಿಸುಗಳನ್ನು ಪೂರೈಸಲು ಆರಂಭಿಸಿದೆ. ನೆಟ್ಟಿಗರು ಈ ಸೌಲಭ್ಯದಿಂದ ಪ್ರಸನ್ನರಾಗಿದ್ದಾರೆ.

Navaratri : ರೈಲುಪ್ರಯಾಣಿಕರಿಗೆ ಶುಭಸುದ್ದಿ, ನವರಾತ್ರಿ ಪ್ರಯುಕ್ತ ವ್ರತ ವಿಶೇಷ ತಿಂಡಿತಿನಿಸುಗಳು ಲಭ್ಯ
ನವರಾತ್ರಿ ಪ್ರಯುಕ್ತ ರೈಲ್ವೆ ಇಲಾಖೆಯ ವಿಶೇಷ ವ್ರತ ತಿನಿಸು
TV9 Web
| Edited By: ಶ್ರೀದೇವಿ ಕಳಸದ|

Updated on:Sep 28, 2022 | 2:56 PM

Share

Navaratri : ನವರಾತ್ರಿ ಈಗಾಗಲೇ ಆರಂಭವಾಗಿದೆ. ಎಲ್ಲೆಡೆ ದೇವಿಯ ಆರಾಧನೆ ವಿಜೃಂಭಣೆಯಿಂದ ನಡೆಯುತ್ತಿದೆ. ಅನೇಕರು ವ್ರತ-ಉಪವಾಸಗಳನ್ನು ಆಚರಿಸುತ್ತ ನಿತ್ಯಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಸಾಕಷ್ಟು ಜನ ಈ ಒಂಬತ್ತು ದಿನಗಳ ಆರಾಧನೆಗಾಗಿ ಮಾಂಸಾಹಾರ ಮತ್ತು ಮದ್ಯಪಾನದಿಂದ ದೂರವಿದ್ದಾರೆ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡ ರೈಲ್ವೆ ಇಲಾಖೆಯು ವ್ರತಕ್ಕೆ ಸಂಬಂಧಿಸಿದ ವಿಶೇಷ ತಿಂಡಿತಿನಿಸುಗಳನ್ನು ತನ್ನ ಪ್ರಯಾಣಿಕರಿಗೆ ಪೂರೈಸಲು ಪ್ರಾರಂಭಿಸಿದೆ. ಈ ವಿಷಯವನ್ನು ಟ್ವಿಟರ್​ನಲ್ಲಿ ರೈಲ್ವೆ ಸಚಿವಾಲಯವು ಪೋಸ್ಟ್ ಮಾಡಿದೆ.

‘ದಿ ಇಂಡಿಯನ್ ರೈಲ್ವೇಸ್ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಷನ್ (IRCTC) ಈ ಹಬ್ಬದ ಸಮಯದಲ್ಲಿ ವ್ರತದ ಪ್ರಯುಕ್ತ ವಿಶೇಷ ತಿಂಡಿತಿನಿಸುಗಳ ಪಟ್ಟಿಯನ್ನೇ ಹೊಂದಿದೆ. ಸೆಪ್ಟೆಂಬರ್ 26ರಿಂದ ಅಕ್ಟೋಬರ್ 5ರವರೆಗೆ ಪ್ರಯಾಣಿಕರಿಗೆ ಪೂರೈಸಲಾಗುತ್ತದೆ’ ಎಂಬ ಪೋಸ್ಟ್​ನೊಂದಿಗೆ ತಿನಿಸಿನ ಫೋಟೋ ಹಂಚಿಕೊಂಡಿದೆ ರೈಲ್ವೆ ಸಚಿವಾಲಯ. ಈ ಪೋಸ್ಟ್​ ಅನ್ನು 3,000ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ವಿವಿಧ ರೀತಿಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ವ್ರತ ಆರಾಧಕರಿಗೆ ಅನುಕೂಲವಾಗಿರುವಂಥ ಈ ನಿರ್ಧಾರವನ್ನು ಅನೇಕರು ಶ್ಲಾಘಿಸಿದ್ದಾರೆ.

ತಿಂಡಿಯ ಫೋಟೋ ನೋಡುತ್ತಿದ್ದಂತೆ ರೈಲು ಏರಬೇಕು ಅನ್ನಿಸುತ್ತಿರಬೇಕಲ್ಲ? ಶುಭದಸರಾ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:55 pm, Wed, 28 September 22

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್