AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೈ ತುಂಬಾ ಸಂಬಳ ಸಿಗುವ ಕೆಲಸವಿದೆ, ಆದ್ರೆ ಸಂತೋಷವಿಲ್ಲ; ವಿದೇಶಿ ಜೀವನವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಭಾರತೀಯ ಮಹಿಳೆ

ಹೆಚ್ಚಿನವರು ಕೈ ತುಂಬಾ ಸಂಬಳ ಉದ್ಯೋಗ ಸಿಕ್ಕರೆ ಸಾಕು ಎಂದು ಬಯಸುತ್ತಾರೆ. ಕೆಲಸ ಎಷ್ಟೇ ಕಷ್ಟವಿರಲಿ, ಲೈಫ್ ಸೆಟ್ಲ್ ಆದರೆ ಸಾಕು ಎಂದುಕೊಳ್ಳುವವರೇ ಹೆಚ್ಚು. ಆದರೆ ಇದೀಗ ಭಾರತೀಯ ಮಹಿಳೆಗೆ ಕೈ ತುಂಬಾ ಸಂಬಳ ಸಿಗುವ ಉದ್ಯೋಗದಿಂದ ಹಿಂಸೆ ಎನಿಸುತ್ತಿದೆ. ಹೌದು, ಬೆಂಗಳೂರಿನಲ್ಲಿ ತಮ್ಮ ಕಡಿಮೆ ಸಂಬಳ ಸಿಗುತ್ತಿದ್ದ ಕೆಲಸದಲ್ಲೇ ಸಂತೋಷವಾಗಿದ್ದೆ ಎಂದು ಆ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಈ ಕುರಿತಾದ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.

Video: ಕೈ ತುಂಬಾ ಸಂಬಳ ಸಿಗುವ ಕೆಲಸವಿದೆ, ಆದ್ರೆ ಸಂತೋಷವಿಲ್ಲ; ವಿದೇಶಿ ಜೀವನವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಭಾರತೀಯ ಮಹಿಳೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Sep 17, 2025 | 5:14 PM

Share

ಕೆಲವರಿಗೆ ವಿದೇಶ (foreign) ಅಂದ್ರೆ ಅದೇನೋ ವ್ಯಾಮೋಹ. ವಿದೇಶದಲ್ಲಿ ಜಾಬ್ ಸಿಕ್ಕರೆ ಲೈಫ್ ಸೆಟ್ಲ್ ಆದಂತೆ ಎನ್ನುವುದು ಹೆಚ್ಚಿನವರ ಭಾವನೆ. ಹೀಗಾಗಿ ಓದು ಮುಗಿಯುತ್ತಿದ್ದಂತೆ ಉದ್ಯೋಗಕ್ಕಾಗಿ ವಿದೇಶಕ್ಕೆ ಹಾರುತ್ತಾರೆ. ಆದರೆ ನಾವು ಅಂದುಕೊಂಡಂತೆ ಅವರ ಬದುಕು ಇರಲ್ಲ ಎನ್ನುವುದು ಈ ಮಹಿಳೆ ಯ ಮಾತು ಕೇಳಿದ್ರೆ ನಿಮ್ಗೆ ಅನಿಸಬಹುದು. ಕಾರ್ಪೋರೇಟ್ ಜೀವನದಲ್ಲಿ ಹೆಚ್ಚು ಸಂಬಳವಿದ್ರೂ ಆ ಕೆಲಸದ ಸಹವಾಸ ಸಾಕಪ್ಪ ಸಾಕು ಎಂದು ಅನಿಸಿದ್ದು. ಇದೀಗ ದುಬೈನಲ್ಲಿ ನೆಲೆಸಿರುವ ಭಾರತೀಯ ಮಹಿಳೆ ಸೀಮಾ ಪುರೋಹಿತ್ (Seema Purohit) ಅವರು ಅಧಿಕ ಸಂಬಳ ಸಿಗುವ ಈ ಕೆಲಸವು ನೆಮ್ಮದಿ ನೀಡುತ್ತಿಲ್ಲ. ಕಡಿಮೆ ಸಂಬಳವಾದ್ರೂ ಬೆಂಗಳೂರಿನ ಜೀವನವೇ ಚೆನ್ನಾಗಿತ್ತು ವಾಸ್ತವ ಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ.

seemapurohit018 ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದು, ಬೆಂಗಳೂರಿನಲ್ಲಿ 18000 ಸಂಬಳ ಸಿಗುವ ಕೆಲಸದಿಂದ ನಾನು ಸಂತೋಷವಾಗಿದ್ದೆ. ಅದು ನನ್ನ ಮೊದಲ ಕೆಲಸವಾಗಿತ್ತು. ಹೆಚ್ಚಿನ ಅವಕಾಶ ಹಾಗೂ ಸಂಬಳ ಸಿಗುತ್ತಿದ್ದಂತೆ ದುಬೈಗೆ ತೆರಳಿದೆ. ಆದರೆ ಕಾರ್ಪೊರೇಟ್ ಜಗತ್ತಿನಲ್ಲಿ ಅಧಿಕ ಸಂಬಳವೇನೋ ಸಿಕ್ಕಿತು. ಬೆಂಗಳೂರಿನಲ್ಲಿ ಸಾಧಾರಣ ಮಾಸಿಕ ಸಂಬಳವನ್ನು ಗಳಿಸುವಾಗ ಸಿಗುತ್ತಿದ್ದ ತೃಪ್ತಿಯ ಭಾವನೆಯನ್ನು ವಿದೇಶದಲ್ಲಿನ ಈ ಅಧಿಕ ಸಂಬಳದ ಕೆಲಸದಲ್ಲಿ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
ಸಹೋದರನ ಮದುವೆಗೆ ರಜೆ ಕೊಡದ ಬಾಸ್, ಜಾಬ್ ರಿಸೈನ್ ಮಾಡಿದ ಉದ್ಯೋಗಿ
Image
ಇಂದು ವಾರ್ಷಿಕ ಸಂಬಳವೇ 24 ಲಕ್ಷ ರೂ; ಯಶಸ್ಸಿನ ಹಾದಿ ಬಿಚ್ಚಿಟ್ಟ ಯುವಕ
Image
ಅಮೆರಿಕದಲ್ಲಿ ಶಿಕ್ಷಣ ಪಡೆದ್ರು ಸಿಗದ ಉದ್ಯೋಗ, ಈ ಯುವಕನ ಪರಿಸ್ಥಿತಿ ನೋಡಿ
Image
ನಿಮ್ಗೆ ಈ ಕಂಪನಿಯಲ್ಲಿ ಕೆಲಸ ಸಿಗಲ್ಲ ಎಂದು ಯುವತಿಗೆ ಹೇಳಿದ ಸಂದರ್ಶಕ

ವೈರಲ್ ವಿಡಿಯೋ ಇಲ್ಲಿದೆ ನೋಡಿ

View this post on Instagram

A post shared by Seema (@seemapurohit018)

ಈಗಿನ ಕಾಲದಲ್ಲಿ ಉತ್ತಮ ಅವಕಾಶಗಳು ಅಧಿಕ ಸಂಬಳ ಸಿಗುವ ಉದ್ಯೋಗ ಹುಡುಕುತ್ತಾ ತಮ್ಮ ನೆಮ್ಮದಿ ಕಳೆದುಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ತನ್ನ ಮೊದಲ ಕೆಲಸದಲ್ಲಿ ತಿಂಗಳಿಗೆ ಕೇವಲ 18,000 ರೂ ಗಳಿಸುತ್ತಿದ್ದ ಸಮಯದಲ್ಲಿ ನಾನೇ ವಿಶ್ವದ ಶ್ರೀಮಂತ ಹುಡುಗಿ ಎನ್ನುವ ಭಾವನೆಯಿತ್ತು. ಆ ಸಮಯದಲ್ಲಿ ಕಡಿಮೆ ಸಂಬಳ ಸಿಗುತ್ತಿದ್ರೂ, ಬಾಡಿಗೆ ಪಾವತಿಸಲು, ಶಾಪಿಂಗ್, ಆಹಾರ ಸೇವಿಸಲು ಹೀಗೆ ಖರ್ಚು ಕಳೆದು ತಿಂಗಳ ಕೊನೆಯಲ್ಲಿ ಸ್ವಲ್ಪ ಹಣವನ್ನು ಉಳಿತಾಯ ಮಾಡುತ್ತಿದ್ದೆದ್ದೆ. ಆ ಕ್ಷಣವು ನನ್ನ ಜೀವನದ ಸಂತೋಷದ ಕ್ಷಣಗಳಲ್ಲಿ ಒಂದು. ಆದರೆ ಇಂದು ದುಬೈಯಲ್ಲಿ ನನಗೆ ಕೈ ತುಂಬಾ ಸಂಬಳ ದೊರೆಯುತ್ತಿದೆ, ಸಂತೋಷವಿಲ್ಲ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ:Viral: ಸಹೋದರನ ಮದುವೆಗೆ ರಜೆ ಕೊಡದ ಬಾಸ್, ಜಾಬ್ ರಿಸೈನ್ ಮಾಡಿದ ಉದ್ಯೋಗಿ

ಈ ವಿಡಿಯೋ ಎಪ್ಪತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಈ ರೀತಿ ಅನುಭವ ನಮಗೂ ಆಗಿದೆ. ಸಂಬಳ ಹೆಚ್ಚಾದಷ್ಟು ನೆಮ್ಮದಿ ಹಾಳಾಗುತ್ತದೆ ಎಂದು ಹೇಳಿದ್ದಾರೆ. ಮತ್ತೊಬ್ಬರು ಬಹುಷಃ ನೀವು ದುಬೈನಲ್ಲಿ ಹೆಚ್ಚು ಖರ್ಚು ಮಾಡುತ್ತಿರಬೇಕು ಅದಕ್ಕಾಗಿ ನಿಮಗೆ ಉಳಿತಾಯವು ಕಷ್ಟ ಎನಿಸುತ್ತಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರ ದುಬೈನಲ್ಲಿನ ಜೀವನವು ನಿಮ್ಮ ಮಾನಸಿಕ ನೆಮ್ಮದಿಯ ಮೇಲೆ ಪರಿಣಾಮ ಬೀರುತ್ತಿದ್ದರೆ, ಮನೆಗೆ ಹಿಂತಿರುಗಿ. ಭಾರತದಲ್ಲಿಯೂ ನಿಮಗೆ ಉತ್ತಮ ಉದ್ಯೋಗ ಸಿಗುತ್ತದೆ, ನಿಮ್ಮ ಸಂತೋಷವನ್ನು ತ್ಯಾಗ ಮಾಡಬೇಡಿ ಎಂದು ಸಲಹೆ ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Wed, 17 September 25

Follow Us
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ