AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಭಾರತವನ್ನು ತೊರೆಯುವ ಕನಸು’; ಟ್ರೋಲ್​ಗೆ ಒಳಗಾದ ವಿದ್ಯಾರ್ಥಿನಿಗೆ ಟ್ರ್ಯೂಕಾಲರ್ ಸಿಇಒ ಉದ್ಯೋಗ ಭರವಸೆ

Truecaller : ಭಾರತೀಯ ಮೂಲದ ಈ ವಿದ್ಯಾರ್ಥಿನಿ ಕೆನಡಾದ ಮಾಧ್ಯಮವೊಂದು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾಳೆ. ಟ್ರೋಲಿಗರು ಇದನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಧೃತಿಗೆಡಬೇಡ ಎಂದು ಈಕೆಯನ್ನು ಬೆಂಬಲಿಸಿದ್ದಾರೆ ಅಲನ್ ಮಮೆದಿ.

Viral Video: 'ಭಾರತವನ್ನು ತೊರೆಯುವ ಕನಸು'; ಟ್ರೋಲ್​ಗೆ ಒಳಗಾದ ವಿದ್ಯಾರ್ಥಿನಿಗೆ ಟ್ರ್ಯೂಕಾಲರ್ ಸಿಇಒ ಉದ್ಯೋಗ ಭರವಸೆ
ಕೆನಡಾದಲ್ಲಿ ಓದುತ್ತಿರುವ ಭಾರತೀಯ ಮೂಲದ ಬಯೋಟೆಕ್ ವಿದ್ಯಾರ್ಥಿನಿ ಏಕ್ತಾ
ಶ್ರೀದೇವಿ ಕಳಸದ
|

Updated on:Aug 04, 2023 | 5:37 PM

Share

Troll : ‘ಜನರು ಈಕೆ ಹೇಳಿದ್ದನ್ನು ತಪ್ಪಾಗಿ ಅರ್ಥೈಸಿಕೊಂಡು ಈಕೆಯನ್ನು ಗೇಲಿ ಮಾಡುತ್ತಿದ್ದಾರೆ. ಆದರೆ ಇದು ಸರಿಯಲ್ಲ! ಏಕ್ತಾ, ಗೇಲಿ ಮಾಡುತ್ತಿರುವವ ಮಾತನ್ನು ಕೇಳಬೇಡಿ. ನೀವು ನಿಮ್ಮ ಕನಸಿನಂತೆ ಬದುಕುತ್ತಿದ್ದೀರಿ ಎಂದು ನಾನು ಭಾವಿಸಿದ್ದೇನೆ. ನೀವು ನಿಮ್ಮ ಕೋರ್ಸ್ ಮುಗಿಸುತ್ತಿದ್ದಂತೆ ಜಗತ್ತಿನಾದ್ಯಂತ ಇರುವ ನಮ್ಮ ಯಾವುದೇ ಟ್ರ್ಯೂಕಾಲರ್​ ಕಚೇರಿಯಲ್ಲಿ ನೀವು ಕೆಲಸ ಮಾಡಬಹುದು, ಸ್ವಾಗತ.’ ಎಂದು ಟ್ರ್ಯೂಕಾಲರ್ ಕಂಪೆನಿಯ ಸಿಇಒ ಅಲನ್​ ಮಮ್ಮೇದಿ (Alan Mamedi, CEO of Truecaller) ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.

ಕೆನಡಾದಲ್ಲಿ ಜೈವಿಕ ತಂತ್ರಜ್ಞಾನದಲ್ಲಿ ಪದವಿ ಓದುತ್ತಿರುವ ಏಕ್ತಾ ಎಂಬ ಈ ವಿದ್ಯಾರ್ಥಿನಿ ಭಾರತೀಯ ಮೂಲದಾಕೆ. ಕೆನಡಾದ ಮಾಧ್ಯಮ ವರದಿಗಾರರೊಬ್ಬರು ಈಕೆಯೊಂದಿಗೆ ಸಹಜವಾಗಿ ಮಾತಿಗಿಳಿದು, ಇಲ್ಲಿಗೆ ಏಕೆ ಬಂದಿದ್ದೀರಿ, ಯಾವ ದೇಶದಿಂದ ಬಂದಿದ್ದೀರಿ, ಕೆನಡಾದಲ್ಲಿ ನಿಮಗಿಷ್ಟವಾದ ಸಂಗತಿ ಏನು? ಎಂದು ಕೇಳಿದ್ದಾರೆ, ‘ಕೆನಡಾದಲ್ಲಿ ವಿದ್ಯಾಭ್ಯಾಸ ಮಾಡುವುದು ನನ್ನ ಕನಸಾಗಿತ್ತು (ಭಾರತವನ್ನು ಬಿಟ್ಟು ಯಾವುದಾದರೂ ಹೊರದೇಶದಲ್ಲಿ ಓದಬೇಕು ಎನ್ನುವ ಅರ್ಥದಲ್ಲಿ), ಹಾಗಾಗಿ ಕೆನಡಾಗೆ ಬಂದೆ. ಬಯೋಟೆಕ್​ ಕೋರ್ಸ್ ಮುಗಿಸಿದ ತಕ್ಷಣ ನಾನು ಉದ್ಯಮದಲ್ಲಿ ತೊಡಗಿಕೊಳ್ಳಬೇಕು ಎಂದುಕೊಂಡಿದ್ದೇನೆ. ಇನ್ನು ಕೆನಡಾದಲ್ಲಿರುವ ಸುಂದರ ಪ್ರಕೃತಿದೃಶ್ಯ; ಸೂರ್ಯೋದಯ ಮತ್ತು ಸೂರ್ಯಾಸ್ತ ನೋಡುವುದು ನನ್ನಿಷ್ಟದ ಸಂಗತಿ’ ಎಂದಿದ್ದಾಳೆ.

ಇದನ್ನೂ ಓದಿ : Viral Video: ಮುಂಬೈ; ‘ಡ್ಯಾನ್ಸ್ ನಿಲ್ಲಿಸಿದರೆ ಮಾತ್ರ ಪ್ರಮಾಣಪತ್ರ’; ಪ್ರಾಧ್ಯಾಪಕರ ತಾಕೀತು

ಆದರೆ ಸಾಮಾಜಿಕ ಜಾಲತಾಣಗಳಲ್ಲಿ ‘ಡ್ರೀಮ್ ಟು ಲೀವ್ ಇಂಡಿಯಾ- Dream to leave India’ದಡಿ ಈ ವಿದ್ಯಾರ್ಥಿಯನ್ನು ಟೀಕಿಸಿ ಟ್ರೋಲ್ ಮಾಡಲಾಯಿತು. ಇದನ್ನು ಗಮನಿಸಿದ ಟ್ರ್ಯೂಕಾಲರ್ ಸಿಇಒ ಅಲನ್ ಮಮೆಡಿ  ತಮ್ಮ ಕಂಪೆನಿಯಲ್ಲಿ ಈಕೆಗೆ ಉದ್ಯೋಗದ ಭರವಸೆಯನ್ನು ನೀಡಿ ಬೆಂಬಲಿಸಿದ್ದಾರೆ. ಆದರೆ ಸಾಮಾಜಿಕ ಜಾಲತಾಣಿಗಳು ಮಮೆಡಿಯವರ ಟ್ವೀಟ್​ನಡಿ ಮಿಶ್ರ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ. ಕೆಲವರು ಇವರನ್ನು ಬೆಂಬಲಿಸಿದ್ದರೆ ಇನ್ನೂ ಕೆಲವರು ಶಬ್ದಪ್ರಹಾರಗಳಡಿ ಟೀಕಿಸಿದ್ದಾರೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 5:33 pm, Fri, 4 August 23

Follow Us
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ